ಟ್ರಸ್ಟ್ ಆಸ್ಪತ್ರೆಗಾಗಿ ಭೂಮಿ ಸ್ವಾಧೀನ: ವಿಜಯೇಂದ್ರ ವಿರುದ್ಧ ಆಯನೂರು ಆರೋಪ

Date:

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಭೂಮಿ ಸ್ವಾಧೀನದ ಆರೋಪವನ್ನು ಮಾಡಿದ್ದಾರೆ. ಮಂಗಳವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ಕೂಡಾ ಬಿಡುಗಡೆ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಆಯನೂರು ಮಂಜುನಾಥ್ ಅವರು, “ವಿಜಯೇಂದ್ರ ನಿರ್ದೇಶಕರಾಗಿರುವ ಟ್ರಸ್ಟ್‌ನ ಆಸ್ಪತ್ರೆಗಾಗಿ ಸಂಸದ ಬಿ.ವೈ. ರಾಘವೇಂದ್ರ ಅವರ ಪತ್ನಿಯ ಸಹೋದರನ ಹೆಸರಿನ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ” ಎಂದು ವಿಜಯೇಂದ್ರ ವಿರುದ್ಧ ಆರೋಪಿಸಿದ್ದಾರೆ.

“ಶಿವಮೊಗ್ಗ ತಾಲೂಕಿನ ಸಾಗರದ ಹರಿಗೆ ಗ್ರಾಮದ ಬಳಿ ಇರುವ ಕೈಗಾರಿಕಾ ಪ್ರದೇಶದಿಂದ ಸುಮಾರು ಮೂರು ಕಿ. ಮೀ. ದೂರದಲ್ಲಿ ವಿಜಯೇಂದ್ರ ಅವರು ನಿರ್ದೇಶಕರಾಗಿರುವ ಟ್ರಸ್ಟ್‌ನ ಆಸ್ಪತ್ರೆ ನಿರ್ಮಾಣಕ್ಕಾಗಿ 5.34 ಎಕರೆ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಿಜಯೇಂದ್ರ ಅವರಿಗೆ ಸ್ವಾಧೀನಪಡಿಸಿಕೊಟ್ಟಿದೆ” ಎಂದು ಆಯನೂರು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಂಡ್ಯ | ಭೂಸ್ವಾಧೀನವಾಗಿರುವ ಭೂಮಿ ಹಸ್ತಾಂತರಿಸದೇ ವಂಚನೆ; ಭೂರಹಿತರ ಆರೋಪ

“ಈ ಭೂಮಿ ಬಿ.ವೈ. ರಾಘವೇಂದ್ರ ಅವರ ಪತ್ನಿಯ ಸಹೋದರ ಸಂಗಮೇಶ ಪರಪ್ಪ ಗದಗ ಅವರ ಹೆಸರಿನಲ್ಲಿತ್ತು. ಆದರೆ ಅದನ್ನು ಈಗ ಬಿ.ವೈ. ವಿಜಯೇಂದ್ರ ಅವರ ಹೆಸರಿಗೆ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಅವರ ಸಹೋದರ ಜಮೀನು ನೀಡಿರುವುದು ಹಗರಣ ಎಂದಾದರೆ ಹರಿಗೆಯಲ್ಲಿ ಕೆಐಎಡಿಬಿಯಿಂದ ಭೂಮಿ ಸ್ವಾಧೀನವೂ ಹಗರಣ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಕೆಐಎಡಿಬಿ ಸ್ವಾಧೀನಪಡಿಸಿಕೊಂಡ ಭೂಮಿಯ ಪಕ್ಕದಲ್ಲೇ ಯಡಿಯೂರಪ್ಪ ಕುಟುಂಬ ಭೂಮಿಯನ್ನು ಖರೀದಿಸಿದೆ. ಅದೇ ರೀತಿ ಸಂಗಮೇಶ ಪರಪ್ಪ ಅವರ ಭೂಮಿಯನ್ನು ಖರೀದಿಸಬಹುದಿತ್ತು. ಆದರೆ ತಮ್ಮ ಕುಟುಂಬದವರ ಭೂಮಿಯನ್ನು ಕೆಐಎಡಿಬಿ ಮೂಲಕ ತಾವೇ ಸ್ವಾಧೀನಪಡಿಸಿಕೊಂಡಿರುವುದು ದೇಶದಲ್ಲಿ ಇದೇ ಮೊದಲು” ಎಂದು ಆಯನೂರು ಲೇವಡಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...