ಡಿ.8ರಿಂದ ಬೆಳಗಾವಿ ಅಧಿವೇಶನ; 10 ದಿನಗಳಲ್ಲಿ ಚರ್ಚೆಗೆ ಬರಲಿವೆ 30 ಮಸೂದೆಗಳು!

Date:

ಈ ವರ್ಷದ ಕರ್ನಾಟಕ ಚಳಿಗಾಲದ ಅಧಿವೇಶನವು ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅರಂಭವಾಗಲಿದೆ. ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅಧಿವೇಶನವನ್ನು 10 ದಿನಗಳ ಕಾಲ ನಡೆಸಲು ನಿರ್ಧರಿಸಲಾಗಿದೆ. ಅಧಿವೇಶನದಲ್ಲಿ ಸುಮಾರು 30 ಮಸೂದೆಗಳು ಚರ್ಚೆಗೆ ಬರಲಿವೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಕಳೆದ ಮುಂಗಾರು ಅಧಿವೇಶನದಲ್ಲಿ ಬರೋಬ್ಬರಿ 39 ಮಸೂದೆಗಳನ್ನು ಸರ್ಕಾರ ಮಂಡಿಸಿ, ಅಂಗೀಕರಿಸಿತ್ತು. ಅತೀ ಹೆಚ್ಚು ಮಸೂದೆಗಳು ಮಂಡನೆಯಾಗಿ, ಅನುಮೋದನೆಗೊಂಡ ಅಧಿವೇಶನವೆಂದು ಕರೆಸಿಕೊಂಡಿತ್ತು. ಈ ಬಾರಿಯ ಅಧಿವೇಶನದಲ್ಲಿ 30 ಮಸೂದೆಗಳನ್ನು ಚರ್ಚೆಗೆ ತರಲು ಸರ್ಕಾರ ಸಿದ್ದತೆ ನಡೆಸಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಮಾಹಿತಿ ಪ್ರಕಾರ, ಅಧಿವೇಶನದಲ್ಲಿ ಸುಮಾರು 33 ವಿವಿಧ ಮಸೂದೆಗಳನ್ನು ಮಂಡಿಸುವ ಸಾಧ್ಯತೆ ಇದೆ. ಸುಮಾರು 16 ಮಸೂದೆಗಳು ಮಂಡಿಸಲು ಸಚಿವ ಸಂಪುಟವು ಅನುಮೋದಿಸಿದೆ. 12 ಮಸೂದೆಗಳ ಕರಡು ಸಿದ್ಧವಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಸಮ್ಮತಿ ಪಡೆಯುವ ಸಾಧ್ಯತೆಗಳಿವೆ. ಉಳಿದಂತೆ, ಕಳೆದ ಅಧಿವೇಶನದಲ್ಲಿ 2 ಮಸೂದೆಗಳು ಜಂಟಿ ಸದನ ಸಮಿತಿ ಪರಿಶೀಲನೆಗೆ ಕಳುಹಿಸಲಾಗಿದ್ದು, ಆ ಮಸೂದೆಗಳೂ ಈಬಾರಿಯ ಕಲಾಪದಲ್ಲಿ ಮತ್ತೆ ಮಂಡನೆಯಾಗುವ ನಿರೀಕ್ಷೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರ ಸಿದ್ದಪಡಿಸಿ, ಪಟ್ಟಿ ಮಾಡಿರುವ ಮಸೂದೆಗಳು

  1. ಗ್ರೇಟರ್ ಬೆಂಗಳೂರು (2ನೇ ತಿದ್ದುಪಡಿ) ಮಸೂದೆ
  2. ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ಮಸೂದೆ-2025
  3. ಕರ್ನಾಟಕ ಗೃಹ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ
  4. ಕರ್ನಾಟಕ ದಿನಗೂಲಿ ಕಾರ್ಮಿಕ ಕಲ್ಯಾಣ (ತಿದ್ದುಪಡಿ) ಮಸೂದೆ
  5. ಕರ್ನಾಟಕ ಬಾಡಿಗೆ (ತಿದ್ದುಪಡಿ) ಮಸೂದೆ-2025
  6. ಔಷಧಗಳು ಮತ್ತು ಸೌಂದರ್ಯವರ್ದಕಗಳು(ಕರ್ನಾಟಕ ತಿದ್ದುಪಡಿ) ಮಸೂದೆ
  7. ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ (ತಿದ್ದುಪಡಿ) ವಿಧೇಯಕ
  8. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ತಿದ್ದುಪಡಿ) ಮಸೂದೆ
  9. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ
  10. ಕರ್ನಾಟಕ ಭೂ ಸುಧಾರಣೆ (ಎರಡನೇ ತಿದ್ದುಪಡಿ) ಮಸೂದೆ
  11. ಕರ್ನಾಟಕ ಸಂಸ್ಥೆಗಳಲ್ಲಿ ಖಾಸಗಿ ಹೊರಗುತ್ತಿಗೆ ನಿಷೇಧ ಮಸೂದೆ
  12. ಕರ್ನಾಟಕ ಪರಿಶಿಷ್ಟ ಜಾತಿ (ಮೀಸಲಾತಿ ವರ್ಗೀಕರಣ) ಮಸೂದೆ
  13. ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ
  14. ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ
  15. ಕರ್ನಾಟಕ ಕುಟುಂಬ (ಪ್ರವೇಶ ಮತ್ತು ನಿರ್ವಹಣೆ) ಮಸೂದೆ
  16. ಕರ್ನಾಟಕ ಕಟ್ಟಡ ಉಲ್ಲಂಘನೆ ನಿಯಂತ್ರಣ ಮಸೂದೆ
  17. ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು ಪರಿಹಾರ) ಮಸೂದೆ
  18. ಕರ್ನಾಟಕ ತಪ್ಪು ಮಾಹಿತಿ ನಿಯಂತ್ರಣ ಮಸೂದೆ
  19. ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ಮಸೂದೆ
  20. ಕರ್ನಾಟಕ ಅಪಾರ್ಟ್ಮೆಂಟ್ ಮಾಲಿಕತ್ವ (ನಿಯಂತ್ರಣ) ಮಸೂದೆ
  21. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ತಿದ್ದುಪಡಿ) ವಿಧೇಯಕ
  22. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತೆ ಪ್ರಾಧಿಕಾರ (ತಿದ್ದುಪಡಿ) ಮಸೂದೆ
  23. ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಗುಂಪುಗೂಡುವ ಸ್ಥಳಗಳಲ್ಲಿ ಜನಸಂದಣಿಯ ನಿರ್ವಹಣೆ) ವಿಧೇಯಕ
  24. ನಾಡಪ್ರಭು ಕೆಂಪೇಗೌಡ ಪಾರಂಪರಿಕ ಪ್ರದೇಶಾಭಿವೃದ್ಧಿ (ತಿದ್ದುಪಡಿ) ಮಸೂದೆ
  25. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಇತರ ನಿಗದಿತ ನಿಯಮಗಳ (ತಿದ್ದುಪಡಿ) ಮಸೂದೆ
  26. ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ
  27. ಬಯಲು ಸೀಮೆ ಮಂಡಳಿ ಮಸೂದೆ‌
  28. ಮಲೆನಾಡು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮಸೂದೆ
  29. ಕರ್ನಾಟಕ ಜಿಲ್ಲಾ ನ್ಯಾಯಾಂಗ ಸುಧಾರಣೆ ಮಸೂದೆ
  30. ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ
  31. ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ಎರಡನೇ ತಿದ್ದಪಡಿ) ಮಸೂದೆ
  32. ಮಲೈ ಮಾದೇಶ್ವರ ಪ್ರಾಧಿಕಾರ ಮಸೂದೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...