ಬೆಳಗಾವಿ ಅಧಿವೇಶನ | ಸಮಯಕ್ಕೆ ಸರಿಯಾಗಿ ಬರುವ ಶಾಸಕರಿಗೆ ಉಡುಗೊರೆ: ಸ್ಪೀಕರ್

Date:

ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ದಿನನಿತ್ಯ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದ್ದು, ಸಮಯಕ್ಕೆ ಸರಿಯಾಗಿ ಬರುವ ಶಾಸಕರಿಗೆ ಕಾಫಿ ಕಪ್ಅನ್ನು ಉಡುಗೊರೆಯಾಗಿ ನೀಡಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.

“ಕಳೆದ ಬಾರಿಯೂ ಸಮಯಕ್ಕೆ ಸರಿಯಾಗಿ ಬಂದವರಿಗೆ ಉಡುಗೊರೆ ನೀಡುವುದಾಗಿ ಮತ್ತು ಅವರ ಹೆಸರನ್ನು ಘೋಷಿಸುವುದಾಗಿ ಹೇಳಿದ್ದೆವು. ಹಲವರು ಸರಿಯಾದ ಸಮಯಕ್ಕೆ ಸದನದಲ್ಲಿ ಹಾಜರಿದ್ದರು. ಅವರನ್ನು ಪ್ರೋತ್ಸಾಹಿಸಲಾಗಿತ್ತು. ಈ ಬಾರಿಯೂ ಉಡುಗೊರೆ ನೀಡುತ್ತೇವೆ” ಎಂದು ಹೇಳಿದ್ದಾರೆ.

ಸಚಿವ ಜಮೀರ್ ಅವರ ಹೇಳಿಕೆ ಬಗ್ಗೆ ಮಾತನಾಡಿದ ಖಾದರ್, “ಚುನಾವಣಾ ಸಮಯದ ರಾಜಕೀಯ ಹೇಳಿಕೆಗೆ ನಾನು ಉತ್ತರ ಕೊಟ್ಟಿದ್ದೇನೆ. ವಿಪಕ್ಷದವರೂ ಅವರ ಹೇಳಿಕೆ ನೀಡಿದ್ದಾರೆ. ಅದನ್ನು ಅಧಿವೇಶನಕ್ಕೆ ತರಬಾರದು. ಸದನದ ಅವಧಿಯನ್ನು ಅಭಿವೃದ್ಧಿ ಕುರಿತ ಚರ್ಚೆಗಳಿಗಾಗಿ ಬಳಸಿಕೊಳ್ಳಬೇಕು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...