ಕಬ್ಬನ್ ಪಾರ್ಕ್‌ | ಬಹುಮಹಡಿ ಕಟ್ಟಡ ವಿವಾದ, ಬೆಂಗಳೂರಿಗರ ಪ್ರತಿಭಟನೆ

Date:

ಕರ್ನಾಟಕ ಸರ್ಕಾರ ಬೆಂಗಳೂರಿನ ಪ್ರಸಿದ್ಧ ಕಬ್ಬನ್‌ ಪಾರ್ಕ್‌ ಪ್ರದೇಶದಲ್ಲಿ 10 ಮಹಡಿಯ ಕಟ್ಟಡವೊಂದನ್ನು ಮೇಲೇಳಿಸಲು ಸಿದ್ಧತೆ ನಡೆಸುತ್ತಿದೆ ಎನ್ನುವುದು ಇತ್ತೀಚೆಗೆ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಈಗಿನ ಪ್ರಸ್ತಾಪದಲ್ಲಿ, ಕಬ್ಬನ್‌ ಪಾರ್ಕ್‌ ಪ್ರದೇಶದ ಪ್ರೆಸ್ ಕ್ಲಬ್‌ ಪಕ್ಕದಲ್ಲಿ ಹಿಂದೆ ಚುನಾವಣಾ ಆಯೋಗದ ಕಚೇರಿ ಇದ್ಧ ಜಾಗದಲ್ಲಿ ಬಹುಮಹಡಿಯ ಕಟ್ಟಡವೊಂದನ್ನು ನಿರ್ಮಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎನ್ನುವ ಬಗ್ಗೆ ನಾಗರಿಕರು ಮತ್ತು ಪರಿಸರ ಸಂರಕ್ಷಕರು ಕಳವಳ ವ್ಯಕ್ತಪಡಿಸಿದ್ದಾರೆ.

ಉದ್ಯಾನವನಕ್ಕೆ ನಿತ್ಯವೂ ಭೇಟಿ ನೀಡುವವರು ಈಗಿನ ಬಹುಮಹಡಿ ಕಟ್ಟಡಕ್ಕೆ ಸರ್ಕಾರದ ಪ್ರೋತ್ಸಾಹದ ವಿರುದ್ಧ ಪ್ರತಿಭಟಿಸುತ್ತಿದ್ದು, ತಕ್ಷಣವೇ ಅಂತಹ ನಿರ್ಧಾರಕ್ಕೆ ತಡೆಯೊಡ್ಡಲು ಒತ್ತಾಯಿಸಿದ್ದಾರೆ. ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಶನ್‌ ವಕೀಲ ಮತ್ತು ಅಧ್ಯಕ್ಷ ಎಸ್ ಉಮೇಶ್ ಕುಮಾರ್ ನೇತೃತ್ವದಲ್ಲಿ ಕಳೆದ ಭಾನುವಾರ ಕೇಂದ್ರ ಗ್ರಂಥಾಲಯದ ಬಳಿ ಜನರು ಪ್ರತಿಭಟಿಸಿದ್ದಾರೆ. ಸೋಮವಾರವೂ ಪ್ರತಿಭಟನೆ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತಾಪಿತ ಕಟ್ಟಡದ ಜಾಗ ಕಬ್ಬನ್‌ ಪಾರ್ಕ್‌ನ ಪ್ರೆಸ್‌ ಕ್ಲಬ್‌ನ ಪಕ್ಕದಲ್ಲಿದೆ. ಈ ಜಾಗದ ಮರುಅಭಿವೃದ್ಧಿಯಾಗುವ ಅಗತ್ಯ ಹಿಂದಿನಿಂದಲೇ ಇತ್ತು. ಆದರೆ ಉದ್ಯಾನವನದ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಮರುಅಭಿವೃದ್ಧಿ ಹೇಗೆ ಎನ್ನುವ ಪ್ರಶ್ನೆ ಮುಂದಿತ್ತು. ಕಬ್ಬನ್‌ ಪಾರ್ಕ್‌ ಮೇಲ್ವಿಚಾರಣೆ ಜವಾಬ್ದಾರಿ ಹೊಂದಿರುವ ತೋಟಗಾರಿಕಾ ಇಲಾಖೆ ಈ ನಿಟ್ಟಿನಲ್ಲಿ ಪ್ರಮುಖ ಸಭೆ ನಡೆಸಿದೆ. ಆದರೆ ರಾಜ್ಯ ಸರ್ಕಾರ ಇನ್ನೂ ತನ್ನ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

ಐತಿಹಾಸಿಕವಾಗಿ 1975ರ ಕರ್ನಾಟಕ ಸರ್ಕಾರ ಉದ್ಯಾನವನಗಳ ಕಾಯ್ದೆ ಜಾರಿಗೆ ಬಂದಂದಿನಿಂದ ಅಭಿವೃದ್ಧಿ ಚಟುವಟಿಕೆಗಳಿಂದ ಕಬ್ಬನ್‌ ಪಾರ್ಕ್‌ ಅನ್ನು ಹೊರಗಿಡಲಾಗಿತ್ತು. ಆದರೆ 2019ರಲ್ಲಿ ಈಗಿನ ಮರಗಳನ್ನು ಕಡಿಯದೆ ಮರುಅಭಿವೃದ್ಧಿಗೆ ಹೈಕೋರ್ಟ್ ಷರತ್ತುಬದ್ಧ ಅನುಮೋದನೆ ನೀಡಿದಾಗ ನಿರ್ಮಾಣದ ಅವಕಾಶ ತೆರೆದುಕೊಂಡಿತ್ತು.

ಆದರೆ, ಈ ಸ್ಥಳದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣವಾಗಲಿದೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿಸಿ ಮೋಹನ್ ‘ಎಕ್ಸ್‌’ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ ನಂತರ ಪರಿಸರವಾದಿಗಳು ಮತ್ತು ಬೆಂಗಳೂರಿಗರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಕಬ್ಬನ್‌ ಪಾರ್ಕ್‌ನ ಹೃದಯಭಾಗದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ ನಗರದ ಹಸಿರು ಹೊದಿಕೆಗೆ ಬೆದರಿಕೆ ಒಡ್ಡಲಿದೆ. ಮಾತ್ರವಲ್ಲ, ಜನಸಂಚಾರ ಹೆಚ್ಚಾಗಿ ವಾಹನದಟ್ಟಣೆ ಮತ್ತು ಮಾಲಿನ್ಯ ಸಮಸ್ಯೆ ಎದುರಾಗಬಹುದು. ಈಗಾಗಲೇ ಅಭಿವೃದ್ಧಿಯ ಹೆಸರಿನಲ್ಲಿ ಬೆಂಗಳೂರಿನ ಪರಿಸರಕ್ಕೆ ಹಾನಿಯಾಗುವಂತೆ ಚಟುವಟಿಕೆಗಳನ್ನು ನಡೆಸಿರುವ ಪರಿಣಾಮವನ್ನು ನಗರ ಎದುರಿಸುತ್ತಿದೆ. ಹೀಗಿರುವಾಗ ಪರಿಸರವಾದಿಗಳು ಮತ್ತು ನಾಗರಿಕರ ಕಳವಳಕ್ಕೆ ಕಾರಣವಿದೆ.

ದೆಹಲಿಯಂತಹ ಮಹಾನಗರಿಗಳಲ್ಲಿ ಮಾಲಿನ್ಯ ಸಮಸ್ಯೆಯನ್ನು ಕಣ್ಣಾರೆ ಕಂಡಿರುವ ಭಾರತ ಮತ್ತು ರಾಜ್ಯ ಸರ್ಕಾರಗಳು ಮಹಾನಗರಗಳಲ್ಲಿ ಯಾವುದೇ ಮರು ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಪರಿಸರದ ಕಡೆಗೆ ಅತಿಹೆಚ್ಚಿನ ಗಮನವನ್ನು ನೀಡಿ, ಅಭಿವೃದ್ಧಿಯ ಅಗತ್ಯವನ್ನು ಪರಿಗಣಿಸುವ ಅಗತ್ಯವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...