ಬೆಳಗಾವಿಗೆ ಜಗದೀಶ ಶೆಟ್ಟರ್‌ರಿಂದ ಅನ್ಯಾಯ: ಟಿಕೆಟ್ ನೀಡದಂತೆ ಒತ್ತಾಯ

Date:

ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಆದರೂ ಸಹ ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಬಿಜೆಪಿ ವರಿಷ್ಠರು ಜಗದೀಶ ಶೆಟ್ಟರ್‌ಗೆ ಟಿಕೆಟ್ ಎಂದು ಹೇಳಿದ್ದರೂ ಸಹ ಅದು ಇನ್ನೂ ಸ್ಪಷ್ಟವಾಗಿಲ್ಲ. ಹೀಗಿರುವಾಗ ಜಗದೀಶ ಶೆಟ್ಟರ ಬೆಳಗಾವಿ ಲೋಕಸಭೆಗೆ ಬೇಡವೇ ಬೇಡ ಎಂಬ ಕೂಗು ಕೇಳಿ ಬರುತ್ತಿದೆ.

ಜಗದೀಶ್ ಶೆಟ್ಟರ ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿ ಜಿಲ್ಲೆಯನ್ನು ಕಡೆಗಣಿಸಿದ್ದಾರೆ. ಬೆಳಗಾವಿಗೆ ಬರಬೇಕಿದ್ದ ಹೈಕೋರ್ಟ್ ಧಾರವಾಡಕ್ಕೆ ಮಾಡಿದ್ದಾರೆ. ರೈಲ್ವೆ ಮತ್ತು ವಿಮಾನ ಸೌಲಭ್ಯಗಳನ್ನು ಬೆಳಗಾವಿ ಬಿಟ್ಟು ಹುಬ್ಬಳ್ಳಿಗೆ ಮಾಡಿದ್ದಾರೆ. ಈ ಮೂಲಕ ಜಗದೀಶ ಶೆಟ್ಟರ್ ಬೆಳಗಾವಿ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ. ಈ ಕಾರಣಕ್ಕೆ ಜಗದೀಶ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭೆಗೆ ಬೇಡವೆ ಬೇಡ ಎಂಬುದು ಬೆಳಗಾವಿ ಜನತೆಯ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್‌ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿ ನಮ್ಮನ್ನು ಸೋಲಿಸಿದ್ದಾರೆ. ಅವರಿಗೆ ಬಿಜೆಪಿ ಟಿಕೆಟ್ ಕೊಡುವುದು ಯಾವ ನ್ಯಾಯ. ಮಹಾಂತೇಶ ಕವಟಗಿಮಠ, ವಿಶ್ವನಾಥ ಪಾಟೀಲ, ರಮೇಶ ಕತ್ತಿ, ಸಂಜಯ ಪಾಟೀಲ ಟಿಕೆಟ್‌ಗಾಗಿ ಫೈಟ್ ಮಾಡುತ್ತಿದ್ದು, ಇವರಲ್ಲಿ ಯಾರಿಗಾದರೂ‌ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಬೆಳಗಾವಿ ಜಿಲ್ಲೆಯ ಬಿಜೆಪಿ ಮುಖಂಡರು ಒತ್ತಾಯ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂಚಮಸಾಲಿ ಸಮುದಾಯದವರಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೆ ಕಾಂಗ್ರೆಸ್‌ನಿಂದ ಟಿಕೆಟ್ ನೀಡುತ್ತಿದ್ದು, ಬಿಜೆಪಿಯು ಸಹ ಪಂಚಮಸಾಲಿ ಸಮುದಾಯದವರಿಗೆ ಟಿಕೆಟ್ ಕೊಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಮುರುಗೇಶಶ್ ನಿರಾಣಿಯವರು ಬೆಳಗಾವಿ ಲೋಕಸಭಾ ಟಿಕೆಟ್‌ಗೆ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಜಗದೀಶ್ ಶೆಟ್ಟರ್‌ ಅವರು ನಾನು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಕ್ಷೇತ್ರದ ಜನತೆಯು ನನ್ನ ಜೊತೆಗೆ ಇದ್ದಾರೆ ಎಂದು ಹೇಳಿಕೆ ನೀಡಿದ್ದು, ಒಂದು ವೇಳೆ ಜಗದೀಶ ಶೆಟ್ಟರ ಅವರಿಗೆ ಬೆಳಗಾವಿ ಲೋಕಸಭಾ ಟಿಕೆಟ್ ನೀಡಿದರೆ ಸ್ಥಳೀಯ ಬಿಜೆಪಿ ಮುಖಂಡರು ಜಗದೀಶ ಶೆಟ್ಟರ ಪರವಾಗಿ ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...