ಬೆಂಗಳೂರು | ಯುಎಪಿಎ ಕಾನೂನು ರದ್ದಾಗಬೇಕು: ಪ್ರಗತಿಪರ ಸಂಘಟನೆಗಳ ಒಕ್ಕೊರಲ ಆಗ್ರಹ

Date:

“ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಹತ್ತು ವರ್ಷದಿಂದ ಅನೇಕ ಪ್ರಗತಿಪರ ಚಿಂತಕರನ್ನ ಕಠೋರ ಮತ್ತು ಅಪ್ರಜಾಪ್ರಭುತ್ವ ಕಾನೂನಾದ, ಕಾನೂನು ಬಾಹಿರ ಚಟುವಟಿಕೆ ತಡೆ (ಯುಎಪಿಎ) ಕಾಯ್ದೆ ಅಡಿ ಬಂಧಿಸಿ, ಜನಪರ ಕಾಳಜಿಯುಳ್ಳವರ ಬಾಯಿ ಮುಚ್ಚಿಸುತ್ತಿದೆ” ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.

2010ರಲ್ಲಿ ಮಾತನಾಡಿದಕ್ಕಾಗಿ ಮಾನವ ಹಕ್ಕುಗಳ ಹೋರಾಟಗಾರ್ತಿ ಅರುಂಧತಿ ಮತ್ತು ಪ್ರೊ. ಶೇಖ್‌ ಶೌಕತ್‌ ಹುಸೇನ್‌ ಅವರ ಮೇಲೆ ಯುಎಪಿಎ ಕಾಯ್ದೆ ಹಾಕಿದ್ದನ್ನು ಖಂಡಿಸಿ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

“ಕಾಶ್ಮೀರಿ ಜನರ ಸಮಸ್ಯೆಗಳ ಕುರಿತು 2010ರಲ್ಲಿ ಮಾತನಾಡಿದಕ್ಕಾಗಿ ಇಬ್ಬರ ಮೇಲೆ ಈಗ ಯುಎಪಿಎ ಅಡಿ ಕ್ರಮ ಜರುಗಿಸಬೇಕಾಗಿ ದೆಹಲಿಯ ಲೆಫ್ಟಿನೆಂಟ್ ರಾಜ್ಯಪಾಲ ವಿಕೆ. ಸಕ್ಸೇನಾ ದೆಹಲಿ ಪೋಲಿಸರಿಗೆ ಅನುಮತಿ ನೀಡಿರುವುದು ಖಂಡನೀಯ” ಎಂದು ಎಐಸಿಸಿಟಿಯು, ಎಐಪಿಡಬಲ್ಯೂಎ, ಎಐಎಸ್‌ ಎ, ಸಿಪಿಐಎಂಎಲ್‌, ಆರ್‌ ಐಎ ಸಂಘಟನೆಗಳು ಒಕ್ಕೊರಲ ದನಿಯಿಂದ ಗುರುವಾರ ಪ್ರತಿಭಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಕಾನೂನಿನ ಪ್ರಕ್ರಿಯೆ ಇಲ್ಲದೆ ಕೇವಲ ಪ್ರಕರಣ ದಾಖಲಾದ ತಕ್ಷಣಕ್ಕೆ ವ್ಯಕ್ತಿಗಳನ್ನ ಬಂಧಿಸುವ ಈ ಕಾಯ್ದೆಯು ಅಸಾಂವಿಧಾನಿಕವಾದ್ದದ್ದು. ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ಕಸಿಯುತ್ತದೆ. ದಲಿತರು, ರೈತರು, ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ವಿದಾರ್ಥಿಗಳ ಪರ ನಾವು ಸದಾ ದನಿ ಎತ್ತುತ್ತೇವೆ. ಅದು ನಮ್ಮ ಹಕ್ಕು. ಹತ್ತು ವರ್ಷಗಳಿಂದ ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿರುವ ವಿದ್ಯಾರ್ಥಿ ನಾಯಕರು, ಹೋರಾಟಗಾರರು, ಪ್ರಗತಿಪರ ಚಿಂತಕರನ್ನ ಬಿಡುಗಡೆ ಮಾಡಬೇಕು” ಎಂದು ವಕೀಲ ಕ್ಲಿಫ್ಟನ್.‌ ಡಿ. ರೊಜಾರಿಯೊ ಆಗ್ರಹಿಸಿದರು.

“ಭೀಮಾ ಕೊರೆಂಗಾವ್‌ನಲ್ಲಿ ಕಾರ್ಮಿಕರು ಗುತ್ತಿಗೆ ಪದ್ಧತಿ ರದ್ದಾಗಬೇಕು ಎಂದು ಪ್ರತಿಭಟಿಸಿದ್ದ ಕಾರಣಕ್ಕಾಗಿ ಅವರ ಮೇಲೆ ಯುಎಪಿಎ ಅಡಿ ಕ್ರಮ ಜರುಗಿಸಿದ್ದರು. ಜನರಿಗೆ ಸಂವಿಧಾನದ ಅಡಿಯಲ್ಲಿ ಸರ್ಕಾರ ಮತ್ತು ಅದು ರೂಪಿಸುವ ನೀತಿಗಳ ವಿರುದ್ಧ ಪ್ರಶ್ನಿಸುವ ಹಕ್ಕಿದೆ. ಆದರೆ ಎಲ್ಲ ರಾಜಕೀಯ ಪಕ್ಷಗಳು ಈ ಹಕ್ಕನ್ನು ನಾನಾ ರೂಪದಲ್ಲಿ ಕಸಿಯುತ್ತಿದೆ. ದೇವನಹಳ್ಳಿಯಲ್ಲಿ ರೈತನಿಗೆ ಅನ್ಯಾಯವಾದರೆ 25 ಕಿಲೋ ಮೀಟರ್‌ ದೂರದಲ್ಲಿರುವ ಸ್ವಾತಂತ್ರ್ಯ ಉದ್ಯಾವನಕ್ಕೆ ಬಂದು ಪ್ರತಿಭಟಿಸಬೇಕಾಗಿದೆ. ಹೀಗೆ ಪ್ರತಿಭಟಿಸುವ ಹಕ್ಕನ್ನು ಕೂಡ ಜನರಿಂದ ಕಿತ್ತುಕೊಳ್ಳಲಾಗಿದೆ” ಎಂದು ಎಐಎಸ್‌ಎ ಸದಸ್ಯ ಶರತ್ ಬೇಸರ ವ್ಯಕ್ತಪಡಿಸಿದರು.

ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಷನ್ ಫಾರ್ ಜಸ್ಟೀಸ್‌ನ ಸದಸ್ಯೆ ಶಿಲ್ಪಾ, ಬಹುತ್ವ ಕರ್ನಾಟಕದ ತನ್ವೀರ್, ಅರತ್ರಿಕಾ, ನರಸಿಂಹಮೂರ್ತಿ, ವಿನಯ್ ಕುಮಾರ್ ಮತ್ತಿತರು ಹಾಜರಿದ್ದರು.

PROTEST 11 UAPA PROTEST

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...