ಛತ್ತೀಸ್ಗಢದಲ್ಲಿ ನಡೆದಿದೆ ಎನ್ನಲಾದ ಮದ್ಯ ಹಗರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. ಹಾಗೆಯೇ ಶುಕ್ರವಾರ ಮಾಜಿ ಸಿಎಂ ಅವರ ಆವರಣದಲ್ಲಿ ಇಡಿ ಶೋಧ ನಡೆಸಿದೆ.
ಈ ದಾಳಿ ಬೆನ್ನಲ್ಲೇ ಭೂಪೇಶ್ ಬಘೇಲ್ ಅವರ ಕಚೇರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. “ಇಡಿ ಬಂದಿದೆ. ಇಂದು ವಿಧಾನಸಭಾ ಅಧಿವೇಶನದ ಕೊನೆಯ ದಿನ. ಅದಾನಿಗಾಗಿ ತಮ್ನಾರ್ನಲ್ಲಿ ಮರಗಳನ್ನು ಕಡಿಯುತ್ತಿರುವ ವಿಷಯವನ್ನು ಇಂದು ಪ್ರಸ್ತಾಪಿಸಬೇಕಿತ್ತು. ಆದರೆ ಸಾಹೇಬರು(ಪ್ರಧಾನಿ ನರೇಂದ್ರ ಮೋದಿ) ಇಡಿಯನ್ನು ಭಿಲಾಯಿ ನಿವಾಸಕ್ಕೆ ಕಳುಹಿಸಿದ್ದಾರೆ” ಎಂದು ಟೀಕಿಸಿದ್ದಾರೆ.
ಇದನ್ನು ಓದಿದ್ದೀರಾ? ಛತ್ತೀಸ್ಗಢ ಮದ್ಯ ಹಗರಣ | ಕಾಂಗ್ರೆಸ್ ಶಾಸಕ ಕವಾಸಿ ಲಖ್ಮಾ ಬಂಧನ
ಸರ್ಕಾರಿ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳು ಸೇರಿ 2019 ಮತ್ತು 2022ರ ನಡುವೆ ಛತ್ತೀಸ್ಗಢದಲ್ಲಿ ಮದ್ಯ ಮಾರಾಟದಿಂದ ಸುಮಾರು 2,161 ಕೋಟಿ ರೂ.ಗಳನ್ನು ಅಕ್ರಮವಾಗಿ ಸಂಗ್ರಹಿಸುವ ಯೋಜನೆಯನ್ನು ನಡೆಸಿದೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.
VIDEO | Bhilai, Chhattisgarh: Congress workers clash with police personnel and try to stop ED vehicles after Chaitanya Baghel, son of former CM Bhupesh Baghel, was taken into custody by the Enforcement Directorate.
— Press Trust of India (@PTI_News) July 18, 2025
The Enforcement Directorate (ED) conducted fresh searches at the… pic.twitter.com/beb7Eq7Pnq
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಪುರಾವೆಗಳು ದೊರೆತಿದ್ದು ಈ ಹಿನ್ನೆಲೆ ಭೂಪೇಶ್ ಬಘೇಲ್ ಪುತ್ರ ಚೈತನ್ಯ ಬಂಧನ ಮಾಡಲಾಗಿದೆ ಎಂದು ವರದಿಯಾಗಿದೆ.
ಇನ್ನು ಮಾಜಿ ಸಿಎಂ ಬಘೇಲ್ ನಿವಾಸಕ್ಕೆ ಇಡಿ ದಾಳಿ ಮಾಡಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ನಿವಾಸದ ಹೊರಗೆ ಜಮಾಯಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.





