ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕ ಅಂಗೀಕಾರ: ತೆರಿಗೆ ಬಾಕಿ ಮೇಲಿನ ದಂಡ ಶೇ.50ರಷ್ಟು ಇಳಿಕೆ

Date:

ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇಕಡ 50ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು.

ವಿಧಾನಸಭೆಯಲ್ಲಿ ಭೋಜನ ವಿರಾಮದ ನಂತರ ನಡೆದ ಕಲಾಪದಲ್ಲಿ ಬೆಂಗಳೂರು ನಗರಾಭಿವೃದ್ದಿ ಖಾತೆಯನ್ನೂ ಹೊಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.

ಈ ವಿಧೇಯಕದಿಂದ ಬೆಂಗಳೂರಿನ ನಾಗರಿಕರಿಗೆ ತೆರಿಗೆ ಬಾಬ್ತು, ದಂಡ ವಿನಾಯಿತಿ ಸೇರಿ ಸುಮಾರು ರೂ. 2,700 ಕೋಟಿ ರೂಪಾಯಿಯಷ್ಟು ಅನುಕೂಲವಾಗಲಿದೆ. ಜತೆಗೆ ಪಾಲಿಕೆಗೆ ಸುಮಾರು ರೂ.1,000 ಕೋಟಿಯಷ್ಟು ಆಸ್ತಿ ತೆರಿಗೆ ಬರಲಿದೆ. ಸುಮಾರು 5.51 ಲಕ್ಷ ತೆರಿಗೆ ಬಾಕಿದಾರರು, ಸುಮಾರು 5-7 ಲಕ್ಷ ತೆರಿಗೆ ವ್ಯಾಪ್ತಿಗೆ ಬಾರದವರು ಹಾಗೂ 3 ಲಕ್ಷದಷ್ಟು ಮಂದಿ ಭಾಗಶಃ ತೆರಿಗೆ ಪಾವತಿದಾರರಿಗೆ ಒಟ್ಟಾರೆ 13 ರಿಂದ 15 ಲಕ್ಷ ಜನರಿಗೆ ಅನುಕೂಲವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಧೇಯಕದಲ್ಲಿ ಬಡ ಹಾಗೂ ದುರ್ಬಲ ವರ್ಗದವರಿಗೆ ವಿಶೇಷ ವಿನಾಯಿತಿ ನೀಡಲಾಗಿದೆ. ಸರ್ಕಾರದ ವಸತಿ ಯೋಜನೆಯ ಆಸ್ತಿಗಳು ಹಾಗೂ ಕೊಳೆಗೇರಿ ಪ್ರದೇಶದ ಕಟ್ಟಡಗಳಿಗೆ ಬಡ್ಡಿ ಮೇಲಿನ ದಂಡ ಇರುವುದಿಲ್ಲ. 1 ಸಾವಿರ ಚದರ ಅಡಿ ವರೆಗಿನ ಸ್ವಯಂ ಬಳಕೆ ಆಸ್ತಿದಾರರಿಗೆ ಸಂಪೂರ್ಣ ದಂಡ ವಿನಾಯಿತಿ ನೀಡಲಾಗಿದೆ.

ವಸತಿ ಮತ್ತು ಮಿಶ್ರ ಆಸ್ತಿದಾರರ (ವಸತಿ ಮತ್ತು ವಾಣಿಜ್ಯ) ಬಾಕಿಯನ್ನು ಎಷ್ಟೇ ವರ್ಷದಿಂದ ಉಳಿಸಿಕೊಂಡಿದ್ದರೂ ಹಿಂದಿನ 5 ವರ್ಷಕ್ಕೆ ಮಾತ್ರ ಲೆಕ್ಕಾಚಾರ ಹಾಕಲು ನಿರ್ಧರಿಸಲಾಗಿದೆ. 5 ವರ್ಷಕ್ಕಿಂತ ಹಿಂದಿನ ಅವಧಿಗೆ ಬಡ್ಡಿ ಮನ್ನಾ ಮಾಡಲಾಗಿದೆ.

“ಇದೊಂದು ಜನಸ್ನೇಹಿ ತಿದ್ದುಪಡಿಯಾಗಿದ್ದು, ಸರ್ಕಾರಕ್ಕೆ ನಷ್ಟವಾದರೂ ಪರವಾಗಿಲ್ಲ, ಜನರಿಗೆ ಅನುಕೂಲವಾಗಲಿ ಎಂದು ಈ ಕಾನೂನನ್ನು ಜಾರಿಗೆ ತರಲಾಗಿದೆ” ಎಂದು ಶಿವಕುಮಾರ್ ಅವರು ಸದನದಲ್ಲಿ ತಿಳಿಸಿದರು.

ಇದನ್ನು ಓದಿದ್ದೀರಾ? ಪ್ರಧಾನಿ ಬಗ್ಗೆ ಜಾತಿ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಜೈಪುರದಲ್ಲಿ ಪ್ರಕರಣ ದಾಖಲು

ಹಿಂದಿನ ಬಿಜೆಪಿ ಸರಕಾರ ತಂದಿದ್ದ ತಿದ್ದುಪಡಿ ವಿಧೇಯಕ ಅಂಗೀಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡ ತೆರಿಗೆ ಮೇಲೆ ದುಪ್ಪಟ್ಟು ದಂಡ ಪಾವತಿಸಬೇಕಾಗಿ ಬಂದು ಬೆಂಗಳೂರು ನಾಗರಿಕರು ತೀವ್ರ ಸಂಕಷ್ಟಕ್ಕೆ ಸಿಕ್ಕಿದ್ದರು. ತೆರಿಗೆ ಮೊತ್ತಕ್ಕಿಂತ ದಂಡದ ಪ್ರಮಾಣವೇ ಸಿಕ್ಕಾಪಟ್ಟೆ ಹೆಚ್ಚಾಗಿತ್ತು. ಈಗ ಸರಕಾರವು ಹಿಂದಿನ ಸರಕಾರ ಅಂಗಿಕರಿಸಿದ್ದ ಕಾಯ್ದೆಗೆ ತಿದ್ದುಪಡಿ ತಂದು ನಾಗರಿಕರ ತೆರಿಗೆ ಹೊರೆ ಕಡಿಮೆ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...