2027ರ ಡಿಸೆಂಬರ್ ವೇಳೆಗೆ ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣ: ಎಂ ಬಿ ಪಾಟೀಲ್‌ ಭರವಸೆ

Date:

ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆಗೆ ಜಮರ್ನಿಯ ಲಕ್ಸಂಬರ್ಗ್ ನಗರದ ಕೆಎಫ್ ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್ ರಾಜ್ಯ ಸರಕಾರದ ಕೆ-ರೈಡ್ ಸಂಸ್ಥೆಗೆ ₹4,561 ಕೋಟಿ (500 ಮಿಲಿಯನ್ ಯೂರೋ) ಸಾಲ ನೀಡುತ್ತಿದ್ದು, ಈ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಅವರ ಸಮ್ಮುಖದಲ್ಲಿ ಶುಕ್ರವಾರ ಅಧಿಕೃತವಾಗಿ ಇಲ್ಲಿ ಒಡಂಬಡಿಕೆಗೆ ಸಹಿ ಹಾಕಲಾಯಿತು.

ಕೆ-ರೈಡ್ ಪರವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯೂ ಆದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ ಮತ್ತು ಕೆಎಫ್ ಡಬ್ಲ್ಯೂ ಪರವಾಗಿ ಅದರ ಭಾರತದ ನಿರ್ದೇಶಕ ವೂಲ್ಫ್ ಮೌತ್ ಅಂಕಿತ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಕೇಂದ್ರ ಸರಕಾರದ ಆರ್ಥಿಕ ಇಲಾಖೆ ಮತ್ತು ಕೆಎಫ್ ಡಬ್ಲ್ಯು ನಡುವೆ ಈ ಸಂಬಂಧ 2023ರ ಡಿ.15ರಂದು ಪ್ರಾಥಮಿಕ ಒಪ್ಪಂದವಾಗಿತ್ತು. ಈಗ ಕೆಎಫ್ ಡಬ್ಲ್ಯು ಮತ್ತು ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿರುವ ಕೆ-ರೈಡ್ ನಡುವೆ ಪೂರಕ ಒಪ್ಪಂದ ಮಾಡಿಕೊಳ್ಳಲಾಗಿದೆ. ಯೋಜನೆಯ ಎಲ್ಲಾ ನಾಲ್ಕೂ ಕಾರಿಡಾರ್ ಗಳ ಕಾಮಗಾರಿಗಳು 2027ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲು ಇದು ಮಹತ್ವದ ಒಪ್ಪಂದ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶೇ.4ರ ಬಡ್ಡಿ ದರದಲ್ಲಿ 20 ವರ್ಷಗಳ ಅವಧಿಗೆ ಈ ಸಾಲವನ್ನು ಜರ್ಮನಿ ಬ್ಯಾಂಕ್ ನೀಡುತ್ತಿದೆ.‌ ಕೆಎಫ್ ಡಬ್ಲ್ಯು ನೀಡುತ್ತಿರುವ ಹಣವನ್ನು ಕೆಂಗೇರಿ-ವೈಟಫೀಲ್ಡ್ ನಡುವಿನ ಕಾರಿಡಾರ್-3ರ ಅಡಿ ಬರುವ ಸ್ಟೇಷನ್ ವರ್ಕ್, ವಯಾಡಕ್ಟ್, ಹೀಳಲಿಗೆ-ರಾಜಾನುಕುಂಟೆ ನಡುವಿನ ಕಾರಿಡಾರ್-4ರ ವ್ಯಾಪ್ತಿಯಲ್ಲಿ ಬರುವ ದೇವನಹಳ್ಳಿಯಲ್ಲಿನ ಡಿಪೋ-1, ಸಿಗ್ನಲ್ ಮತ್ತು ಟೆಲಿಕಾಂ, ಪ್ಲಾಟ್ ಫಾರಂ ಸ್ಕ್ರೀನ್ ಡೋರ್, ಸ್ವಯಂಚಾಲಿತ ಪ್ರಯಾಣ ದರ ವಸೂಲಿ ವ್ಯವಸ್ಥೆ, ಸೌರ ಫಲಗ, ಭದ್ರತಾ ಸಾಧನಗಳು ಮತ್ತು ಎಂಎಐ (ಮ್ಯಾನ್ ಮಶೀನ್ ಇಂಟರ್ಫೇಸ್) ಕಾಮಗಾರಿಗಳಿಗೆ ಬಳಸಿಕೊಳ್ಳಲಾಗುವುದು” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಕುರ್ಚಿಗಾಗಿ ಯುಪಿಎ ಸರ್ಕಾರ ಮಂಡಿಸಿದ ತೆರಿಗೆ ವಿಕೇಂದ್ರೀಕರಣಕ್ಕೆ ಜೈ ಎಂದಿದ್ದ ಸಿದ್ದರಾಮಯ್ಯ: ಬಿಜೆಪಿ ಟೀಕೆ

“ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರಿಗೆ ಬ್ರ್ಯಾಂಡ್ ಮೌಲ್ಯವಿದೆ. ಜೊತೆಗೆ, ನಗರಗಳಲ್ಲಿ ಸುಗಮ ಸಂಚಾರ ಜಾಲವನ್ನು ಅಭಿವೃದ್ಧಿ ಪಡಿಸುವುದು ಸರಕಾರದ ಗುರಿಯಾಗಿದೆ. ಇದಕ್ಕೆ ತಕ್ಕಂತೆ ಸಬರ್ಬನ್ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಪೂರೈಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಯೋಜನೆಯು ರಾಜ್ಯದ ರಾಜಧಾನಿಯ ಚಹರೆಯನ್ನೇ ಆಮೂಲಾಗ್ರವಾಗಿ ಬದಲಿಸಲಿದೆ” ಎಂದು ಪಾಟೀಲ್ ಹೇಳಿದರು.

“ಬೆಂಗಳೂರಿನ ಜನರ ಜೀವನವನ್ನು ಸುಗಮಗೊಳಿಸುವುದು ಸಬರ್ಬನ್ ರೈಲು ಯೋಜನೆಯ ಉದ್ದೇಶವಾಗಿದೆ. ಒಟ್ಟು 15,767 ಕೋಟಿ ರೂ. ವೆಚ್ಚದ ಈ ಯೋಜನೆಯು 58 ನಿಲ್ದಾಣಗಳನ್ನು ಹೊಂದಿರಲಿದ್ದು, ಒಟ್ಟು 4 ಕಾರಿಡಾರ್ ಗಳಲ್ಲಿ 148 ಕಿ.ಮೀ. ಉದ್ದ ಇರಲಿದೆ. ಈ ಯೋಜನೆಗೆ ಕೇಂದ್ರ ಸರಕಾರದ ರೈಲ್ವೆ ಸಚಿವಾಲಯ ಮತ್ತು ರಾಜ್ಯ ಸರಕಾರಗಳು ತಲಾ ಶೇಕಡ 20ರಷ್ಟು ಹೂಡಿಕೆ ಮಾಡಲಿದ್ದು, ಬಾಹ್ಯ ಸಾಲದ ರೂಪದಲ್ಲಿ ಶೇ.60ರಷ್ಟು ಸಂಪನ್ಮೂಲ ಕ್ರೋಡೀಕರಣ ಮಾಡಲಾಗುವುದು” ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿರುವ ಜರ್ಮನಿ ಕಾನ್ಸುಲ್ ಜನರಲ್ ಅಕಿಂ ಬರ್ಕಾರ್ಟ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕೆಎಫ್ ಡಬ್ಲ್ಯು ಹಿರಿಯ ಪರಿಣತೆ ಸ್ವಾತಿ ಖನ್ನಾ ಮತ್ತು ಕಾಂಚಿ ಅರೋರ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...