ಬೆಂಗಳೂರು ಬಿಜೆಪಿಯ ಪಾಲಿಗೆ ಕೊಳ್ಳೆ ಹೊಡೆಯುವ ಎಟಿಎಂ ಆಗಿದೆ: ಎಚ್‌ ಡಿ ಕುಮಾರಸ್ವಾಮಿ

Date:

  • ಬಿಜೆಪಿಗೆ ಸೋಲಿನ ಅರಿವಾಗಿದೆ ಹಾಗಾಗಿ ಧರ್ಮ ರಾಜಕಾರಣ ಮಾಡುತ್ತಿದೆ
  • ಯುಗಾದಿ ಬಂದಿರುವ ಹಿನ್ನೆಲೆಯಲ್ಲಿ ಹಲಾಲ್‌-ಜಟ್ಕಾ ಬಗ್ಗೆ ಪ್ರೀತಿ ಹುಟ್ಟಿದೆ

ಐಟಿ ಬಿಟಿ ಮೂಲಕ ಜಗದ್ವಿಖ್ಯಾತಿ ಪಡೆದಿರುವ ಬೆಂಗಳೂರು ಮಹಾನಗರವನ್ನು ಬಿಜೆಪಿ ಸರ್ಕಾರವು ಕೊಳ್ಳೆ ಹೊಡೆಯುವ ಎಟಿಎಂ ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಪಂಚರತ್ನ ರಥಯಾತ್ರೆಯ ವೇಳೆ ಬೆಂಗಳೂರಿನ ಹೆಬ್ಬಾಳದಲ್ಲಿ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ”ಕಸ ವಿಲೇವಾರಿ ಅಕ್ರಮ, ರಸ್ತೆ ಗುಂಡಿ ಮುಚ್ಚುವುದರಲ್ಲಿ ಅಕ್ರಮ ಸೇರಿದಂತೆ ಅನೇಕ ಯೋಜನೆಗಳಲ್ಲಿ ಬಿಜೆಪಿ ಅಕ್ರಮ ಎಸಗುತ್ತಿದೆ. ಯೋಜನೆಗಳ ಹೆಸರಿನಲ್ಲಿ ತನ್ನ ಖಜಾನೆ ತುಂಬಿಸಿಕೊಳ್ಳುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಬೆಂಗಳೂರು ನಗರ ನೋಡಿದರೆ ಈಗ ಎರಡು ರಾಷ್ಟ್ರೀಯ ಪಕ್ಷಗಳಿಗೆ ದುಡ್ಡು ಮಾಡುವ ಎಟಿಎಂ ಆಗಿದೆ. ವಿಧಾನಸೌಧವು ಇವರ ಕೈಯಲ್ಲಿದೆ, ಬಿಬಿಎಂಪಿ ಕೂಡ ಇವರ ಕೈಯ್ಯಲ್ಲಿಯೇ ಇದೆ. ಹೀಗಾಗಿ ಲೂಟಿ ಮಾಡಲು ಪೊಗರುದಸ್ತಾದ ಎಟಿಎಂ ಇವರಿಗೆ ಸಿಕ್ಕಂತಾಗಿದೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಂಚರತ್ನ ರಥಯಾತ್ರೆ ಮಾಡುತ್ತಾ ಹೆಬ್ಬಾಳ ಕ್ಷೇತ್ರದಲ್ಲಿ ನೋಡಿಕೊಂಡು ಬಂದೆ. ರಸ್ತೆಯಲ್ಲೇ ರಾಶಿ ರಾಶಿ ಕಸ ಬಿದ್ದಿದೆ. ಬಿಬಿಎಂಪಿ ಏನು ಮಾಡುತ್ತಿದೆ ಎನ್ನುವುದು ಇದರಿಂದ ಅರ್ಥ ಆಗುತ್ತದೆ” ಎಂದು ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಜೆಪಿಯ ಪ್ರತಿಮೆ ರಾಜಕಾರಣದ ಕುರಿತು ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, “ಬಿಜೆಪಿ ಸರ್ಕಾರ ಸೂಕ್ಷ್ಮ ವಿಚಾರಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ. ಕೆಲವು ವಿಚಾರಗಳು ತಿರುಗುಬಾಣ ಅದ ಮೇಲೆ ಪುತ್ಥಳಿ ಅನಾವರಣದಲ್ಲಿ ರಾಜಕಾರಣ ಮಾಡುತ್ತಿದೆ. ಮಾಡಲಿ ಸಂತೋಷ, ಈಗ ಉರಿಗೌಡ ಮತ್ತು ನಂಜೇಗೌಡ ಅಂತ ಹೇಳ್ತಾ ಇದ್ದಾರೆ. ಅವರು ಹೀಗೇಯೇ ಮುಂದುವರೆದರೆ ಜನ ಏನು ಮಾಡುತ್ತಾರೆ ಎಂಬುದು ಅವರಿಗೆ ಗೊತ್ತಿದೆ.ಈ ಬಾರಿ ಬಿಜೆಪಿ ಸೋಲುವುದು ಖಚಿತ” ಎಂದು ಹೇಳಿದ್ದಾರೆ.

“ಯುಗಾದಿ ಬಂದಿದೆ. ಕಳೆದ ಯುಗಾದಿಯಲ್ಲಿ ಬಿಜೆಪಿ ನಾಯಕರಿಗೆ ಅಪ್ಯಾಯಮಾನ ಆಗಿದ್ದ ಹಲಾಲ್ ಕಟ್, ಜಟ್ಕಾ ಕಟ್ ಬಗ್ಗೆ ಮತ್ತೆ ಪ್ರೀತಿ ಹುಟ್ಟಿದೆ. ಮತ್ತೆ ವಿವಾದವನ್ನು ಶುರು ಮಾಡಿಕೊಂಡಿದ್ದಾರೆ. ಆಹಾರ, ವ್ಯಾಪಾರದಲ್ಲಿ ಕೂಡ ಅವರು ಧರ್ಮ ಹುಡುಕುತ್ತಿದ್ದಾರೆ” ಎಂದಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...