ಬೆಳಗಾವಿ ಅಧಿವೇಶನ | ಸದನದಲ್ಲೂ ಎದ್ದುಕಂಡ ಬಿಜೆಪಿ ಶಾಸಕರ ಗುಂಪುಗಾರಿಕೆ!

Date:

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ವೇಳೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದ ನಡೆಸುತ್ತಿದ್ದ ಚರ್ಚೆಯ ವೇಳೆ ಅರ್ಧ ಶಾಸಕರು ವಿಪಕ್ಷ ನಾಯಕ ಆರ್. ಅಶೋಕ್ ಅವರೊಂದಿಗೆ ತೆರಳಿದರೆ, ಇನ್ನರ್ಧ ಶಾಸಕರು ವಿಜಯೇಂದ್ರರೊಂದಿಗೆ ನಿಂತ ಪ್ರಸಂಗ ನಡೆಯಿತು.

ಇತ್ತೀಚೆಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯನಾಗಿರುವ ಪೃಥ್ವಿ ಸಿಂಗ್ ಮೇಲೆ ಬೆಳಗಾವಿಯ ಜಯನಗರದ ನಿವಾಸದ ಬಳಿ ಹಲ್ಲೆ ಮಾಡಲಾಗಿತ್ತು. ಈ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಉತ್ತರ ನೀಡುತ್ತಿದ್ದರು. ಅವರ ಉತ್ತರದಿಂದ ಸಮಾಧಾನಗೊಳ್ಳದ ಬಿಜೆಪಿ ಶಾಸಕರು, ಆರೋಪಿಗಳನ್ನು ಬಂಧಿಸಬೇಕೆಂದು ಪಟ್ಟು ಹಿಡಿದು ಬೊಬ್ಬೆ ಹೊಡೆಯಲು ಆರಂಭಿಸಿದ್ದರಿಂದ ಸದನದಲ್ಲಿ ಗದ್ದಲ ಉಂಟಾಯಿತು.

ಈ ವೇಳೆ ವಿಪಕ್ಷ ನಾಯಕರಾದ ಆರ್ ಅಶೋಕ್, ‘ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆಯುತ್ತಿದ್ದರೂ ಸರ್ಕಾರ, ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ನಮಗೆ ಈ ಸರ್ಕಾರದಿಂದ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಇಲ್ಲ” ಎಂದು ಹೇಳುತ್ತಾ ಹೊರ ನಡೆದರು. ಅವರೊಂದಿಗೆ ಅರ್ಧ ಬಿಜೆಪಿ ಶಾಸಕರು ತೆರಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ashok

ಆದರೆ, ಇನ್ನರ್ಧ ಶಾಸಕರು ಕುರ್ಚಿ ಬಿಟ್ಟು ಎದ್ದೇಳಲೇ ಇಲ್ಲ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಕೆಲವು ಶಾಸಕರು ಧರಣಿ ನಡೆಸಲು ಮುಂದಾದರು. ಈ ವೇಳೆ ಶಾಸಕ ಗೋಪಾಲಯ್ಯ, ವಿಜಯೇಂದ್ರ ಅವರಿಗೆ ಸದನದ ಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು, ಅಶೋಕ್ ಅವರೊಂದಿಗೆ ನಾವೂ ಕೂಡ ತೆರಳುವಂತೆ ಸೂಚಿಸುವುದು ಕಂಡು ಬಂತು. ಸದನದೊಳಗೆ ವಿಜಯೇಂದ್ರ ಅವರ ನೇತೃತ್ವದಲ್ಲಿ ಗುಂಪುಗೂಡಿ ಚರ್ಚೆ ನಡೆಸಿದ ಬಳಿಕ ಬಿಜೆಪಿ ಶಾಸಕರು ಅಲ್ಲಿಂದ ತೆರಳಿದರು.

ಈ ವೇಳೆ ಬಿಜೆಪಿಯಲ್ಲಿ ಸಮನ್ವಯತೆ, ಒಗ್ಗಟ್ಟು ಇಲ್ಲ ಎಂಬುದು ಮೇಲ್ನೋಟಕ್ಕೇ ತಿಳಿಯುತ್ತಿದ್ದು, ಬಿಜೆಪಿಯೊಳಗಿನ ಗುಂಪುಗಾರಿಕೆ ಎದ್ದು ಕಾಣುತ್ತಿತ್ತು ಎಂದು ಕಾಂಗ್ರೆಸ್ ಶಾಸಕರು ಕಿಚಾಯಿಸಿದ್ದೂ ನಡೆಯಿತು.

ಇದೇ ಸಂದರ್ಭದಲ್ಲಿ ಎದ್ದು ನಿಂತ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ, “ಬಿಜೆಪಿಯವರಲ್ಲಿ ಧರಣಿ ನಡೆಸುವವರ ಒಂದು ಗುಂಪು, ವಾಕೌಟ್ ಮಾಡುವವರದ್ದು ಒಂದು ಗುಂಪು. ಸರ್ಕಾರ 110 ಕೋಟಿ ಖರ್ಚು ಮಾಡಿ ಬೆಳಗಾವಿಗೆ ಬರುವಂತೆ ಮಾಡುತ್ತೆ. ಬಿಜೆಪಿಯವರು ಸದನ ನಡೆಸುವುದಕ್ಕೆ ಅವಕಾಶ ಮಾಡಿಕೊಡುವುದನ್ನು ಬಿಟ್ಟು, ಸಣ್ಣಪುಟ್ಟ ವಿಷಯಗಳಿಗೆ ಸದನ ತೊರೆಯುವುದೇ ಆಯ್ತು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಬಿಜೆಪಿ ಸದಸ್ಯರ ವಿರುದ್ಧ ಸ್ಪೀಕರ್ ಯು ಟಿ ಖಾದರ್ ಕೂಡ, ಏನು ಪದೇ ಪದೇ ಗಲಾಟೆ ಮಾಡ್ತಿರಿ, ಬರಗಾಲದ ಬಗ್ಗೆ ಚರ್ಚೆ ಮಾಡಿ ಎಂದು ವಿನಂತಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...