ಡಿ ಕೆ ಶಿವಕುಮಾರ್ ಆದೇಶದ ಮೇರೆಗೆ ಬಿ ವೈ ವಿಜಯೇಂದ್ರ ಪಾದಯಾತ್ರೆ: ಯತ್ನಾಳ್‌ ಬಾಂಬ್‌

Date:

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಡಿ ಕೆ ಶಿವಕುಮಾರ್ ಸಲಹೆ ಮೇರೆಗೆ ಬಿ ವೈ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್‌ ಸಿಡಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿ, “ಡಿ ಕೆ ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಲು ಬಿ ವೈ ವಿಜಯೇಂದ್ರ ಕೈಜೋಡಿಸಿದ್ದಾರೆ” ಎಂದು ದೂರಿದರು.

“ಡಿ ಕೆ ಶಿವಕುಮಾರ್ ಆದೇಶದಂತೆ ಸಿದ್ದರಾಮಯ್ಯ ‌ವಿರುದ್ಧ ವಿಜಯೇಂದ್ರ ಪಾದಯಾತ್ರೆ ಮಾಡಲು ಸಿದ್ಧರಾಗಿದ್ದಾರೆ. ಈ ಪಾದಯಾತ್ರೆ ಹೊಂದಾಣಿಕೆ ರಾಜಕಾರಣವಾಗಿದೆ. ಡಿ ಕೆ ಶಿವಕುಮಾರ್ ಅವರ ಉಪಕಾರ ತೀರಿಸಲಿಕ್ಕೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಡಾ ಮಾಜಿ ಅಧ್ಯಕ್ಷ ಹೆಚ್ ವಿ ರಾಜೀವ್ ಬಿಜೆಪಿಯಲ್ಲೇ ಇದ್ದಾಗ ಈ ಹಗರಣ ನಡೆದಿದೆ. ಈಗ ಅವರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್​ ಯಾಕೆ ಸೇರಿದ್ದಾರೆ ಅಂದರೆ ಇದೆಲ್ಲ ಮುಚ್ಚಿ ಹಾಕಲು. ರಾಜೀವ್ ಯಾರ ನಿರ್ದೇಶನದ ಮೇಲೆ ಕಾಂಗ್ರೆಸ್ ಸೇರಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನಗಿರುವ ಮಾಹಿತಿ ಪ್ರಕಾರ ಮುಡಾ ವಿಚಾರ ವಿಜಯೇಂದ್ರ ನಡೆಸುತ್ತಿರುವ ಹೋರಾಟದ ಹಿಂದೆ ಡಿ ಕೆ ಶಿವಕುಮಾರ್ ಕೈವಾಡವಿದೆ” ಎಂದು ಗಂಭೀರವಾಗಿ ಆರೋಪಿಸಿದರು.

“ನಾವು ಮತ್ತು ರಮೇಶ್ ಜಾರಕಿಹೊಳಿ‌ ಕೇಂದ್ರದಿಂದ ಒಪ್ಪಿಗೆ ಪಡೆದು ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಎಲ್ಲಿಂದ ಪ್ರತಿಭಟನೆ ಮಾಡಬೇಕೆಂದು ಇನ್ನೂ ನಿರ್ಣಯವಾಗಿಲ್ಲ. ಬಿಜೆಪಿಯಲ್ಲಿ ಎರಡು ಬಣ ಇಲ್ಲ. ನಮ್ಮ ಪ್ರತಿಭಟನೆ ಪಕ್ಷದ ಪ್ರತಿಭಟನೆ” ಎಂದು ಹೇಳಿದರು.

“ಮಹರ್ಷಿ ವಾಲ್ಮೀಕಿ ನಿಗಮದಲ್ಲೂ ದೊಡ್ಡ ಹಗರಣ ನಡೆದಿದೆ. ಒಂದು ಸಮುದಾಯದಕ್ಕೆ ಹೋಗಬೇಕಾದ ಹಣ ಪೂರ್ತಿ ನುಂಗಿ ಹಾಕಿದ್ದಾರೆ. ಇನ್ನೊಂದು ಕಡೆ ಮುಡಾದಲ್ಲಿ ಒಬ್ಬ ದಲಿತನ ಜಮೀನು ಪೂರ್ತಿ ನುಂಗಿ ಹಾಕಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರ ವಿರುದ್ದ ಯಾವುದೇ ಒಳ ಒಪ್ಪಂದ ಇಲ್ಲದೇ ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟ ಭ್ರಷ್ಟರ ವಿರುದ್ಧ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...