ಮಳೆಗೆ ತತ್ತರಿಸಿದ ಬೆಂಗಳೂರು | ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಜಂಟಿಯಾಗಿ ಸಿಟಿ ರೌಂಡ್ಸ್

Date:

ಬೆಂಗಳೂರಲ್ಲಿ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವ ಅಸ್ತವ್ಯಸ್ತವಾಗಿದ್ದು, ಈವರೆಗೂ ನಾಲ್ಕು ಜನ ಮೃತಪಟ್ಟಿದ್ದಾರೆ. ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ಜಲಾವೃತಗೊಂಡಿದ್ದು, ಜನ ಜೀವನವೇ ಮೂರಾಬಟ್ಟೆಯಾಗಿದೆ.

ಜನ ಊಟ ನೀರು ನಿದ್ದೆ ಬಿಟ್ಟು ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಎಲ್ಲೇ ನೋಡಿದರೂ ಕೂಡ ನೀರೇ ನೀರು. ಕಣ್ಣು ಹಾಯಿಸಿದಲೆಲ್ಲಾ ಮಳೆ ನೀರು ಆವೃತಗೊಂಡಿದೆ. ಈ ಹಿನ್ನೆಲೆಯಲ್ಲಿ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಇಂದು (ಮೇ 21) ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಮುಖ್ಯಮಂತ್ರಿಗಳಿಂದ ಸಿಟಿ ರೌಂಡ್ಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು. ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು. ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು‌ ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸೂಚನೆ ನೀಡಿದರು.

ಸಿಟಿ ರೌಂಡ್ಸ್ 1

HBR ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ

ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು. ಬಾದಿತ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು.

ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿಯಲ್ಲಿ ಪರಿಶೀಲನೆ

ರಾಜಕಾಲುವೆ ವಿಸ್ತೀರ್ಣ 29 ಮೀಟರ್. ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ over flow ಆಗಿ ಸಾಯಿ ಲೇಔಟ್ ಗೆ ನುಗ್ಗುತ್ತದೆ ಎನ್ನುವುದು ಸಮಸ್ಯೆ. ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು. ಮಂಗಳವಾರ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ BDA ಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.

ಸಿಟಿ ರೌಂಡ್ಸ್ 2

ಸಾಯಿ ಲೇಔಟ್

ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿದ ಮುಖ್ಯಮಂತ್ರಿಗಳು, “ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ” ಪದಾಧಿಕಾರಿಗಳು ಮತ್ತು ಸದಸ್ಯರಿಂಸ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು. ಬಳಿಕ‌ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಪಣತ್ತೂರ್ ರೈಲ್ವೇ ಬ್ರಿಡ್ಜ್

ಮಹದೇವಪುರ ವಿಧಾನಸಭಾ ಕ್ಷೇತ್ರದ ಪಣತ್ತೂರ್ ರೈಲ್ವೇ ಬ್ರಿಡ್ಜ್ ನಲ್ಲಿ ಸಾರ್ವಜನಿಕರ ಮತ್ತು ಸ್ಥಳೀಯ ನಿವಾಸಿಗಳ ಜೊತೆ ಮುಖ್ಯಮಂತ್ರಿಗಳು ಚರ್ಚೆ ನಡೆಸಿದರು. ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಸಮಗ್ರ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, 350 ಮೀಟರ್ ಉದ್ದದ ಒಳಚರಂಡಿಯನ್ನು ನಿರ್ಮಿಸಿ ರಾಜಕಾಲುವೆಗೆ ಸಂಪರ್ಕ ಕೊಡಬೇಕು, ರೈಲ್ವೇ ಇಲಾಖೆ 3 ತಿಂಗಳ ಒಳಗೆ ಕಾಮಗಾರಿ ಮುಗಿಸುವ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...