ಪ್ರಧಾನಿ ಮೋದಿ ಅವಧಿಯಲ್ಲಿ ಈ ಹಿಂದಿಗಿಂತ ಅಧಿಕ ಗೋಮಾಂಸ ರಫ್ತು: ದಯಾನಂದ ಸ್ವಾಮೀಜಿ

Date:

ಪ್ರಧಾನಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ದೇಶದಲ್ಲಿ ಈ ಹಿಂದಿಗಿಂತ ಅಧಿಕ ಗೋಮಾಂಸವನ್ನು ರಫ್ತು ಮಾಡಲಾಗುತ್ತಿದೆ. ನಮ್ಮ ದೇಶದ ಗೋಮಾಂಸ ರಫ್ತಿನಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ವಿಶ್ವಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ, ಬೆಂಗಳೂರು ವಿಶ್ವ ಗೋರಕ್ಷಾ ಮಹಾಪೀಠದ ದಯಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ತಾವು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಗೋಮಾಂಸ ರಫ್ತು ಮತ್ತು ಗೋಹತ್ಯೆ ನಿಷೇಧಿಸದ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದ್ದ ಮೋದಿ ಅವರು ಈಗ ಮೂರು ಬಾರಿ ಪ್ರಧಾನಿಯಾಗಿದ್ದಾರೆ. ಆದರೂ ಗೋಹತ್ಯೆಯನ್ನು ನಿಷೇಧ ಮಾಡಿಲ್ಲ. ಅಷ್ಟು ಮಾತ್ರವಲ್ಲದೆ ಅವರ ಅವಧಿಯಲ್ಲಿಯೇ ಮೊದಲಿಗಿಂತ ಅಧಿಕ ಪ್ರಮಾಣದಲ್ಲಿ ಗೋಮಾಂಸ ರಫ್ತಾಗುತ್ತಿದೆ. ಆರ್‌ಎಸ್‌ಎಸ್‌ ಕೂಡಾ ಈ ವಿಚಾರದಲ್ಲಿ ಮಾತನಾಡುತ್ತಿಲ್ಲ” ಎಂದು ಟೀಕಿಸಿದರು.

ಇದನ್ನು ಓದಿದ್ದೀರಾ? ಗೋಮಾಂಸ ಸಾಗಾಟ | ಸುಲಿಗೆಕೋರರೂ ಸೇರಿ ಸುಲಿಗೆಗೊಳಗಾದವರೂ ಬಂಧನ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ಪ್ರತಿದಿನ ಗೋವಂಶದ ಪ್ರಾಣಿಗಳನ್ನು ಹತ್ಯೆ ಮಾಡಿ ಅದರ ಮಾಂಸ, ಚರ್ಮ ವಿದೇಶಗಳಿಗೆ ರಫ್ತು ಮಾಡಲಾಗುತ್ತಿದ್ದು, ಇದು ಕಳವಳಕಾರಿ. ಅಂಹಿಸೆ ತತ್ವ ಬೋಧಿಸುವ ನಾವು ಮಾಡಿ ಮಾಂಸ ರಫ್ತು ಮಾಡಿ ವಿಶ್ವವನ್ನೇ ಮಾಂಸಹಾರಿ ಮಾಡಲು ಮುಂದಾಗಿದ್ದೇವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಆದರೆ ಕೇಂದ್ರ ಸರ್ಕಾರ ಯಾಕೆ ಗೋಹತ್ಯೆ ನಿಷೇಧಿಸುತ್ತಿಲ್ಲ” ಎಂದು ಪ್ರಶ್ನಿಸಿದರು. ಹಾಗೆಯೇ ಪ್ರಧಾನಿ ಈಗಲಾದರೂ ಗೋಮಾಂಸ ರಫ್ತು ನಿಷೇಧಿಸಬೇಕು, ದೇಶವನ್ನು ಮಾಂಸ ರಫ್ತು ಮುಕ್ತ ದೇಶವನ್ನಾಗಿಸಬೇಕು ಎಂದು ಒತ್ತಾಯಿಸಿದರು.

ಗೋಮಾಂಸ ಸೇವನೆಯನ್ನು ರಾಜಕೀಯಗೊಳಿಸಿರುವ ಬಿಜೆಪಿ ಸರ್ಕಾರಗಳು ತಮ್ಮ ಆಡಳಿತವಿರುವ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧಿಸಿದೆ. ಆದರೆ ದೇಶದಲ್ಲಿ ಗೋಮಾಂಸ ರಫ್ತು ಮಾತ್ರ ಹೆಚ್ಚಳವಾಗುತ್ತಿದೆ. ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಗೋಮಾಂಸ ರಫ್ತು ಮಾಡುವ ದೇಶಗಳಲ್ಲಿ ಒಂದಾಗಿದ್ದು ಮೂರನೇ ಸ್ಥಾನದಲ್ಲಿದೆ.

ಎಮ್ಮೆ ಮಾಂಸ ರಫ್ತು 2024ರಿಂದ 2025ರ ವೇಳೆಗೆ ಶೇ.4ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಅಂದರೆ 1.65 ಮಿಲಿಯನ್ ಮೆಟ್ರಿಕ್ ಟನ್‌ಗಳಷ್ಟು ರಫ್ತು ದಾಖಲಾಗುವ ಸಾಧ್ಯತೆಯಿದೆ. ಇದರಿಂದ ಕೇಂದ್ರ ಸರ್ಕಾರ ಉತ್ತಮ ಆದಾಯವನ್ನೂ ಗಳಿಸುತ್ತಿದೆ. ಹಣಕಾಸು ವರ್ಷ 2024-25ರಲ್ಲಿ $3.92 ಶತಕೋಟಿಗೂ ಹೆಚ್ಚು ಕೇಂದ್ರದ ಬೊಕ್ಕಸಕ್ಕೆ ಸೇರಿದೆ. ಆದರೆ ದೇಶದಲ್ಲಿ ಮಾತ್ರ ಬಿಜೆಪಿ ಆಹಾರದ ಹಕ್ಕಿಗೆ ಧಕ್ಕೆ ತಂದು ರಾಜಕೀಯ ಮಾಡುತ್ತಿರುವುದು ವಿಪಕ್ಷಗಳ ಟೀಕೆಗೆ ಕಾರಣವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...