ದೇವರಾಜ ಅರಸು ಅವರ ಕಾರ್ಯಕ್ರಮಗಳ ಫಲಾನುಭವಿಗಳು ಸಾಮಾಜಿಕ ನ್ಯಾಯದ ಪರವಾಗಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲವನ್ನು ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108ನೇ ಜನ್ಮ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡ ನೆಲ ಸಾಮಾಜಿಕ ನ್ಯಾಯವನ್ನು ಕ್ರಾಂತಿಕಾರಿಯಾಗಿ ಜಾರಿ ಮಾಡಿದ ಇತಿಹಾಸ ಹೊಂದಿದೆ. ಬಸವಣ್ಣನವರಿಂದ ಹಿಡಿದು ಕೃಷ್ಣರಾಜ ಒಡೆಯರು ಮತ್ತು ದೇವರಾಜ ಅರಸು ಅವರವರೆಗೂ ಸಾಮಾಜಿಕ ನ್ಯಾಯ ಒದಗಿಸಿದ ಚರಿತ್ರೆ ನಮ್ಮ ನಾಡಿಗೆ ಇದೆ.‌ ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಮಾತ್ರ ಇರಬಾರದು ಎನ್ನುವ ಆಶಯ ಬಸವಣ್ಣನವರ ಕಾಲದಿಂದಲೂ ಈ ನೆಲದಲ್ಲಿ ನೆಲೆಯೂರಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವರಾಜ ಅರಸರು ಜಾರಿಗೆ ತಂದಿದ್ದು, ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಆದರೆ ಈಗ ಬಿಜೆಪಿ ಬಂದ ಮೇಲೆ “ಉಳ್ಳವನೇ ಭೂಮಿ ಒಡೆಯ” ಎನ್ನುವಂತಾಗಿದೆ ಎಂದು ಟೀಕಿಸಿದರು.

ಕಾಗೋಡು ಹೋರಾಟ ಮತ್ತು ಗೇಣಿ ಹೋರಾಟದ ಫಲಾನುಭವಿಗಳು ಮತ್ತು ಈಗಿನ ಪೀಳಿಗೆಯ ಯುವಕ, ಯುವತಿಯರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳಬೇಕು. ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದರು.

ಸಂವಿಧಾನದಲ್ಲಿ ಮೀಸಲಾತಿಗೆ ಅವಕಾಶ ಇದ್ದರೂ ಅದು ಜಾರಿ ಆಗಿರಲಿಲ್ಲ. ರಾಜ್ಯದಲ್ಲಿ ದೇವರಾಜು ಅರಸರು‌ ಮುಖ್ಯಮಂತ್ರಿಯಾಗಿ ಹಾವನೂರು ವರದಿ ತರಿಸಿಕೊಂಡು ಅದನ್ನು ಜಾರಿ ಮಾಡುವ ಎದೆಗಾರಿಕೆ ತೋರಿಸಿದರು. ಹೀಗೆ ಮಾಡುವಾಗ ಎಲ್ಲ ಜಾತಿ-ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡರು. ಆ ಮೂಲಕ ಸಂವಿಧಾನಬದ್ದವಾದ ಮೀಸಲಾತಿಯನ್ನು ಕನ್ನಡ ನೆಲದಲ್ಲಿ ಜಾರಿ ಮಾಡಿದರು ಎಂದು ವಿವರಿಸಿದರು.

ಕಾಗೋಡು ತಿಮ್ಮಪ್ಪ ಅವರಿಂದ ಅರಸು ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ

ಸಮಾಜವಾದಿ ಚಳವಳಿ ಮತ್ತು ಗೇಣಿ ಹೋರಾಟಗಾರ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜು ಅರಸು ಪ್ರಶಸ್ತಿ ಲಭಿಸಿರುವುದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ನಾನು ಮುಖ್ಯಮಂತ್ರಿ ಆಗಿರುವ ಅವಧಿಯಲ್ಲೇ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ಲಭಿಸಿರುವುದು ನನಗೆ ಅತ್ಯಂತ ಖುಷಿಯಾಗಿದೆ. ಬಹಳಷ್ಟು ಯುವ ನಾಯಕರನ್ನು ಕಾಗೋಡು ತಿಮ್ಮಪ್ಪ ಬೆಳೆಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪುನಾರಚನೆ: ರಾಜ್ಯದ ಸಯ್ಯದ್ ನಾಸೀರ್‌ ಹುಸೇನ್‌ ಅವರಿಗೆ ಸ್ಥಾನ

ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜು ಅರಸು ಅವರ ಜನ್ಮ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಅರಸು ಅವರ ಕಾರಿನಲ್ಲೇ ಪ್ರಯಾಣಿಸಿ ವಿಧಾನಸೌಧದ ಸಭಾಂಗಣಕ್ಕೆ ಆಗಮಿಸಿ ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆ ಬೋಧಿಸಿದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಶಿವರಾಜ್ ಎಸ್ ತಂಗಡಗಿ, ಕೆ ಜೆ ಜಾರ್ಜ್, ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು, ಪರಿಷತ್‌ ಸದಸ್ಯ ನಾಗರಾಜ ಯಾದವ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...