ಸರ್ಕಾರಿ ನೌಕರರ ಆರ್‌ಎಸ್‌ಎಸ್‌ ಚಟುವಟಿಕೆ ಮೇಲಿನ ನಿಷೇಧ ತೆರವು; ವಿಪಕ್ಷಗಳಿಂದ ಖಂಡನೆ

Date:

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಭಾಗವಹಿಸಲು ಸರ್ಕಾರಿ ನೌಕರರ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರವು ತೆಗೆದುಹಾಕಿದ್ದು ಇದು ವಿಪಕ್ಷಗಳು ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ವಿಪಕ್ಷಗಳು ಖಂಡಿಸಿದೆ.

ಬಿಜೆಪಿ ನಾಯಕ ಅಮಿತ್ ಮಾಳವಿಯಾ ತನ್ನ ಎಕ್ಸ್ ಪೋಸ್ಟ್‌ನಲ್ಲಿ, “58 ವರ್ಷಗಳ ಹಿಂದೆ, 1966ರಲ್ಲಿ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸುವ ಅಸಂವಿಧಾನಿಕ ಆದೇಶವನ್ನು ಮೋದಿ ಸರ್ಕಾರವು ಹಿಂಪಡೆದಿದೆ. ಮೂಲ ಆದೇಶವನ್ನು ಮೊದಲ ಸ್ಥಾನದಲ್ಲಿ ರವಾನಿಸಬಾರದಿತ್ತು” ಎಂದು ಬರೆದುಕೊಂಡಿದ್ದಾರೆ.

“1966ರ ನವೆಂಬರ್ 7ರಂದು ಸಂಸತ್ತಿನಲ್ಲಿ ಬೃಹತ್ ಗೋಹತ್ಯೆ-ವಿರೋಧಿ ಪ್ರತಿಭಟನೆ ನಡೆದ ಕಾರಣ ನಿಷೇಧವನ್ನು ವಿಧಿಸಲಾಯಿತು. ಆರ್‌ಎಸ್‌ಎಸ್‌-ಜನಸಂಘಕ್ಕೆ ಲಕ್ಷಾಂತರ ಜನರ ಬೆಂಬಲವಿತ್ತು. ಅನೇಕರು ಪೋಲೀಸ್ ಗುಂಡಿನ ದಾಳಿಯಲ್ಲಿ ಸತ್ತರು. 1966ರ ನವೆಂಬರ್ 30ರಂದು ಆರ್‌ಎಸ್‌ಎಸ್-ಜನಸಂಘದ ಪ್ರಭಾವದಿಂದ ನಡುಗಿದ ಇಂದಿರಾಗಾಂಧಿ ಸರ್ಕಾರಿ ಸಿಬ್ಬಂದಿ ಆರ್‌ಎಸ್‌ಎಸ್‌ಗೆ ಸೇರುವುದನ್ನು ನಿಷೇಧಿಸಿದ್ದರು” ಎಂದು ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...


ಇದನ್ನು ಓದಿದ್ದೀರಾ?  ಕಲಬುರಗಿ ಕೇಂದ್ರೀಯ ವಿವಿ ವಿವಾದ: ಆರ್‌ಎಸ್‌ಎಸ್‌ನ ಧ್ಯೇಯಗೀತೆ ಹಾಡಿದರು, ಬೆದರಿಕೆ ಒಡ್ಡಿದರು

ಕೇಂದ್ರ ಸರ್ಕಾರದ ಈ ಆದೇಶವನ್ನು ವಿಪಕ್ಷವನ್ನು ತೀವ್ರವಾಗಿ ಖಂಡಿಸಿದೆ. “ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನರ ತೀರ್ಪಿನಿಂದ ಯಾವುದೇ ಪಾಠ ಕಲಿಯುತ್ತಿಲ್ಲ” ಎಂದು ಕಾಂಗ್ರೆಸ್ ಸಂಸದ ಕೆಸಿ ವೇಣುಗೋಪಾಲ್ ಹೇಳಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರದ ಆದೇಶವನ್ನು, “ಅತ್ಯಂತ ದುರದೃಷ್ಟಕರ ಕ್ರಮ” ಎಂದು ಕರೆದಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲಿನ ನಿಷೇಧವನ್ನು ತೆಗೆದುಹಾಕಿರುವ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

“ಇದು ನಿಜವಾಗಿದ್ದರೆ, ಇದು ಭಾರತದ ಸಮಗ್ರತೆ ಮತ್ತು ಏಕತೆಗೆ ವಿರುದ್ಧವಾಗಿದೆ. ಸಂವಿಧಾನ, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಅಂಗೀಕರಿಸಲು ನಿರಾಕರಿಸಿದ ಕಾರಣ ಆರ್‌ಎಸ್‌ಎಸ್ ಮೇಲೆ ನಿಷೇಧವಿದೆ. ಪ್ರತಿಯೊಬ್ಬ ಆರ್‌ಎಸ್‌ಎಸ್ ಸದಸ್ಯರು ಹಿಂದುತ್ವವನ್ನು ರಾಷ್ಟ್ರದಲ್ಲಿ ಜಾರಿ ಮಾಡುವ ಪ್ರತಿಜ್ಞೆ ಮಾಡುತ್ತಾರೆ. ಯಾವುದೇ ನಾಗರಿಕ ಸೇವಕ ಆರ್‌ಎಸ್‌ಎಸ್ ಸದಸ್ಯನಾಗಿದ್ದರೆ ರಾಷ್ಟ್ರಕ್ಕೆ ನಿಷ್ಠನಾಗಿರಲು ಸಾಧ್ಯವಿಲ್ಲ” ಎಂದು ಅಸಾದುದ್ದೀನ್ ಓವೈಸಿ ಅಭಿಪ್ರಾಯಿಸಿದ್ದಾರೆ.

ಇನ್ನು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, “1948ರ ಫೆಬ್ರವರಿಯಲ್ಲಿ ಗಾಂಧೀಜಿಯವರ ಹತ್ಯೆಯ ನಂತರ ಸರ್ದಾರ್ ಪಟೇಲ್ ಆರ್‌ಎಸ್‌ಎಸ್‌ ಅನ್ನು ನಿಷೇಧಿಸಿದರು. ತರುವಾಯ ಉತ್ತಮ ನಡವಳಿಕೆಯ ಭರವಸೆಯ ಮೇಲಿನ ನಿಷೇಧವನ್ನು ತೆಗೆದುಹಾಕಲಾಯಿತು. ಇದಾದ ನಂತರವೂ ಆರ್‌ಎಸ್‌ಎಸ್ ನಾಗಪುರದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಿಲ್ಲ” ಎಂದು ತಿಳಿಸಿದ್ದಾರೆ.

“1966ರಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ನಿಷೇಧ ಹೇರಲಾಯಿತು ಮತ್ತು ಇದು ಸರಿಯಾದ ನಿರ್ಧಾರವಾಗಿತ್ತು. ನಿಷೇಧ ಹೇರಲು 1966ರಲ್ಲಿ ಹೊರಡಿಸಿದ ಅಧಿಕೃತ ಆದೇಶ ಇದಾಗಿದೆ” ಎಂದು ಎಕ್ಸ್ ಪೋಸ್ಟ್‌ನಲ್ಲಿ ಆದೇಶ ಪ್ರತಿಯನ್ನು ಉಲ್ಲೇಖಿಸಿದ್ದಾರೆ.

“2024ರಲ್ಲಿ ಜೂನ್ 4ರ ನಂತರ ಸ್ವಯಂ-ಶೈಲಿಯ ಜೈವಿಕವಲ್ಲದ ಪ್ರಧಾನ ಮಂತ್ರಿ ಮತ್ತು ಆರ್‌ಎಸ್‌ಎಸ್‌ ನಡುವಿನ ಸಂಬಂಧಗಳು ಹದಗೆಟ್ಟವು. 2024ರ ಜುಲೈ 9ರಂದು ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗಲೂ ಜಾರಿಯಲ್ಲಿದ್ದ 58 ವರ್ಷಗಳ ನಿಷೇಧವನ್ನು ತೆಗೆದುಹಾಕಲಾಯಿತು. ನೌಕರರು ಈಗ ಚಡ್ಡಿಯಲ್ಲಿಯೂ (ಆರ್‌ಎಸ್‌ಎಸ್‌ ಸಮವಸ್ತ್ರ) ಬರಬಹುದು ಎಂದು ನಾನು ಭಾವಿಸುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...