ಕಾಂಗ್ರೆಸ್‌ನಲ್ಲಿ ನಿಲ್ಲದ ಮುಖ್ಯಮಂತ್ರಿ ಅಭ್ಯರ್ಥಿ ಕೂಗು, ‘ನಾನೂ ಸಿಎಂ ಆಗುವೆ’ ಎಂದ ಬಸವರಾಜ ರಾಯರೆಡ್ಡಿ

Date:

ಖಾಲಿ ಇಲ್ಲದ ಸಿಎಂ ಕುರ್ಚಿಗಾಗಿ ಕ್ಷುಲ್ಲಕ ರಾಜಕಾರಣದಲ್ಲಿ ಮುಳುಗೇಳಿ, ವ್ಯರ್ಥ ಹೇಳಿಕೆ ಕೊಡುವ ನಾಯಕರ ಸಂಖ್ಯೆ ಹೆಚ್ಚುತ್ತಿದೆ. ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಕೂಡ ತಾವೂ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಕೆ ನೀಡಿದ್ದಾರೆ.

ಕೊಪ್ಪಳ ನಗರದಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಮುಖ್ಯಮಂತ್ರಿಯಾಗಲು ಕೆಲವರು ಆಸೆ ಪಡುತ್ತಿದ್ದಾರೆ. ಆದರೆ ಬೇರೆಯವರಿಗೆ ಸಿಎಂ ಸ್ಥಾನ ಕೊಡುವುದಾದರೆ ನನಗೂ ಕೊಡಿ. ನಾನು ಪಕ್ಷದಲ್ಲಿ ಹಿರಿಯ ಇದ್ದೇನೆ. ಕಲ್ಯಾಣ ಕರ್ನಾಟಕ ಭಾಗ ಪರಿಗಣಿಸಿದರೆ ಸಿಎಂ ಸ್ಥಾನದಲ್ಲಿ ನಾನೇ ಮುಂಚೂಣಿಯಲ್ಲಿರುವೆ” ಎಂದರು.

ಆರ್‌ ವಿ ದೇಶಪಾಂಡೆ ಮುಖ್ಯಮಂತ್ರಿ ಸ್ಥಾನದ ಕುರಿತು ನೀಡಿದ ಹೇಳಿಕೆಯಲ್ಲಿ ಏನು ತಪ್ಪಿದೆ? ನಾನು ಕೂಡ ಲಿಂಗಾಯತ ನಾಯಕ. ಬಿ ಆರ್‌ ಪಾಟೀಲ್‌ ಮತ್ತು ನಾನು ಹಿರಿಯರಿದ್ದೇವೆ. ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಕೊಡುವುದಾದರೆ ನನಗೆ ಕೊಡಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೈಕಮಾಂಡ್ ಬಯಸಿದ್ರೆ ನಾನೂ ಸಿಎಂ ಆಗುವೆ: ಸಚಿವ ಶರಣಬಸಪ್ಪ ದರ್ಶನಾಪುರ

ಯಾದಗಿರಿಯಲ್ಲಿ ಮಾತನಾಡಿದ ಸಚಿವ ಶರಣಬಸಪ್ಪ ದರ್ಶನಾಪುರ, “ಹೈಕಮಾಂಡ್ ಹೇಳಿದದರೆ ನಾನು ಸಿಎಂ ಆಗುತ್ತೇನೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗು ಅಂದರೆ ಸಿಎಂ ಆಗುವೆ. ಮನುಷ್ಯ ಅಂದಮೇಲೆ ಎಲ್ಲರಿಗೂ ಆಸೆಗಳು ಇರುತ್ತದೆ. ಆಸೆ ಇಲ್ಲದೆ ಇರೋರು ಮನುಷ್ಯನೇ ಅಲ್ಲ. ಆದರೆ, ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ” ಎಂದರು.

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿದಾಗ, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ನಡೆದು, ಕೊನೆಗೆ ಸಿದ್ದರಾಮಯ್ಯ ಅವರಿಗೆ ಸಿಎಂ ಪಟ್ಟ ಸಿಕ್ಕಿತು.

ಕೆಪಿಸಿಸಿ ಅಧ್ಯಕ್ಷರಾಗಿದ್ದು, ಪಕ್ಷ ಬಹುಮತ ಗಳಿಸಿದಾಗಲೂ ಮುಖ್ಯಮಂತ್ರಿ ಪಟ್ಟ ಸಿಗದೆ ಡಿಸಿಎಂ ಸ್ಥಾನಕ್ಕೆ ತಾತ್ಕಾಲಿಕವಾಗಿ ತೃಪ್ತಿಪಟ್ಟುಕೊಂಡಿರುವ ಡಿ ಕೆ ಶಿವಕುಮಾರ್ ಅವರು ಈಗಲೂ ಸಿಎಂ ಆಗುವ ಪ್ರಯತ್ನದ ಹಾದಿಯಲ್ಲೇ ಇದ್ದಾರೆ.

ಆದರೆ ಮುಡಾ ಪ್ರಕರಣ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್ ಮೊದಲ್ಗೊಂಡು ಹಿರಿಯ ನಾಯಕ ಆರ್‌ ವಿ ದೇಶಪಾಂಡೆ, ಡಾ. ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್ ವರೆಗೆ ‘ನಾನೂ ಮುಖ್ಯಮಂತ್ರಿ ಅಭ್ಯರ್ಥಿ’ ಎನ್ನುವುದು ಸಾಮಾನ್ಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...