ವೈದ್ಯರ ಮೇಲೆ ಹಲ್ಲೆ | ಪ್ರಕರಣ ರದ್ದು ಕೋರಿದ್ದ ಅನಂತಕುಮಾರ್ ಹೆಗಡೆ ಅರ್ಜಿ ವಜಾ: ಹೈಕೋರ್ಟ್

Date:

ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕೇಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಅನಂತಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲಾಗಿದೆ. ಆ ಪ್ರಕರಣವನ್ನು ರದ್ದು ಕೋರಿ ಅನಂತಕುಮಾರ್ ಹೆಗಡೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

2017ರ ಜನವರಿ 2ರಂದು ಅನಂತ್‌ ಕುಮಾರ್ ಹೆಗಡೆ ಅವರು ತಮ್ಮ ತಾಯಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಟಿಎಸ್‌ಎಸ್‌ಎಸ್‌ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ, ಅನಂತ ಕುಮಾರ್ ಹೆಗಡೆ ಮತ್ತು ಅವರ ಸಹೋದರ ಈಶ್ವರ್ ಎಸಳೆ ಅವರು ಆಸ್ಪತ್ರೆಯ ವೈದ್ಯ ಡಾ. ಮಧುಕೇಶ್ವರ್ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೆ, ಆಸ್ಪತ್ರೆ ಸಿಬ್ಬಂದಿಗಳಾದ ಬಾಲಚಂದ್ರ ಭಟ್ಟ, ರಾಹುಲ್ ಮಾಶಲೇಕರ್ ಅವರ ಮೇಲೂ ಹಲ್ಲೆಗೈದ್ದರು.

ಡಾ. ಮಧುಕೇಶ್ವರ್ ಅವರು ಅನಂತ್ ಕುಮಾರ್ ಹೆಗಡೆ ಮತ್ತು ಈಶ್ವರ್ ವಿರುದ್ಧ ದೂರು ದಾಖಲಿಸಿದ್ದರು. ಜನವರಿ 3ರಂದು ಆಸ್ಪತ್ರೆಯ ಸಿಸಿಟಿವಿ ವಿಡಿಯೊ ತುಣುಕುಗಳನ್ನು ಪರಿಶೀಲಿಸಿದ್ದ, ಶಿರಸಿ ನ್ಯೂ ಮಾರ್ಕೆಟ್ ಪೊಲೀಸ್‌ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ಕರ್ನಾಟಕ ವೈದ್ಯೋಪಚಾರ ಸಿಬ್ಬಂದಿಯ ಮೇಲೆ ಹಿಂಸಾಚಾರ ಹಾಗೂ ವೈದ್ಯೋಪಚಾರ ಸಂಸ್ಥೆಗಳ ಆಸ್ತಿಗೆ ಹಾನಿ ನಿಷೇಧ ಕಾಯ್ದೆ ಸೆಕ್ಷನ್ 4 ಮತ್ತು ಐಪಿಸಿ ಸೆಕ್ಷನ್‌ 506, 341, 34, 323 ಅಡಿ ಎಫ್ಐಆರ್ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡಸಿದ್ದ ಹೈಕೋರ್ಟ್‌, 2017ರ ಸೆಪ್ಟೆಂಬರ್ 20ರಂದು ಪ್ರಕರಣದ ತನಿಖೆಗೆ ತಡೆ ನೀಡಿ ಮಧ್ಯಂತರ ಆದೇಶ ನೀಡಿತ್ತು. ಬಳಿಕ, ಹಲವು ಬಾರಿ ತಡೆಯಾಜ್ಞೆಯನ್ನು ವಿಸ್ತರಿಸಲಾಗಿತ್ತು.

ಈ ಲೇಖನ ಓದಿದ್ದೀರಾ?: RSS- ದೇಶಭಕ್ತರ ಸಂಘಟನೆಯೇ! ಯಶವಂತ್ ಶಿಂದೆ ಅಫಿಡವಿಟ್ ಹೇಳುತ್ತಿರುವುದೇನು?

ಆದರೆ. ಇದೇ ವರ್ಷದ ಆಗಸ್ಟ್‌ ನಡೆದಿದ್ದ ವಿಚಾರಣೆ ವೇಳೆ, ಅನಂತ್‌ ಕುಮಾರ್ ಹೆಗಡೆ ಪರವಾಗಿ ನ್ಯಾಯಾಲಯಕ್ಕೆ ಯಾರೂ ಹಾಜರಾಗಿರಲಿಲ್ಲ. ಹೀಗಾಗಿ, ‘ವಿಚಾರಣೆಯ ಪ್ರಕ್ರಿಯೆಗಳಲ್ಲಿ ಶ್ರದ್ಧೆಯ ಕೊರತೆ ಇದೆ’ ಎಂದಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು ಪ್ರಚಾರಣೆಗೆ ಹಾಜರಾಗಲು ಕೊನೆಯ ಬಾರಿಯ ಅವಕಾಶ ನೀಡಿತ್ತು.

ಆದಾಗ್ಯೂ, ಈವರೆಗೆ ಅನಂತ್‌ ಕುಮಾರ್ ಹೆಗಡೆ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್, “ಯಾರೂ ಹಾಜರಾಗಿಲ್ಲ ಎಂದ ಮೇಲೆ ನಾನು ಅರ್ಜಿಯನ್ನು ವಜಾಗೊಳಿಸುತ್ತೇನೆ” ಎಂದು ಹೇಳಿದ್ದಾರೆ. ಹೆಗಡೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಇದೀಗ, ಪ್ರಕರಣವು ಪೊಲೀಸ್‌ ತನಿಖೆಗೆ ಮುಕ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...