ಲೋಕಸಭೆಯಲ್ಲಿ ಮೈಕ್ ದನಿ ಕಡಿತ; ಪ್ರಧಾನಿ ಮೋದಿ ವಿರುದ್ಧ ಹಕ್ಕುಚ್ಯುತಿ ನೋಟಿಸ್

Date:

  • ರಾಜ್ಯಸಭೆಯಲ್ಲಿ ರಾಹುಲ್ ಟೀಕಿಸಿದ್ದ ಪ್ರಧಾನಿ ಮೋದಿ
  • ಮಾರ್ಚ್‌ 17ಕ್ಕೆ ರಾಜ್ಯಸಭೆ, ಲೋಕಸಭೆ ಕಲಾ ಮುಂದೂಡಿಕೆ

ಬಜೆಟ್ ಅಧಿವೇಶನದ ಐದನೇ ದಿನವಾದ ಶುಕ್ರವಾರದ (ಮಾರ್ಚ್ 17) ಲೋಕಸಭೆ ಮತ್ತು ರಾಜ್ಯಸಭೆಗಳ ಕಲಾಪ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳ ತಿಕ್ಕಾಟದಲ್ಲಿ ವ್ಯರ್ಥವಾಗಿದೆ.

ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದ ಸಮಯದಲ್ಲಿ ಲೋಕಸಭೆಯಲ್ಲಿ ಮೈಕ್ನ ದನಿಯನ್ನು ಸ್ತಬ್ದಗೊಳಿಸಲಾಗಿದೆ. ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಸರ್ಕಾರ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಪಕ್ಷಗಳ ಪ್ರತಿಭಟನೆಯ ದನಿ ಅಡಗಿಸಲು ಸರ್ಕಾರ ಸಂಸತ್ತಿನಲ್ಲಿ ಮೈಕ್‌ನ ಧ್ವನಿಯನ್ನು ನಿಲ್ಲಿಸಿದೆ. ಈ ಕುರಿತ ದೃಶ್ಯಾವಳಿಯನ್ನು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಇತರ ಪ್ರತಿಪಕ್ಷಗಳೂ ಲೋಕಸಭೆಯ ಮೈಕ್ ಧ್ವನಿ ಸ್ತಬ್ದಗೊಳಿಸಿರುವುದನ್ನು ವಿರೋಧಿಸಿದ್ದಾರೆ.

ಲೋಕಸಭೆಯಲ್ಲಿ ಕಲಾಪ ಪ್ರಾರಂಭವಾದ ಸ್ವಲ್ಪ ಸಮಯದ ನಂತರ ಪ್ರತಿಪಕ್ಷಗಳ ಪ್ರತಿಭಟನೆಯ ಸಮಯದಲ್ಲಿ ಮೈಕ್‌ನಲ್ಲಿ ದನಿ ನಿಂತುಹೋಗಿದೆ. ಲೋಕಸಭೆಯ ಸಭಾಧ್ಯಕ್ಷ ಓಂ ಬಿರ್ಲಾ ಅವರ ಕುರ್ಚಿಯ ಬಳಿ ಪ್ರತಿಪಕ್ಷದ ಸಂಸದರು ಪ್ರತಿಭಟನೆ ನಡೆಸುತ್ತಿದ್ದಾಗ ಸುಮಾರು 20 ನಿಮಿಷಗಳ ಕಾಲ ಮೈಕ್‌ನಲ್ಲಿ ಯಾವುದೇ ಸದ್ದು ಕೇಳಲಿಲ್ಲ. ಪ್ರತಿಪಕ್ಷದ ಸದಸ್ಯರಿಗೆ ಘೋಷಣೆ ಕೂಗುವುದನ್ನು ನಿಲ್ಲಿಸಿ ಎಂದು ಓಂ ಬಿರ್ಲಾ ಅವರು ಹೇಳಿದ್ದು, ನಂತರ ಸದನವನ್ನು ದಿನದ ಮಟ್ಟಿಗೆ ಮುಂದೂಡುವಂತೆ  ಆಡಳಿತ ಪಕ್ಷದ ಸದಸ್ಯರು ಒತ್ತಾಯಿಸಿದ ಧ್ವನಿ ಮಾತ್ರ ಕೇಳಿಸಿದೆ. ಆದರೆ ಧ್ವನಿ ಕೇಳಿಸದೇ ಇರುವ ಬಗ್ಗೆ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿಲ್ಲ.

“ಮೊದಲು ಮೈಕ್‌ಗಳ ಸದ್ದು ಮಾತ್ರ ಅಡಗಿತ್ತು. ಈಗ ಸದನದ ಕಲಾಪಗಳ ಧ್ವನಿಯನ್ನು ಕಡಿತಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಸ್ನೇಹಿತನಿಗಾಗಿ ಲೋಕಸಭೆ ಧ್ವನಿಯನ್ನು ಅಡಗಿಸಲಾಗಿದೆ” ಎಂದು ಕಾಂಗ್ರೆಸ್  ಟ್ವೀಟ್ ಮಾಡಿದೆ.

“ಅದಾನಿ-ಹಿಂಡೆನ್‌ಬರ್ಗ್ ವಿವಾದಕ್ಕೆ ಸಂಬಂಧಿಸಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸುತ್ತಿರುವ ಪ್ರತಿಪಕ್ಷಗಳ ಧ್ವನಿಯನ್ನು ಮೌನಗೊಳಿಸಲು ಮೈಕ್‌ಗಳ ಸದ್ದು ನಿಲ್ಲಿಸಲಾಗಿದೆ” ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡದಿರಲು ಆಡಳಿತಾರೂಢ ಬಿಜೆಪಿ ನಿರ್ಧರಿಸಿದೆ. “ಲಂಡನ್‌ನಲ್ಲಿ ರಾಹುಲ್ ಗಾಂಧಿ ‘ಭಾರತದ ಪ್ರಜಾಪ್ರಭುತ್ವ ದಾಳಿಗೆ ಒಳಗಾಗಿದೆ’ ಎಂಬ ಹೇಳಿಕೆ ನೀಡಿದ್ದಾರೆ. ಇದಕ್ಕೆ ಕ್ಷಮೆಯಾಚಿಸದ ಹೊರತು ಮಾತನಾಡಲು ಬಿಡುವುದಿಲ್ಲ” ಎಂದು ಬಿಜೆಪಿ ಪಟ್ಟುಹಿಡಿದಿದೆ.

“ಲಂಡನ್ ಭಾಷಣದ ಬಗ್ಗೆ ಆಡಳಿತ ಸರ್ಕಾರ ಸಂಸತ್ತಿನಲ್ಲಿ ಹೊರಿಸಿರುವ ಆರೋಪಗಳಿಗೆ ಸಂಸತ್ತಿನಲ್ಲಿಯೇ ಉತ್ತರಿಸುತ್ತೇನೆ. ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಿದರೆ, ಪ್ರತಿಕ್ರಿಯೆ ನೀಡುತ್ತೇನೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಹಕ್ಕುಚ್ಯುತಿ ನೋಟಿಸ್

ಕಾಂಗ್ರೆಸ್‌ ಸಂಸದ ಕೆ ಸಿ ವೇಣುಗೋಪಾಲ್‌ ಅವರು ಪ್ರಧಾನಿ ಮೋದಿ ಅವರ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದ್ದಾರೆ. ಕಳೆದ ತಿಂಗಳು ರಾಜ್ಯಸಭೆಯಲ್ಲಿ ಮಾಡಿದ ಭಾಷಣದ ವೇಳೆ ಪ್ರಧಾನಿ ಮೋದಿ ಅವರು ಜವಾಹರಲಾಲ್ ನೆಹರು ಅವರ ಸರ್‌ನೇಮ್ ಮುಂದಿಟ್ಟು ರಾಹುಲ್ ಗಾಂಧಿ ಮತ್ತು ಅವರ ಕುಟುಂಬದ ಮೇಲೆ ವೈಯಕ್ತಿಕ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ ಈ ನಿರ್ಣಯ ಮಂಡಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಸಂಸತ್ತು ಕಲಾಪ ಮುಂದೂಡಿಕೆ; ವಿರೋಧ ಪಕ್ಷಗಳ ಪ್ರತಿಭಟನೆ, ಸೋನಿಯಾ, ಖರ್ಗೆ ಭಾಗಿ

“ಗಾಂಧಿ ಕುಟುಂಬದವರು ‘ನೆಹರು’ ಎಂಬ ಉಪನಾಮವನ್ನು ಏಕೆ ಆರಿಸಿಕೊಂಡಿಲ್ಲ. ನೆಹರು ಹೆಸರನ್ನು ಇಟ್ಟುಕೊಳ್ಳಲು ಅವರಿಗೆ ನಾಚಿಕೆ ಎನಿಸುತ್ತಿದೆಯೇ” ಎಂದು ಪ್ರಧಾನಿ ಮೋದಿ ಭಾಷಣದಲ್ಲಿ ಪ್ರಶ್ನಿಸಿದ್ದರು.

“ಪ್ರಧಾನಿ ಪ್ರಶ್ನೆಯೇ ಅಸಂಬದ್ಧ. ತಂದೆಯ ಸರ್ ನೇಮ್ ಅನ್ನು ಮಗಳು ತೆಗೆದುಕೊಳ್ಳುವುದಿಲ್ಲ ಎಂದು ಪ್ರಧಾನಿ ಮೋದಿ ಅವರಿಗೆ ಚೆನ್ನಾಗಿ ತಿಳಿದಿತ್ತು. ಅದು ತಿಳಿದಿದ್ದರೂ, ಅವರು ಉದ್ದೇಶಪೂರ್ವಕವಾಗಿ ಅವಹೇಳನ ಮಾಡಿದ್ದರು. ಪ್ರಧಾನಿ ಮೋದಿ ಅವರ ಹೇಳಿಕೆಯ ಧ್ವನಿಯು ಅವಮಾನಕರ ಮತ್ತು ಅವಹೇಳನಕಾರಿ” ಎಂದು ಕೆಸಿ ವೇಣುಗೋಪಾಲ್‌ ಹಕ್ಕುಚ್ಯುತಿ ನಿರ್ಣಯದಲ್ಲಿ ಆರೋಪಿಸಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...