ಅಕಾಡೆಮಿ, ಪ್ರಾಧಿಕಾರದಂತಹ ಸಾಂಸ್ಕೃತಿಕ ಸಂಸ್ಥೆಗಳಿಗೆ ಸ್ವಾಯತ್ತತೆ ಅಗತ್ಯ: ಬರಗೂರು ರಾಮಚಂದ್ರಪ್ಪ

Date:

ಇತ್ತೀಚೆಗೆ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರ ಸಭೆ ನಡೆಸಿರುವುದಕ್ಕೆ ಆಕ್ಷೇಪ ಎತ್ತಿರುವ ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ, “ಅಕಾಡೆಮಿ, ಪ್ರಾಧಿಕಾರದಂತಹ ಸಾಂಸ್ಕೃತಿಕ ಸಂಸ್ಥೆಗಳಿಗೆ ಸ್ವಾಯತ್ತತೆ ಅಗತ್ಯವಿದೆ” ಎಂದು ತಿಳಿಸಿದ್ದಾರೆ.

ಈ ಬೆಳವಣಿಗೆ ಬಗ್ಗೆ ಮಾಧ್ಯಮ ಪ್ರಕಟಣೆಯ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಬರಗೂರು, “ಅಕಾಡೆಮಿ ಮತ್ತು ಪ್ರಾಧಿಕಾರಗಳ ಸ್ವಾಯತ್ತತೆಯ ವಿಷಯ ಈಗ ಮುನ್ನಲೆಗೆ ಬಂದಿದೆ. ಈ ಸಂಸ್ಥೆಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ಸರ್ಕಾರವೇ ನಾಮ ನಿರ್ದೇಶನ ಮಾಡುತ್ತದೆ. ಆದರೆ ಈ ನಾಮ ನಿರ್ದೇಶನವು ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಅಕಾಡೆಮಿ ಮತ್ತು ಪ್ರಾಧಿಕಾರಗಳು ಸರ್ಕಾರದ ಅಂಗಸಂಸ್ಥೆಗಳೇ ಹೊರತು ರಾಜಕೀಯ ಪಕ್ಷದ ಅಂಗ ಸಂಸ್ಥೆಗಳಲ್ಲ” ಎಂದು ತಿಳಿಸಿದ್ದಾರೆ.

“ಅಕಾಡೆಮಿ ಮತ್ತು ಪ್ರಾಧಿಕಾರಗಳು ನಿಗಮ ಮಂಡಳಿಗಳಂತೆ ಅಲ್ಲವೇ ಅಲ್ಲ. ನಿಗಮ ಮಂಡಳಿಗಳಿಗೆ ಸಾಮಾನ್ಯವಾಗಿ ಸರ್ಕಾರಗಳು ಪಕ್ಷದ ಕಾರ್ಯಕರ್ತರು ಅಥವಾ ಮುಖಂಡರನ್ನು ನಾಮ ನಿರ್ದೇಶನ ಮಾಡುತ್ತವೆ. ಅಕಾಡೆಮಿ ಪ್ರಾಧಿಕಾರಗಳ ನಾಮ ನಿರ್ದೇಶನಕ್ಕೆ ಪಕ್ಷನಿಷ್ಠೆ ಪ್ರಮುಖ ಮಾನದಂಡವಲ್ಲ. ಹೀಗಾಗಿ ಸರ್ಕಾರದ ಈ ಸಾಂಸ್ಕೃತಿಕ ಸಂಸ್ಥೆಗಳಿಗೆ ಸ್ವಾಯತ್ತತೆ ಅಗತ್ಯ. ಈ ಸೂಕ್ಷ್ಮತೆಯ ಅರಿವು ಸಂಬಂಧಪಟ್ಟವರಿಗೆ ಇರಬೇಕು” ಎಂದು ಹಿರಿಯ ಸಾಹಿತಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರಂಭದಲ್ಲಿ ‘ಅಕಾಡೆಮಿಗಳ ಸನ್ನದು’ ಎಂಬ ನಿಯಮಾವಳಿ ಇತ್ತು. ಸರ್ಕಾರದ ಮಧ್ಯ ಪ್ರವೇಶ ಕಡಿಮೆಯಿತ್ತು. ಆನಂತರ 14.3.2005ರಲ್ಲಿ ಈ ಸನ್ನದುವನ್ನು ಪರಿಷ್ಕರಿಸಿ ‘ಅಕಾಡೆಮಿಗಳ ನಿಯಾಮವಳಿ’ಯನ್ನು ಮರು ರಚನೆ ಮಾಡಲಾಯಿತು. ಕೆಲವು ಅಂಶಗಳಲ್ಲಿ ಅಧಿಕಾರಿಗಳ ನಿಯಂತ್ರಣಕ್ಕೆ ಅವಕಾಶ ಕಲ್ಪಿಸಲಾಯಿತು. ಸಾಂಸ್ಕೃತಿಕ ನಿಯಂತ್ರಣದ ಬದಲು ಸಂಪೂರ್ಣ ಸಾಂಸ್ಕೃತಿಕ ಸ್ವಾಯತ್ತತೆ ನೀಡಬೇಕೆಂದು ನನ್ನ ನೇತೃತ್ವದ ಸಾಂಸ್ಕೃತಿಕ ನೀತಿಯಲ್ಲಿ ಶಿಫಾರಸು ಮಾಡಲಾಗಿತ್ತು. ಈ ಹಿಂದೆ ಇದ್ದ ಇದೇ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವು ಸಚಿವ ಸಂಪುಟದಲ್ಲಿ ಚರ್ಚಿಸಿ, ಸಂಪುಟ ಉಪ ಸಮಿತಿಯ ಪರಿಶೀಲನೆಗೆ ಒಪ್ಪಿಸಿ, ಅನಂತರ ನಮ್ಮ ಸಮಿತಿಯ ಅನೇಕ ಶಿಫಾರಸುಗಳನ್ನು ಒಪ್ಪಿ ಆದೇಶವನ್ನು ಹೊರಡಿಸಿತ್ತು” ಎಂದು ಪ್ರೊ. ಬರಗೂರು ರಾಮಚಂದ್ರಪ್ಪ ನೆನಪಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ರೈಲು ಅಪಘಾತ : ಊಟಕ್ಕಿಲ್ಲದ ಉಪ್ಪಿನಕಾಯಿಯಂತಾದ ಮೋದಿ ಸರ್ಕಾರದ ‘ಕವಚ್’ ತಂತ್ರಜ್ಞಾನ!

“ದಿನಾಂಕ 10.10.2017ರ ಈ ಆದೇಶದಲ್ಲಿ ‘ಅಕಾಡೆಮಿಯ ಅಂಗರಚನೆ-ನಿಯಮಾವಳಿ ಮತ್ತು ಹಣಕಾಸಿನ ನಿರ್ವಹಣೆಯಲ್ಲಿ ನಿಯಾಮಾನುಸಾರ ಕಾರ್ಯಕ್ರಮಗಳನ್ನು ರೂಪಿಸುವ ಮತ್ತು ಅನುಷ್ಠಾನ ಮಾಡುವ ಸ್ವಾಯತ್ತತೆಯನ್ನು ಅಕಾಡೆಮಿಗಳಿಗೆ ಒದಗಿಸುವುದು’ ಎಂದು ಸ್ಪಷ್ಟವಾಗಿ ದಾಖಲಿಸಲಾಗಿದೆ. ಪ್ರಾಧಿಕಾರಗಳಿಗೆ ಶಾಸನಬದ್ಧ ಅಧಿಕಾರವಿದೆ. ಆದ್ದರಿಂದ ಸ್ವಾಯತ್ತತೆಯು ಅಕಾಡೆಮಿ ಮತ್ತು ಪ್ರಾಧಿಕಾರಗಳ ಅವಿಭಾಜ್ಯ ಅಂಗ ಎನ್ನುವುದನ್ನು ಸರ್ಕಾರ, ಪಕ್ಷ ಮತ್ತು ಈ ಸಾಂಸ್ಕೃತಿಕ ಸಂಸ್ಥೆಗಳ ಪದಾಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಸ್ವಾಯತ್ತತೆ ವಿಷಯದಲ್ಲಿ ರಾಜಿ ಸಲ್ಲದು” ಎಂದು ಬರಗೂರು ರಾಮಚಂದ್ರಪ್ಪ ಅಭಿಪ್ರಾಯಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...