ಉ. ಪ್ರದೇಶ | ಮುಸ್ಲಿಂ ಪ್ರಯಾಣಿಕರ ನಮಾಝ್‌ಗೆ ಅವಕಾಶ ನೀಡಿ ಅಮಾನತಾಗಿದ್ದ ಬಸ್ ಕಂಡಕ್ಟರ್ ಆತ್ಮಹತ್ಯೆ

Date:

  • ಮೋಹಿತ್ ಯಾದವ್, ಆತ್ಮಹತ್ಯೆಗೆ ಶರಣಾದ ಯುಪಿಎಸ್‌ಆರ್‌ಟಿಸಿಯ ಬಸ್ ಕಂಡಕ್ಟರ್
  • ಕಂಡಕ್ಟರ್ ಮತ್ತು ಚಾಲಕನ ಅಮಾನತು ಮಾಡಿದ್ದ ಸಾರಿಗೆ ಇಲಾಖೆ

ಇಬ್ಬರು ಮುಸ್ಲಿಂ ಪ್ರಯಾಣಿಕರಿಗೆ ನಮಾಝ್ ಮಾಡಲು ಬಸ್‌ ನಿಲ್ಲಿಸಿದ್ದಕ್ಕಾಗಿ ಅಮಾನತುಗೊಂಡಿದ್ದ ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಮೈನ್‌ಪುರಿ ಬಳಿ ತನ್ನ ನಿವಾಸದ ಪಕ್ಕದಲ್ಲಿ ರೈಲ್ವೆ ಹಳಿಯಲ್ಲಿ ಕಂಡಕ್ಟರ್ ಮೋಹಿತ್ ಯಾದವ್ (32) ಅವರ ಮೃತದೇಹ ಪತ್ತೆಯಾಗಿದೆ. ಇದು ಸದ್ಯ ವಿವಾದಕ್ಕೆ ಕಾರಣವಾಗಿದೆ. ಬಸ್ ಕಂಡಕ್ಟರ್ ಸಾವನ್ನು ಖಂಡಿಸಿ ಬರೇಲಿಯಲ್ಲಿ ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.

ಮೋಹಿತ್ ಯಾದವ್ ಕೌಶಂಬಿಯಿಂದ ದೆಹಲಿಗೆ ತೆರಳುತ್ತಿದ್ದ ಉತ್ತರ ಪ್ರದೇಶದ ಸಾರಿಗೆ ಇಲಾಖೆ (ಯುಪಿಎಸ್‌ಆರ್‌ಟಿಸಿ)ಯ ಬಸ್‌ನ ಕಂಡಕ್ಟರ್ ಆಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿಯಿಂದ ಕೌಶಂಬಿಗೆ ತೆರಳುವಾಗ ರಾಂಪುರ ಬಳಿ ಇತರೆ ಪ್ರಯಾಣಿಕರಿಗೆ ಮೂತ್ರ ವಿಸರ್ಜಿಸಲು ನಿಲ್ಲಿಸಿದ್ದರು. ಇದೇ ವೇಳೆ, ಇಬ್ಬರು ಮುಸ್ಲಿಂ ಪ್ರಯಾಣಿಕರು ನಮಾಝ್ ಮಾಡಲು ಅವಕಾಶ ಕೇಳಿದ್ದರು. ಕಂಡಕ್ಟರ್ ಮೋಹಿತ್ ಯಾದವ್ ಅವರು ಚಾಲಕ ಕೆ ಪಿ ಸಿಂಗ್ ಅವರಿಗೆ ಎರಡು ನಿಮಿಷಗಳ ಕಾಲ ಬಸ್ ನಿಲ್ಲಿಸುವಂತೆ ಹೇಳಿದ್ದರು ಮತ್ತು ಇಬ್ಬರು ಪ್ರಯಾಣಿಕರಿಗೆ ನಮಾಝ್ ಮಾಡಲು ಅವಕಾಶ ನೀಡಿದ್ದರು.

ಕೆಲವು ಪ್ರಯಾಣಿಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ವಿಡಿಯೋ ಕೂಡ ಮಾಡಿದ್ದರು. ಜೂನ್ 3, 2023ರಂದು ಈ ಘಟನೆ ಸಂಭವಿಸಿದ್ದು, ವಿಡಿಯೋ ದೂರಿನ ಆಧಾರದ ಮೇಲೆ ಕಂಡಕ್ಟರ್ ಮತ್ತು ಚಾಲಕನನ್ನು ಉತ್ತರ ಪ್ರದೇಶದ ಸಾರಿಗೆ ಇಲಾಖೆ (ಯುಪಿಎಸ್‌ಆರ್‌ಟಿಸಿ) ಅಧಿಕಾರಿಗಳು ಅಮಾನತು ಮಾಡಿದ್ದರು.

ಬಸ್‌ ನಿಲ್ಲಿಸಿ ಅಮಾನತಾಗಿದ್ದ ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮಾನತುಗೊಂಡ ನಂತರ ಬೇಸರದಿಂದಿದ್ದ ಕಂಡಕ್ಟರ್ ಮೋಹಿತ್ ಯಾದವ್, ಮಾನವೀಯತೆ ಮೆರೆದಿದ್ದಕ್ಕೆ ಈ ರೀತಿಯ ಶಿಕ್ಷೆಯೇ ಎಂದು ಯೋಚಿಸಿ, ಖಿನ್ನತೆಗೆ ಒಳಗಾಗಿದ್ದರು ಎಂದು ವರದಿಯಾಗಿದೆ.

ಮೋಹಿತ್ ಭಾನುವಾರ (ಆಗಸ್ಟ್ 27) ರಾತ್ರಿ ನಾಪತ್ತೆಯಾಗಿದ್ದರು. ಅವರ ಮೃತದೇಹ ಆಗಸ್ಟ್ 28 ರಂದು ಅವರ ಮನೆ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊ ಆಧಾರದ ಮೇಲೆ ಮೋಹಿತ್ ಯಾದವ್ ಅವರನ್ನು ಅಮಾನತುಗೊಳಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ವಿಚಾರಣೆ ನಡೆಸಿಲ್ಲ. ಅಲ್ಲದೆ ಮೋಹಿತ್ ಯಾದವ್ ಮತ್ತು ಚಾಲಕ ಕೆ ಪಿ ಸಿಂಗ್ ತಮ್ಮ ಅಮಾನತು ವಿರುದ್ಧ ಮೇಲ್ಮನವಿ ಸಲ್ಲಿಸಿರಲಿಲ್ಲ. ಮೋಹಿತ್ ಯಾದವ್ ಮತ್ತು ಕೆ ಪಿ ಸಿಂಗ್ ವಿರುದ್ಧ ಅಧಿಕಾರಿಗಳು ತೆಗೆದುಕೊಂಡ ಕ್ರಮ ಸಮರ್ಥನೀಯವಲ್ಲ ಎಂದು ಯುಪಿಎಸ್‌ಆರ್‌ಟಿಸಿ ನೌಕರರ ಸಂಘ ಹೇಳಿದೆ.

ಮೋಹಿತ್​ ಸಾವಿನ ಸುದ್ದಿ ಈಗ ಉತ್ತರ ಪ್ರದೇಶದಲ್ಲಿ ವಿವಾದಕ್ಕೆಡೆ ಮಾಡಿಕೊಟ್ಟಿದೆ. ‘ಅಮಾನತು ಮಾಡಿದ್ದರಿಂದ ನನ್ನ ಪತಿ ತೀವ್ರ ಒತ್ತಡಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮೋಹಿತ್​ ಪತ್ನಿ ರಿಂಕಿ ಆರೋಪಿಸಿದ್ದಾರೆ.

“ಐದು ವರ್ಷಗಳ ಹಿಂದೆ ನಮ್ಮ ಮದುವೆಯಾಗಿತ್ತು. ಮದುವೆಯಾದಾಗಿನಿಂದ ನಾವು ಸಂತೋಷದಿಂದ ಇದ್ದೆವು. ಆದರೆ ಕೆಲಸದಿಂದ ತೆಗೆದು ಹಾಕಿದ್ದರಿಂದ ನನ್ನ ಪತಿ ದುಃಖದ ಮನಸ್ಥಿತಿಯಲ್ಲಿದ್ದರು. ಅವರು ಒತ್ತಡಕ್ಕೆ ಒಳಗಾಗಿದ್ದರು. ಭಾನುವಾರ ಸಂಜೆ ಮನೆಯಿಂದ ಹೊರಗೆ ಹೋಗಿದ್ದ ಅವರು ಮತ್ತೆ ಮನೆಗೆ ಬಂದಿರಲಿಲ್ಲ. ಬೆಳಗ್ಗೆ ಅವರ ಸಾವಿನ ಸುದ್ದಿ ನಮ್ಮ ಮನೆ ತಲುಪಿತ್ತು. ನಮಗೆ 4 ವರ್ಷದ ಮಗನಿದ್ದಾನೆ. ಮಾನವೀಯತೆ ಮೆರೆದಿದ್ದಕ್ಕೆ ಕೆಲಸ ಕಳೆದುಕೊಂಡಿದ್ದರು. ಇದರಿಂದಾಗಿ ಪತಿ ಪ್ರಾಣ ತೆತ್ತಿದ್ದಾರೆ” ಎಂದು ಮೋಹಿತ್ ಪತ್ನಿ ರಿಂಕಿ ಅಳಲು ತೋಡಿಕೊಂಡಿದ್ದಾರೆ.

“ನಮ್ಮ ಮನೆಯ ದೈನಂದಿನ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ನನಗೆ ಒಬ್ಬನೇ ಮಗನಿದ್ದ. ಈಗ ಮಾನವೀಯ ಕೆಲಸ ಮಾಡಿದ್ದಕ್ಕೆ ನನ್ನ ಮಗನನ್ನೂ ನನ್ನಿಂದ ಕಿತ್ತುಕೊಂಡಿದ್ದಾರೆ. ಕೆಲಸದಿಂದ ಅಮಾನತುಗೊಳಿಸಿದ ಮೇಲೆ ತುಂಬಾ ಬೇಸರದಲ್ಲಿದ್ದ’ ಎಂದು ಮೋಹಿತ್ ತಂದೆ ರಾಜೇಂದ್ರ ಯಾದವ್ ಕಣ್ಣೀರು ಸುರಿಸಿದ್ದಾರೆ.

ಈ ಘಟನೆಯನ್ನು ಖಂಡಿಸಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ‘ಧಾರ್ಮಿಕ ಪ್ರಾರ್ಥನೆಗಾಗಿ ಕೇವಲ ಎರಡು ನಿಮಿಷ ತಡ ಮಾಡಿದ ಕಾರಣಕ್ಕಾಗಿ ಯುಪಿ ಸಾರಿಗೆ ಸಂಸ್ಥೆಯು ಇಬ್ಬರು ನೌಕರರನ್ನು ಅಮಾನತುಗೊಳಿಸಿರುವುದು ಯಾವ ನ್ಯಾಯ. ಈ ಚಿತ್ರಹಿಂಸೆಯಿಂದ ಮನನೊಂದು ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಹಾರ್ದತೆಗೆ ಹೆಸರಾದ ಈ ದೇಶದಲ್ಲಿ ಸೌಹಾರ್ದತೆಗೆ ಜಾಗವಿಲ್ಲವೇ? ಇದು ದುರದೃಷ್ಟಕರ, ಖಂಡನೀಯ, ನಾಚಿಕೆಗೇಡಿನ ಸಂಗತಿ’ ಎಂದು ಟ್ವೀಟ್ ಮಾಡಿದ್ದಾರೆ.

ಈ ನಡುವೆ ಕೆಲವು ಪತ್ರಕರ್ತರು ಹಾಗೂ ಸಾಮಾಜಿಕ ಕಾರ್ಯಕರ್ತರು ಮೋಹಿತ್ ಯಾದವ್ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ಮುಂದೆ ಬಂದಿದ್ದು, ‘ಕ್ರೌಡ್ ಫಂಡಿಂಗ್’ ಮೂಲಕ ಜನರಿಂದ ನೆರವು ಯಾಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...