ಬೆಳಗಾವಿ ಲೋಕಸಭೆ | ಅತಿ ಹೆಚ್ಚು ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಲಿಂಗಾಯತರು

Date:

ವೇಣುಗ್ರಾಮ ಎಂದು ಕರೆಯಲ್ಪಡುತ್ತಿದ್ದ ಬೆಳಗಾವಿಯನ್ನು ಕದಂಬರು, ರಾಷ್ಟ್ರಕೂಟರು, ದೇವಗಿರಿಯ ಯಾದವರು, ದೆಹಲಿಯ ಬಹುಮನಿ ಸುಲ್ತಾನರು, ಮೊಘಲರು, ಮರಾಠ ಪೇಶ್ವೆಗಳು ಆಳಿದ್ದಾರೆ. ಇಂತಹ ಐತಿಹಾಸಿಕ ಮಹತ್ವವನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ ಅತ್ಯಂತ ರೋಚಕವಾಗಿದೆ.

2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರವು ರಾಜ್ಯದ ಗಮನವನ್ನು ಸೆಳೆಯುತ್ತಿದೆ ಲಿಂಗಾಯತರೆ ಅಧಿಕವಾಗಿರುವ ಈ ಕ್ಷೇತ್ರದಲ್ಲಿ ಇಲ್ಲಿನ ಮತದಾರರು ಲಿಂಗಾಯತರನ್ನೆ ಹೆಚ್ಚು ಬಾರಿ ಸಂಸದರನ್ನಾಗಿ ಆಯ್ಕೆ ಮಾಡಿದ್ದು ಸ್ವಾತಂತ್ರ್ಯ ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾದ ಲೋಕಸಭಾ ಸದಸ್ಯರ ವಿವರ ಈ ಕೆಳಗಿನಂತಿವೆ

1957ರಿಂದ 1962ರ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಲವಂತರಾವ್ ದಾತಾರ್.
1963ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೇಮಾನಂದ ಕೌಜಲಗಿ.
1967ರಲ್ಲಿ ಕಾಂಗ್ರೆಸ್ ಪಕ್ಷದಿಂದ ಎನ್ ಎಮ್ ನಬಿಸಾಬ್,
1971 ಮತ್ತು 1977 ಕಾಂಗ್ರೆಸ್ ಪಕ್ಷದಿಂದ ಅಪ್ಪಯಪ್ಪ ಕೊಟ್ರಶೆಟ್ಟಿ,
1980.1984,1989,1991ರ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಷಣ್ಮುಖಪ್ಪ ಸಿದ್ನಾಳ.
1996ರಲ್ಲಿ ಜನತಾದಳ ಪಕ್ಷದಿಂದ ಶಿವಾನಂದ ಕೌಜಲಗಿ.
1998 ಭಾರತೀಯ ಜನತಾ ಪಕ್ಷದ ಬಾಬಾಗೌಡ ಪಾಟಿಲ್.
1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಅಮರಸಿಂಹ ಪಾಟಿಲ್.
2004, 2009, 2014, 2019 ರ ಅವಧಿಯಲ್ಲಿ ಬಿಜೆಪಿ ಪಕ್ಷದಿಂದ ಸುರೇಶ್ ಅಂಗಡಿ.
2021 ಸುರೇಶ್ ಅಂಗಡಿ ಅಕಾಲಿಕ ಮರಣದಿಂದ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಅವರ ಪತ್ನಿ ಮಂಗಳಾ ಅಂಗಡಿಯವರು ಆಯ್ಕೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತಿ ಹೆಚ್ಚು ಬಾರಿ ಸಂಸದರಾಗಿದ್ದ ಸುರೇಶ ಅಂಗಡಿ ಮತ್ತು ಷಣ್ಮುಖಪ್ಪ ಸಿದ್ನಾಳ

ಬೆಳಗಾವಿ ಲೋಕಸಭಾ ಇತಿಹಾಸದಲ್ಲಿ ಬಿಜೆಪಿ ಪಕ್ಷದಿಂದ ಸುರೇಶ ಅಂಗಡಿಯವರು 4 ಅವಧಿಗೆ ಸಂಸಂದರಾಗಿ ಆಯ್ಕೆ ಆಗಿ ಕೇಂದ್ರ ಸರ್ಕಾರದ ಮಂತ್ರಿ ಮಂಡಲದ ರಾಜ್ಯ ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಷಣ್ಮುಖಪ್ಪ ಸಿದ್ನಾಳವರು ಸಹ 4 ಬಾರಿ ಸಂಸದರಾಗಿದ್ದಾರೆ

ಬೆಳಗಾವಿ ಲೋಕಸಭಾ ಜಾತಿ ಲೆಕ್ಕಾಚಾರ

ಬೆಳಗಾವಿ ಲೋಕಸಭೆಯಲ್ಲಿ ಒಟ್ಟು 18 ಲಕ್ಷ ಮತದಾರರಿದ್ದು ಸುಮಾರು 8ಲಕ್ಷ ಅಂದರೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತ ಸಮುದಾಯದ ಮತಗಳೆ ನಿರ್ಣಾಯಕ ವಾಗಿದ್ದು ನಂತರ ಕುರುಬ ಸಮುದಾಯ ಮತ್ತು ಮರಾಠಾ ಮಾತುಗಳು ಹಾಗೂ ಹಿಂದುಳಿದ, ಪರಿಶಿಷ್ಟ ಸಮುದಾಯದ ಮತಗಳು ಸಹ ಚುನಾವಣೆಯ ಮೇಲೆ ಪ್ರಭಾವ ಬೀರಲಿವೆ.

ಸ್ವಾತಂತ್ರ್ಯ ನಂತರ ನಡೆದ ಲೋಕಸಭಾ ಚುನಾವಣೆಗಳಲ್ಲಿ ಇಲ್ಲಿಯವರೆಗೆ 14 ಬಾರಿ ಲಿಂಗಾಯತ ಸಮುದಾಯದ ಅಭ್ಯರ್ಥಿಗಳೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಮರಾಠಾ, ಹಾಗೂ ಅಹಿಂದ ಸಮುದಾಯದ ಮತಗಳು ನಂತರದ ಸ್ಥಾನದಲ್ಲಿವೆ.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಬಲಾಬಲ

ಬೆಳಗಾವಿ ಲೋಕಸಭೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ 5 ಶಾಸಕರಿದ್ದಾರೆ
ಬೆಳಗಾವಿ ಗ್ರಾಮಿಣ: ಲಕ್ಷ್ಮೀ ಹೆಬ್ಬಾಳ್ಕರ
ಬೆಳಗಾವಿ ಉತ್ತರ: ರಾಜು (ಆಸಿಫ್ ಸೆಠ್)
ಬೈಲಹೊಂಗಲ: ಮಹಾಂತೇಶ ಕೌಜಲಗಿ
ಸವದತ್ತಿ: ವಿಶ್ವಾಸ ವೈದ್ಯ
ರಾಮದುರ್ಗ: ಅಶೋಕ ಪಟ್ಟಣ‌.

ಬಿಜೆಪಿ ಪಕ್ಷದ 3 ಶಾಸಕರಿದ್ದು
ಅರಭಾವಿ: ಬಾಲಚಂದ್ರ ಜಾರಕಿಹೊಳಿ
ಗೋಕಾಕ: ರಮೇಶ ಜಾರಕಿಹೊಳಿ
ಬೆಳಗಾವಿ ದಕ್ಷಿಣ: ಅಭಯ ಪಾಟೀಲ.

2024ರ ಲೋಕಸಭಾ ಚುನಾವಣೆ ಬಿಜೆಪಿಯಿಂದ ಜಗದೀಶ್‌ ಶೆಟ್ಟರ್‌ಗೆ ಟಿಕೆಟ್‌ ಘೋಷಣೆಯಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಇನ್ನೂ ಪ್ರಕಟವಾಗಿಲ್ಲ. ಲಕ್ಷ್ಮೀ ಹೆಬ್ಬಾಳಕರ ಅವರ ಪುತ್ರನ ಹೆಸರು ಚಾಲ್ತಿಯಲ್ಲಿದೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...