ರಮೇಶ್ ಜಾರಕಿಹೊಳಿ ವಿರು‌ದ್ಧ ಮೊದಲ ಬಾರಿಗೆ ಗುಡುಗಿದ ಬಿ ವೈ ವಿಜಯೇಂದ್ರ

Date:

ತಮ್ಮ ನಾಯಕತ್ವದ ಬಗ್ಗೆ ಪದೇ ಪದೇ ತಕರಾರು ತೆಗೆದು ಹೇಳಿಕೆ ನೀಡುತ್ತಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರು‌ದ್ಧ ಇದೆ ಮೊದಲ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಗುಡುಗಿದ್ದಾರೆ.

ಕೊಪ್ಪಳದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಮೇಶ್ ಜಾರಕಿಹೊಳಿ ಅವರು ಇತ್ತೀಚೆಗೆ ತಾನೇ ಪಕ್ಷಕ್ಕೆ ಬಂದವರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಹಳ್ಳಿಹಳ್ಳಿ ಸುತ್ತಿ ಪಕ್ಷವನ್ನು ಸಂಘಟಿಸಿದ್ದಾರೆ. ಅವರ ಬಗ್ಗೆ ಅತ್ಯಂತ ಜಾಗರೂಕತೆಯಿಂದ ಮಾತನಾಡಬೇಕು” ಎಂದು ಎಚ್ಚರಿಸಿದರು.

“ರಮೇಶ ಜಾರಕಿಹೊಳಿ ಅವರಿಗೆ ತಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಬಗ್ಗೆ ಯಾವುದಾದರೂ ತಕರಾರು ಇದ್ದರೆ ಅದನ್ನು ಹೈಕಮಾಂಡ್ ಜೊತೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುವ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವುದು ಬೇಡ” ಎಂದು ಹೇಳಿದರು.

“ತಾವು ಪಕ್ಷದ ಅಧ್ಯಕ್ಷರಾದ ನಂತರ ಯಾವುದೇ ರೀತಿಯ ಸಮಸ್ಯೆ ಉಂಟಾಗಿಲ್ಲ. ನಿಜವಾದ ಸಮಸ್ಯೆ ಉಂಟಾಗಿರುವುದು ಜಾರಕಿಹೊಳಿ ಅವರ ಕ್ಷೇತ್ರದಲ್ಲಿ ಯಾರ ವೈಫಲ್ಯ ಎಂಬುದನ್ನು ಅವರ ಕ್ಷೇತ್ರದ ಜನತೆಗೆ ಹೇಳುತ್ತಿದ್ದಾರೆ. ಹೀಗಾಗಿ ಅವರು ಆ ಬಗ್ಗೆ ಗಮನಹರಿಸಿ ಅದನ್ನು ಸರಿಪಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಾರಕಿಹೊಳಿ ಅವರು ಬಾಯಿಗೆ ಬಂದಂತೆ ಮಾತನಾಡುವುದನ್ನು ಮೊದಲು ಬಿಡಬೇಕು. ಇದರಿಂದ ಅನಗತ್ಯವಾಗಿ ಕಾರ್ಯಕರ್ತರು ಗೊಂದಲಕ್ಕೆ ಬೀಳುತ್ತಿದ್ದಾರೆ. ತಾವು ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದು ಯಾವುದೇ ಕಾರಣಕ್ಕೂ ಇಂತಹ ಮಾತುಗಳಿಗೆ ಬೆಲೆ ಕೊಡಬೇಡಿ. ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದ್ದು ಸದ್ಯದಲ್ಲಿಯೇ ಎಲ್ಲವೂ ಬಗೆಹರಿಯಲಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...