ಗೋಮಾಂಸ ರಫ್ತು ಉದ್ಯಮವನ್ನು ಜೈನರು ಕಬ್ಜ ಮಾಡಿದ್ದಾರೆ: ಅಗ್ನಿ ಶ್ರೀಧರ್

Date:

ಗೋಮಾಂಸ ರಫ್ತು ಉದ್ಯಮದಲ್ಲಿ ಮುಸ್ಲಿಂ ಸಮುದಾಯದ ಪಾಲು ಕಡಿಮೆಯಾಗಿದೆ. ಆ ಜಾಗವನ್ನು ಜೈನ ಸಮುದಾಯ ಕಬ್ಜ ಮಾಡುತ್ತಿದೆ. ಗೋಮಾಂಸ ರಫ್ತಿನಲ್ಲಿ ಜೈನ ಸಮುದಾಯದ ಕೆಲವರು ತೊಡಗಿದ್ದು, ಅವರು ವಾರ್ಷಿಕ 40,000 ಕೋಟಿ ರೂ. ವಹಿವಾಟು ನಡೆಸುತ್ತಿದ್ದಾರೆ ಎಂದು ರಾಷ್ಟ್ರೀಯ ದ್ರಾವಿಡ ಸಂಘದ (ಆರ್‌ಡಿಎಸ್‌) ಅಧ್ಯಕ್ಷ ಅಗ್ನಿ ಶ್ರೀಧರ್ ಆರೋಪಿಸಿದ್ದಾರೆ.

ಮುಸ್ಲಿಂ ಸಮುದಾಯದವನ್ನು ಗೋಮಾಂಸ ರಫ್ತು ಉದ್ಯಮದಿಂದ ಹೊರಗಿಡಲು ಆರ್‌ಎಸ್‌ಎಸ್‌ ಅಣತಿಯಂತೆ ಬಿಜೆಪಿ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದೆ. ಈ ಕಾಯ್ದೆ ಜಾರಿಯಾಗುವುದರ ಹಿಂದೆ ಜೈನ ಸಮುದಾಯದ ಹುನ್ನಾರವೂ ಇದೆ ಎಂದು ಆರೋಪ ಮಾಡಿದ್ದಾರೆ.

ಮುಸ್ಲಿಮರಲ್ಲಿ ಹಲವರು ಗೋಮಾಂಸ ತಿನ್ನುವುದಿಲ್ಲ. ಆದರೆ, ಗೋಹತ್ಯೆ ಅಂತ ಬಂದಾಗೆಲ್ಲ ಗೋಮಾಂಸ ಮುಸ್ಲಿಮರ ಆಹಾರವೆಂದು ಪ್ರಚಾರ ಮಾಡುತ್ತಿದೆ. ಹೆಚ್ಚಾಗಿ ಗೋಮಾಂಸ ತಿನ್ನುವವರು ದಲಿತರು ಮತ್ತು ಕ್ರೈಸ್ತರು. ಆದರೆ, ಇದನ್ನು ಉದ್ದೇಶಪೂರ್ವಕವಾಗಿ ಮರೆಮಾಚಲಾಗುತ್ತಿದೆ. ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ವಿಷ ಬಿತ್ತಲಾಗುತ್ತಿದೆ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಸುವನ್ನು ಕೊಂದರೆ ತಾಯಿಯನ್ನೇ ಕೊಂದಂತೆ ಎಂದು ಭಾವನಾತ್ಮಕ ಹೇಳಿಕೆಗಳನ್ನು ಸಂಘಪರಿವಾರ ನೀಡುತ್ತಿದೆ. ಆ ಮೂಲಕ ಜನರ ಭಾವನೆಗಳನ್ನು ಕೆರಳಿಸುತ್ತಿದೆ. ಗೋಮಾಂಸದ ವಿಚಾರದಲ್ಲಿ ಆಹಾರದ ಹಕ್ಕನ್ನು ಬದಿಗೆ ಸರಿಸಿ, ಭಾವನಾತ್ಮಕ ಅಂಶಗಳನ್ನು ಮುನ್ನೆಲೆಗೆ ತರಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಗೋವನ್ನು ತಾಯಿ ಎನ್ನುವವರು ಯಾಕೆ ಜಾತ್ರೆಗಳಲ್ಲಿ ಅವುಗಳನ್ನು ಮಾರಾಟ-ಖರೀದಿ ಮಾಡುತ್ತಿದ್ದಾರೆ? ಗೋಮಾತೆಯನ್ನು ಯಾಕೆ ರಸ್ತೆಯಲ್ಲಿ ಬಿಡುತ್ತಿದ್ದಾರೆ ಎಂದು ಹಸುವಿನ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವವರನ್ನು ಪ್ರಶ್ನಿಸಬೇಕು ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...