ಕಾಂಗ್ರೆಸ್ ಸರಕಾರ ಇನ್ನೆಷ್ಟು ದಿನ ಇರುತ್ತೋ ಗೊತ್ತಿಲ್ಲ: ಬಿ ವೈ ವಿಜಯೇಂದ್ರ

Date:

ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಇನ್ನೆಷ್ಟು ದಿನ ಜೀವ ಇರುತ್ತದೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ ವೈ ವಿಜಯೇಂದ್ರ ಹೇಳಿದರು.

ಅರಮನೆ ಮೈದಾನದಲ್ಲಿ ಏರ್ಪಡಿಸಿದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, “ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬುತ್ತಿದೆ. ಸರಕಾರಕ್ಕೆ ತಕ್ಕ ಪಾಠ ಕಲಿಸಬೇಕು” ಎಂದರು.

“ಸರಕಾರಕ್ಕೆ ಅಸ್ಥಿರತೆ ಕಾಡುತ್ತಿದೆ. ಕಾಂಗ್ರೆಸ್ ಒಳಜಗಳ ಮಿತಿ ಮೀರಿದೆ. ಹಾದಿ ಬೀದಿ ಹೊಡೆದಾಟ ಮುಂದುವರೆದಿದೆ. ಸಿಎಂ ಸ್ಥಾನಕ್ಕಾಗಿ ಕೂಗು, ಉಪ ಮುಖ್ಯಮಂತ್ರಿಗಾಗಿ ಕೂಗು, ಅಭಿವೃದ್ಧಿಗಾಗಿ ಹಣ ಕೇಳಿ ಕೂಗು ಕೇಳಿಸುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂಡಿಯಾ ಒಕ್ಕೂಟ ಪೊಳ್ಳು ಭರವಸೆ ಮೂಲಕ ಅಧಿಕಾರ ಪಡೆಯಲು ಯತ್ನಿಸಿತ್ತು. ಆದರೆ, ಪ್ರಜ್ಞಾವಂತ ಮತದಾರರು ಅವರ ಷಡ್ಯಂತ್ರವನ್ನು ಬೆಂಬಲಿಸಲಿಲ್ಲ. ನಡ್ಡಾಜೀ, ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿ ಐತಿಹಾಸಿಕ ಜಯಭೇರಿ ಸಾಧಿಸಿದೆ” ಎಂದರು.

“ಅಧಿಕಾರ ದರ್ಪ, ಅಧಿಕಾರ ದುರುಪಯೋಗದಿಂದ 18ರಿಂದ 20 ಸ್ಥಾನ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಸರಕಾರಕ್ಕೆ ನಮ್ಮ ಕಾರ್ಯಕರ್ತರು ಪಾಠ ಕಲಿಸಿದ್ದಾರೆ. ಅವರ ಪರಿಶ್ರಮದಿಂದ, ದಬ್ಬಾಳಿಕೆ ನಡುವೆ ಎನ್‍ಡಿಎ 19 ಸಂಸದರನ್ನು ಗೆದ್ದಿದೆ. ಅದರ ಶ್ರೇಯಸ್ಸು ಕಾರ್ಯಕರ್ತರಿಗೆ ಸಲ್ಲುತ್ತದೆ” ಎಂದು ಹೇಳಿದರು.

“ಗ್ಯಾರಂಟಿಗಳ ಮೂಲಕ ಒಳಿತು ಮಾಡುವುದಾಗಿ ಹೇಳಿದ ಕಾಂಗ್ರೆಸ್, ಭ್ರಷ್ಟಾಚಾರರಹಿತ ಆಡಳಿತದ ಭರವಸೆ ಕೊಟ್ಟಿತ್ತು. ಇವರ ಆಡಳಿತವೈಖರಿ, ಹಿಂದೆಂದೂ ಕಾಣದ ಭ್ರಷ್ಟಾಚಾರದ ಹಗರಣ ಹೊರಬರುತ್ತಿದೆ. ಇವರ ಮುಖವಾಡ ಕಳಚಿಬಿದ್ದಿದೆ” ಎಂದು ಹರಿಹಾಯ್ದರು.

“ನಾಯಿ ಬಾಲ ಡೊಂಕು ಎಂಬ ಪರಿಸ್ಥಿತಿ ಕಾಂಗ್ರೆಸ್ಸಿನದು. ವಾಲ್ಮೀಕಿ ನಿಗಮದಲ್ಲಿ ದಲಿತ ಸಮುದಾಯದ ಅನುಕೂಲಕ್ಕಾಗಿ ಕೊಟ್ಟ ಹಣವನ್ನು ಭ್ರಷ್ಟಾಚಾರಕ್ಕೆ ಬಳಸಿದ್ದಾರೆ. ಮೈಸೂರಿನ ಮೂಡಾ ಹಗರಣದಲ್ಲಿ ಸಿಎಂ ಕುಟುಂಬದವರ ಹೆಸರು ಕೇಳಿಬರುತ್ತಿದೆ. ಇದು ಸುಮಾರು 3ರಿಂದ 4 ಸಾವಿರ ಕೋಟಿ ಮೊತ್ತದ್ದು. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಜನವಿರೋಧಿ ಸರಕಾರ ಆಡಳಿತ ನಡೆಸುತ್ತಿದೆ” ಎಂದು ವಿಜಯೇಂದ್ರ ಅವರು ಟೀಕಿಸಿದರು.

“ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಹಿಂದೂಗಳ ತೇಜೋವಧೆ, ಅವಮಾನ ಮಾಡಿದ್ದಾರೆ. ಜಮೀರ್ ಅಹ್ಮದ್ ಎಂಬ ಬೇಜವಾಬ್ದಾರಿ ಸಚಿವರಿದ್ದು, ಅವರ ಮಾತಿನಲ್ಲೂ ಅಹಂಕಾರದ ಹೇಳಿಕೆ ಇದೆ” ಎಂದರು.

ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಮಾತನಾಡಿ, “ರಾಜ್ಯದಲ್ಲೂ ಬಿಜೆಪಿ- ಜೆಡಿಎಸ್ ಕೂಟ 19 ಸ್ಥಾನಗಳನ್ನು ಗೆದ್ದಿದೆ ಎಂದು ಸಂತಸ ವ್ಯಕ್ತಪಡಿಸಿದರು. 142 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಈಗ ಚುನಾವಣೆ ನಡೆದರೆ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಏರುವುದು ಖಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್‍ದಾಸ್ ಅಗರ್‍ವಾಲ್ ಮಾತನಾಡಿ, “2023ರಲ್ಲಿ ಆದ ಅಪಮಾನಕ್ಕೆ ಬದಲಿಯಾಗಿ ಈ ಗೆಲುವನ್ನು ನೀಡಿದ್ದೀರಿ” ಎಂದು ಅಭಿನಂದಿಸಿದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಮಾಜಿ ಸಂಸದ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...