ಇಂದಿನಿಂದ ಬೆಳಗಾವಿ ಅಧಿವೇಶನ ಆರಂಭ; ಸರ್ಕಾರದ ವಿರುದ್ಧ ಪ್ರಹಾರಕ್ಕೆ ವಿಪಕ್ಷ ಸಜ್ಜು

Date:

ಇಂದಿನಿಂದ ಬೆಳಗಾವಿ ಅಧಿವೇಶನ ಆರಂಭವಾಗಲಿದ್ದು ಬಾಣಂತಿಯರ ಸಾವು, ಮುಡಾ ಪ್ರಕರಣ, ಶಿಶು ಮರಣ ಪ್ರಮಾಣ, ವಕ್ಫ್ – ಹೀಗೆ ಹಲವು ವಿಚಾರಗಳಲ್ಲಿ ಸರ್ಕಾರದ ವಿರುದ್ಧ ತರಾಟೆ ನಡೆಸಲು ವಿಪಕ್ಷಗಳು ಸಜ್ಜಾಗಿದೆ. ಬಾಣಂತಿಯರ ಸಾವು ಪ್ರಕರಣ, ವಕ್ಫ್ ವಿವಾದಗಳನ್ನು ವಿಪಕ್ಷಗಳು ಹೆಚ್ಚು ಚರ್ಚೆಗೆಳೆಯುವ ಸಾಧ್ಯತೆಯಿದೆ.

ಮುಡಾ ಪ್ರಕರಣ, ವಾಲ್ಮೀಕಿ ಹಗರಣ, ಅಬಕಾರಿ ಸಚಿವರ ವಿರುದ್ಧ 700 ಕೋಟಿ ರೂಪಾಯಿ ಹಗರಣದ ಆರೋಪ, ಬಾಣಂತಿಯರ ಸಾವು ಮೊದಲಾದ ಅಸ್ತ್ರಗಳನ್ನು ಬಿಜೆಪಿ-ಜೆಡಿಎಸ್ ಸರ್ಕಾರದೆಡೆ ಪ್ರಯೋಗಿಸುವ ಸಾಧ್ಯತೆಯಿದೆ. ಸರ್ಕಾರದ ವಿರುದ್ಧ ಒಗ್ಗಟ್ಟಾಗಿ ಪ್ರಹಾರ ಮಾಡಲು ತಮ್ಮ ಬಂಡಾಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ವಿಪಕ್ಷ ನಾಯಕ ಆರ್ ಅಶೋಕ್ ವಿಶ್ವಾಸಕ್ಕೆ ಪಡೆಯುವ ಸಕಲ ಪ್ರಯತ್ನ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ | ಚಳಿಗಾಲ ಅಧಿವೇಶನ ಮಾದರಿಯಾಗಿ ನಡೆಸಬೇಕಿದೆ: ಸಭಾಧ್ಯಕ್ಷ ಯು ಟಿ ಖಾದರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನೊಂದೆಡೆ ಕಾಂಗ್ರೆಸ್ ಸರ್ಕಾರವು ಕೋವಿಡ್ ಹಗರಣ, ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ, ಬಿಡಿಎ ಹಗರಣ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ, ಪ್ರಜ್ವಲ್ ರೇವಣ್ಣ ಪ್ರಕರಣ – ಹೀಗೆ ಹಲವು ಬಾಣಗಳಿಂದ ಪ್ರತಿದಾಳಿ ನಡೆಸಲು ಅಣಿಯಾಗಿದೆ.

ಕರ್ನಾಟಕ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟಗಳು ಬಹಿರಂಗವಾಗಿಯೇ ಎದ್ದು ಕಾಣುತ್ತಿದೆ. ಆದರೆ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ತಮ್ಮೆಲ್ಲ ಮನಸ್ತಾಪವನ್ನು ಬದಿಗೊತ್ತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಮುಂದಾಗಿದೆ.

ಇಂದಿನಿಂದ ಡಿಸೆಂಬರ್ 20ರವರೆಗೆ ಬೆಳಗಾವಿ ಅಧಿವೇಶನ ನಡೆಯಲಿದೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಅಧಿವೇಶನ ಆರಂಭವಾಗಲಿದೆ. ಇದಕ್ಕೂ ಮುನ್ನ 10.30ಕ್ಕೆ ಐತಿಹಾಸಿಕ ಅನುಭವ ಮಂಟಪ ಸ್ಮರಣೆಯ ಬೃಹತ್ ತೈಲ ವರ್ಣದ ಚಿತ್ರದ ಅನಾವರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...