‘ಭಜರಂಗಿ’ ಸಿನಿಮಾ ನಟಿ, ಕಾಂಗ್ರೆಸ್‌ ಮುಖಂಡೆ ವಿದ್ಯಾ ನಂದೀಶ್ ಪತಿಯಿಂದಲೇ ಭೀಕರ ಕೊಲೆ

Date:

ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿರುವ ದುರ್ಘಟನೆ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೌಟುಂಬಿಕ ಕಲಹದಿಂದಾಗಿ ನಟಿ ಹತ್ಯೆಯಾಗಿದ್ದು, ವಿದ್ಯಾ ಅವರನ್ನು ಪತಿ ನಂದೀಶ್‌ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಸಿನಿಮಾ ಮಾತ್ರವಲ್ಲ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ವಿದ್ಯಾ ಅವರು ಕೆಲ ನಾಯಕರೊಂದಿಗೆ ಆಪ್ತರಾಗಿದ್ದುದು ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನುವ ಮಾತುಗಳು ಕೇಳಿಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾ ಅವರು ಸಮಾಜ ಸೇವಕರಾದ ಬನ್ನೂರು ಸಮೀಪದ ತುರಗನೂರಿನ ನಂದೀಶ್‌ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಮೈಸೂರಿನ ಶ್ರೀರಾಮಪುರದಲ್ಲಿ ನೆಲೆಸಿದ್ದರು. ಬನ್ನೂರಿನ ತುರಗನೂರಿನಲ್ಲಿ ಪತಿಯ ಮನೆಗೆ ಆಕೆ ತೆರಳಿದ್ದಾಗ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.

ಪತಿ ಹಾಗೂ ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಆದರೆ ಈ ಬಾರಿ ಅದು ವಿಕೋಪಕ್ಕೆ ಹೋಗಿದೆ ಕೊಲೆ ಸಂಭವಿಸಿದೆ ಎಂದು ವರದಿಯಾಗಿದೆ. ಗಲಾಟೆ ವೇಳೆ ಪತ್ನಿ ತಲೆಗೆ ನಂದೀಶ್‌ ಹರಿತವಾದ ಆಯುಧದಿಂದ ಹೊಡೆದು ಓಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬನ್ನೂರು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ವಿದ್ಯಾ ನಂದೀಶ್‌ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದು, ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ವಿದ್ಯಾ ನಂದೀಶ್ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದರು. ಮಾತ್ರವಲ್ಲ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿಭಾಯಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...