ಬಿಗ್ ಬಾಸ್ | ಸ್ಪರ್ಧಿಗಳನ್ನು ಕೂಡಿಟ್ಟು, ಗಂಜಿ ಊಟ; ಮಾನವ ಹಕ್ಕುಗಳ ಆಯೋಗಕ್ಕೆ ದೂರು

Date:

ಕಲರ್ಸ್ ಕನ್ನಡ ವಾಹಿನಿ ನಡೆಸುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ತುರ್ತಾಗಿ ಶೋ ನಿಲ್ಲಿಸಿ, ಸಂಬಂಧಪಟ್ಟ ಇಲಾಖೆಯಿಂದ ತನಿಖೆ ನಡೆಸಲು ಕೋರಿ ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ದೂರು ಸಲ್ಲಿಸಿದ್ದಾರೆ.

ಇಂದು ಮಧ್ಯಾಹ್ನ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಚೇರಿಗೆ ಆಗಮಿಸಿ ದೂರು ನೀಡಿದ ಅವರು, ಚಿತ್ರನಟ-ಶೋ ನಿರೂಪಕ ಕಿಚ್ಚ ಸುದೀಪ್, ಕಲರ್ಸ್ ಕನ್ನಡ ಟಿವಿ ಬಿಜಿನೆಸ್ ಹೆಡ್, ವಯಾಕಾಮ್ 18 ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

“ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮದ ಆರಂಭದಲ್ಲಿಯೇ ಸ್ವರ್ಗ ಮತ್ತು ನರಕ ಎಂಬ ಎರಡು ಮನೆಗಳನ್ನು ಸೃಷ್ಟಿಸಲಾಗಿದೆ. ಒಟ್ಟು ಹದಿನೇಳು ಸ್ಪರ್ಧಿಗಳ ಪೈಕಿ 10 ಮಂದಿಯನ್ನು ಸ್ವರ್ಗಕ್ಕೂ, 7 ಮಂದಿಯನ್ನು ನರಕದಲ್ಲೂ ಇರಿಸಲಾಗಿದೆ. ಸ್ವರ್ಗ ನಿವಾಸಿಗಳಿಗೆ ಉತ್ತಮ ಊಟ, ಮಲಗಲು ಮಂಚ ಸೇರಿದಂತೆ ಐಶಾರಾಮಿ ಸೌಲಭ್ಯಗಳನ್ನು ಒದಗಿಸಲಾಗಿದೆ. ನರಕ ನಿವಾಸಿಗಳನ್ನು ಜೈಲಿನ ಖೈದಿಗಳ ಹಾಗೆ ಒಂದು ಬ್ಯಾರಾಕ್ ನಲ್ಲಿ ಬಂಧಿ ಮಾಡಿ ಇಡಲಾಗಿದೆ. ಅವರಿಗೆ ಶೋ ಆರಂಭಗೊಂಡ ದಿನದಿಂದ ಕೇವಲ ಗಂಜಿ ಊಟ ನೀಡಲಾಗುತ್ತಿದೆ. ಅಷ್ಟೇ ಅಲ್ಲ, ಅವರಿಗೆ ಪ್ರತ್ಯೇಕ ಶೌಚಾಲಯದ ಅವಕಾಶವೂ ಇಲ್ಲ. ಸ್ವರ್ಗ ನಿವಾಸಿಗಳನ್ನು ವಿನಂತಿಸಿ ಅವರು ಬೀಗ ತೆಗೆದರಷ್ಟೇ ಅವರು ಶೌಚಾಲಯಕ್ಕೆ ಹೋಗಲು ಸಾಧ್ಯ” ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಿ. 2-10-2024ರಂದು ಪ್ರಸಾರವಾದ ಕಾರ್ಯಕ್ರಮದಲ್ಲಿ ನರಕವಾಸಿ ಸ್ಪರ್ಧಿಗಳು ತಮಗೆ ಬಂದಾಗಿಂದಲೂ ಕೇವಲ ಗಂಜಿ ಊಟ ಕೊಡಲಾಗುತ್ತಿದೆ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತಾರೆ. ನರಕವಾಸಿಗಳಿಗೆ ಶೌಚಕ್ಕೆ ಅವಸರವಾದಾಗ ಸ್ವರ್ಗವಾಸಿ ಸ್ಪರ್ಧಿಗಳು ಸ್ವಲ್ಪ ತಡೆದುಕೊಳ್ಳಿ ಎಂದು ಹೇಳುವುದು, ಇದಕ್ಕೆ ನರಕವಾಸಿ ಸ್ಪರ್ಧಿಗಳು ಪ್ರತಿಭಟಿಸುವುದನ್ನು ಕೂಡ ಪ್ರಸಾರ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಬಹುಮಾನ ಮತ್ತು ಹಣದ ಆಮಿಷ ಒಡ್ಡಿ ಸ್ಪರ್ಧಿಗಳನ್ನು ಬಿಡದಿ ಸಮೀಪದ ನಿರ್ಜನ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಮನೆಯೊಂದರಲ್ಲಿ ಕೂಡಿಹಾಕಲಾಗಿದೆ. ಟಾಸ್ಕ್ ಗಳ ಹೆಸರಲ್ಲಿ ಅವರಿಗೆ ದೈಹಿಕ, ಮಾನಸಿಕ ಹಿಂಸೆಯನ್ನು ನೀಡಲಾಗುತ್ತಿದೆ. ಹಣ, ಬಹುಮಾನದ ಆಸೆಗೆ ಕಾಂಟ್ರಾಕ್ಟ್ ಗೆ ಸಹಿ ಮಾಡಿದ ಸ್ಪರ್ಧಿಗಳು ಅಲ್ಲಿ ನಡೆಯುವ ಶೋಷಣೆಯನ್ನು ಹೊರಗೆ ಹೇಳದಂತೆ ಬಾಯಿಮುಚ್ಚಿಸಲಾಗಿದೆ” ಎಂದು ದೂರಿದ್ದಾರೆ.

“ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಗಳನ್ನು ಅಕ್ರಮವಾಗಿ ಬಂಧಿಸಿಟ್ಟು, ಅವರಿಗೆ ಸರಿಯಾದ ಪೌಷ್ಠಿಕ ಆಹಾರವನ್ನೂ ನೀಡದೆ, ಅವರ ದೇಹಬಾಧೆ ತೀರಿಸಿಕೊಳ್ಳಲೂ ಇತರರ ಅನುಮತಿ ಪಡೆಯುವಂಥ ಪರಿಸ್ಥಿತಿ ನಿರ್ಮಿಸಿರುವುದು ಅತ್ಯಂತ ಸ್ಪಷ್ಟವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿರುತ್ತದೆ. ಈ ಶೋಷಣೆಗೆ ಒಂದು ವೇಳೆ ಆಮಿಷಕ್ಕೆ ಒಳಗಾಗಿ ಸ್ಪರ್ಧಿಗಳು ಒಪ್ಪಿಗೆ ನೀಡಿದ್ದರೂ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ವಕೀಲೆ ರಕ್ಷಿತಾ ಪಿ ಸಿಂಗ್‌ ಕೂಡ ದೂರು

ಖಾಸಗಿ ವಾಹಿನಿ ‘ಕಲರ್ಸ್ ಕನ್ನಡ’ದಲ್ಲಿ ಪ್ರಸಾರವಾಗುತ್ತಿರುವ ‘ಬಿಗ್‌ಬಾಸ್ 11’ ರಿಯಾಲಿಟಿ ಶೋನಲ್ಲಿ ಮಹಿಳೆಯರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ. ಮಹಿಳೆಯರ ಹಕ್ಕುಗಳನ್ನು ದಮನ ಮಾಡಿ, ಮಹಿಳಾ ಸ್ಪರ್ಧಿಗಳಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ವಕೀಲೆ ರಕ್ಷಿತಾ ಪಿ ಸಿಂಗ್‌ ಆರೋಪಿಸಿದ್ದಾರೆ. ಕರ್ನಾಟಕ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಕಳೆದ ಭಾನುವಾರದಿಂದ ‘ಬಿಗ್‌ಬಾಸ್‌ 11’ ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿದೆ. ನಟ ಸುದೀಪ್ ಅವರು ಕಾರ್ಯಕ್ರಮದ ನಿರೂಪಣೆ ಮುಂದುವರೆಸಿದ್ದಾರೆ. ಬಿಗ್‌ಬಾಸ್‌ ಸೆಟ್‌ನಲ್ಲಿ ಸ್ವರ್ಗ ಮತ್ತು ನರಕ ಎಂದು ವಿಭಜಿಸಿ, ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಇದರಲ್ಲಿ, ನರಕವೆಂದು ವರ್ಗೀಕರಿಸಲಾದ ಭಾಗದಲ್ಲಿ ಸ್ಪರ್ಧಿಗಳನ್ನು ಕೈದಿಗಳಂತೆ ಇರಿಸಲಾಗಿದೆ. ಆದರೆ, ಭಾರತದ ನಾಗರಿಕರನ್ನು ಬಂಧನದಲ್ಲಿರಿಸುವ ಹಕ್ಕು ಖಾಸಗಿ ವ್ಯಕ್ತಿಗಳಿಗೆ ಇರುವುದಿಲ್ಲ. ಈ ಕಾನೂನನ್ನು ಬಿಗ್‌ ಬಾಸ್ ತಂಡ ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...