ಸುಮ್ಮನಿರದಿದ್ದರೆ ನಿಮ್ಮ ಮನೆಗಳಿಗೆ ಇಡಿ ಕಳಿಸಬೇಕಾಗುತ್ತದೆ: ವಿಪಕ್ಷ ಸದಸ್ಯರಿಗೆ ಕೇಂದ್ರ ಸಚಿವೆ ಎಚ್ಚರಿಕೆ

Date:

ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರು ಗುರುವಾರ(ಆಗಸ್ಟ್‌ 03) ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರನ್ನು ಬೆದರಿಸಿದ ಪ್ರಸಂಗ ನಡೆಯಿತು.

ದೆಹಲಿ ಸೇವಾ ಮಸೂದೆ ಅಂಗೀಕರಿಸುವ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಚರ್ಚೆ ನಡೆಸುತ್ತಿರುವಾಗ ವಿಪಕ್ಷದ ಒಬ್ಬ ಸಂಸದರು ಮಸೂದೆಯ ವಿರುದ್ಧ ಸದನದಲ್ಲಿ ಪ್ರತಿಭಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಕೇಂದ್ರ ಸಂಸ್ಕೃತಿ ಖಾತೆಯ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ, ಒಂದು ನಿಮಿಷ ಸುಮ್ಮನಿರಿ, ಇಲ್ಲದಿದ್ದರೆ ನಿಮ್ಮ ಮನೆಗೆ ಇಡಿ ಬರಬಹುದು ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಸೂದೆ ವಿರುದ್ಧ ಬಹುತೇಕರು ಪ್ರತಿಭಟನೆಯಲ್ಲಿ ನಿರತರಾಗಿದ್ದ ಕಾರಣ ಸಚಿವರ ಬೆದರಿಕೆಯ ಹೇಳಿಕೆ ಸದನದಲ್ಲಿದ್ದ ಹಲವರಿಗೆ ಕೇಳಿಸಲಿಲ್ಲ.

ಮೀನಾಕ್ಷಿ ಲೇಖಿಯವರ ಹೇಳಿಕೆ ಈಗ ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ; ವಿಪಕ್ಷಗಳ ಸಭಾತ್ಯಾಗ

ಎನ್‌ಸಿಪಿ ವಕ್ತಾರ ಕ್ಲೈಡ್ ಕ್ರಾಸ್ಟೊ, ಮೀನಾಕ್ಷಿ ಲೇಖಿ ಅವರ ಹೇಳಿಕೆಯು ಕೇಂದ್ರೀಯ ಸಂಸ್ಥೆಗಳನ್ನು ಸರ್ಕಾರ “ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂಬ ವಿರೋಧ ಪಕ್ಷದ ಆರೋಪಗಳನ್ನು “ಸಾಬೀತುಪಡಿಸಿದೆ” ಎಂದು ಹೇಳಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರು ಲೋಕಸಭೆಯಲ್ಲಿ ಲೇಖಿ ಅವರ ಹೇಳಿಕೆಗಳು “ಎಚ್ಚರಿಕೆಯೋ ಅಥವಾ ಬೆದರಿಕೆಯೋ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ ಜೀನ್ಸ್‌ ಘಟಕಗಳಿಗೆ ಸೌಲಭ್ಯ ಕಲ್ಪಿಸಿ: ರಾಜ್ಯ ಸರ್ಕಾರಕ್ಕೆ ರಾಹುಲ್‌ ಪತ್ರ

ಟಿಎಂಸಿ ವಕ್ತಾರ ಸಾಕೇತ್ ಗೋಖಲೆ, “ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರು ಸಂಸತ್ತಿನಲ್ಲಿ ಪ್ರತಿಪಕ್ಷಗಳಿಗೆ ಬೆದರಿಕೆ ಹಾಕಿರುವುದು ಆಘಾತಕಾರಿ ಘಟನೆಯಾಗಿದೆ. ಬಿಜೆಪಿ ಮಂತ್ರಿಗಳು ಈಗ ಬಹಿರಂಗವಾಗಿಯೇ ಪ್ರತಿಪಕ್ಷಗಳ ವಿರುದ್ಧ ಬೆದರಿಸ ತೊಡಗಿದ್ದಾರೆ. ಪ್ರತಿಕಾರವು ಇನ್ನು ಮುಂದೆ ಮರೆಯಾಗಿರದೆ ನೇರವಾಗಿರುತ್ತದೆ” ಎಂದು ಹೇಳಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ನಾಯಕ ಭರತ್ ರೆಡ್ಡಿ ಕೇಂದ್ರ ಸಚಿವರ ಹೇಳಿಕೆಯ ವಿರುದ್ಧ ಕಿಡಿಕಾರಿದ್ದಾರೆ.

“ಕೇಂದ್ರ ಸಚಿವೆ ಲೇಖಿ ಅವರು ಸಂಸತ್ತಿನಲ್ಲಿ ವಿರೋಧ ಪಕ್ಷದ ಸಂಸದರಿಗೆ ಬೆದರಿಕೆ ಹಾಕಿದ್ದಾರೆ. ಬಿಜೆಪಿ ಸಚಿವರು ಈಗ ಸಂಸತ್ತಿನಲ್ಲಿ ಮಾತನಾಡಿದ್ದಕ್ಕಾಗಿ ಪ್ರತಿಪಕ್ಷಗಳ ವಿರುದ್ಧ ಇಡಿ ಬಳಸುವುದಾಗಿ ಬಹಿರಂಗವಾಗಿ ಎಚ್ಚರಿಕೆ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ”ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...