ಬಾಂಗ್ಲಾದೇಶ | ಪ್ರತಿಭಟನಾಕಾರರ ಬೆದರಿಕೆ; ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

Date:

ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡಲಾಗಿರುವ ಮೀಸಲಾತಿ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಬಾಂಗ್ಲಾದೇಶದಲ್ಲಿ ಹೊಸ ಸಂಚಲನ ಉಂಟಾಗಿದೆ. ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಆವರಣದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಮತ್ತು ಮೇಲ್ಮನವಿ ವಿಭಾಗದ ನ್ಯಾಯಾಧೀಶರು ಶನಿವಾರ ಮಧ್ಯಾಹ್ನ 1 ಗಂಟೆಯೊಳಗೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಇದಾದ, ಕೆಲವೇ ಗಂಟೆಗಳಲ್ಲಿ ಮುಖ್ಯ ನ್ಯಾಯಮೂರ್ತಿ ಹಸನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅವರು ರಾಜೀನಾಮೆ ನೀಡುವುದಕ್ಕೂ ಮುನ್ನ ಸುಪ್ರೀಂ ಕೋರ್ಟ್‌ ಆವರಣದಲ್ಲಿ ಪ್ರತಿಭಟನಾಕಾರರು ಭಾರೀ ಗದ್ದಲ ಸೃಷ್ಟಿಸಿದ್ದರು. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಖ್ಯ ನ್ಯಾಯಮೂರ್ತಿ ಮತ್ತು ಮೇಲ್ಮನವಿ ವಿಭಾಗದ ನ್ಯಾಯಾಧೀಶರ ನಿವಾಸಗಳಿಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದರು.

ಶನಿವಾರ ಬೆಳಗ್ಗೆ, ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಮಧ್ಯಂತರ ಸರ್ಕಾರದ ಯುವ ಮತ್ತು ಕ್ರೀಡಾ ಸಚಿವಾಲಯದ ಸಲಹೆಗಾರ ಆಸಿಫ್ ಮಹಮೂದ್ ಕೂಡ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಅವರು ಬೇಷರತ್ ರಾಜೀನಾಮೆ ನೀಡಬೇಕು. ನ್ಯಾಯಾಲಯದ ಎಲ್ಲ ವಿಚಾರಣೆ ಮತ್ತು ಸಭೆಗಳನ್ನು ನಿಲ್ಲಿಸಬೇಕು ಒತ್ತಾಯಿಸಿದ್ದರು ಎಂದು ಡೈಲಿ ಸ್ಟಾರ್ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡ ಒಬೈದುಲ್ ಹಸನ್ ಅವರು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ನಿಷ್ಠಾವಂತರಾಗಿದ್ದಾರೆ ಎಂದು ಹೇಳಲಾಗಿದೆ.

ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗಿರುವ ಮೀಸಲಾತಿಯನ್ನು ವಿರೋಧಿಸಿ ಕಳೆದ ಕೆಲ ದಿನಗಳಿಂದ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿ-ಯುವಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟವು ಹಿಂಸಾಚಾರಕ್ಕೆ ತಿರುಗಿದ್ದು, ಕನಿಷ್ಠ 400 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳು ಸರ್ಕಾರಿ ಕಟ್ಟಡಗಳಿಗೆ ನುಗ್ಗಿ ರಾಷ್ಟ್ರೀಯ ಸ್ಮಾರಕಗಳನ್ನು ಧ್ವಂಸಗೊಳಿಸಿದ್ದಾರೆ.

ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ ಬಳಿಕ, ಬ್ಲಾಂಗ್ಲಾ ಪ್ರಧಾನಿ ಶೇಕ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ದೇಶ ತೊರೆದಿದ್ದಾರೆ. ಅವರಿಗೆ ಭಾರತದಲ್ಲಿ ಆಶ್ರಯ ನೀಡಲಾಗಿದೆ. ತಮಗೆ ಆಶ್ರಯ ನೀಡುವಂತೆ ಅವರು ಬ್ರಿಟನ್ ಮತ್ತು ಅಮೆರಿಕಗಳಲ್ಲಿ ಮನವಿ ಮಾಡಿದ್ದರು. ಅವರ ಮನವಿಯನ್ನು ಎರಡೂ ದೇಶಗಳು ತಿರಸ್ಕರಿಸಿವೆ.

ಅವರ ರಾಜೀನಾಮೆಯ ಬಳಿಕ, ಬಾಂಗ್ಲಾ ಸೇನೆಯು ಮಧ್ಯಂತರ ಸರ್ಕಾರ ರಚಿಸಿದ್ದು, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಡಾ. ಮುಹಮ್ಮದ್ ಯೂನಸ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಿದೆ. ಬಾಂಗ್ಲಾದಲ್ಲಿ ಹಿಂಸಾಚಾರವನ್ನು ನಿಯಂತ್ರಿಸಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ತಹಬದಿಗೆ ತರುವುದಾಗಿ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...