ಬಿಹಾರ ವಿಧಾನಸಭೆ ಚುನಾವಣೆ | ಮತ ಎಣಿಕೆ ಆರಂಭ; ಯಾರ ತೆಕ್ಕೆಗೆ ಅಧಿಕಾರ?

Date:

ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಬೆಳಿಗ್ಗೆ ಪ್ರಾರಂಭವಾಗಿದೆ. ಬಿಹಾರದ ಅಧಿಕಾರ ಮತ್ತೆ ಬಿಜೆಪಿ-ಜೆಡಿಯು ಒಕ್ಕೂಟಕ್ಕೆ ಸೇರಲಿದೆಯೇ ಅಥವಾ ವಿರೋಧ ಪಕ್ಷಗಳ ಮಹಾಘಟಬಂಧನ್‌ಗೆ ಪಾಲಾಗಲಿದೆಯೇ ಎಂಬುದು ಇಂದು ಸಂಜೆಯೊಳಗೆ ಸ್ಪಷ್ಟವಾಗಲಿದೆ.

ಹಲವು ಎಕ್ಸಿಟ್‌ ಪೋಲ್‌ಗಳು ಎನ್‌ಡಿಎ ಸುಲಭವಾಗಿ ಗೆಲ್ಲಲಿದೆ ಎಂದು ಹೇಳಿಕೊಂಡಿದೆ. 243 ಸ್ಥಾನಗಳಲ್ಲಿ 146 ಸ್ಥಾನಗಳನ್ನು ಪಡೆಯಬಹುದು, ಅಂದರೆ ಬಹುಮತಕ್ಕಿಂತ 24 ಸ್ಥಾನಗಳು ಅಧಿಕ ಪಡೆಯಬಹುದು ಎಂದು ಹೇಳಿದೆ. ವಿಪಕ್ಷಗಳ ಮಹಾಘಟನಬಂಧನ್ ಕೇವಲ 92 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಎನ್‌ಡಿಟಿವಿ ಸೇರಿದಂತೆ ಹಲವು ಎಕ್ಸಿಟ್‌ ಪೋಲ್‌ಗಳು ಹೇಳಿದೆ. ಆದರೆ ಆಕ್ಸಿಸ್ ಮೈ ಇಂಡಿಯಾ, ವೋಟ್ ವೈಬ್ ಮತ್ತು ಚಾಣಕ್ಯ ತಂತ್ರ ಸೇರಿದಂತೆ ಇನ್ನು ಕೆಲವು ಎಕ್ಸಿಟ್ ಪೋಲ್‌ಗಳು ಎನ್‌ಡಿಎ ಮತ್ತು ಮಹಾಘಟಬಂಧನ್ ನಡುವೆ ಜಿದ್ದಾಜಿದ್ದಿಯ ಸ್ಪರ್ಧೆ ಇರಲಿದೆ ಎಂದು ಹೇಳಿದೆ.

ಇದನ್ನು ಓದಿದ್ದೀರಾ? 2 ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ, ನ.14 ಕ್ಕೆ ಮತ ಎಣಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರದಲ್ಲಿ ಎರಡು ಹಂತದಲ್ಲಿ ನವೆಂಬರ್ 6 ಮತ್ತು 11ರಂದು ಚುನಾವಣೆ ನಡೆದಿದ್ದು ಇಂದು ಮತ ಎಣಿಕೆ ನಡೆಯುತ್ತಿದೆ. ಈ ಬಾರಿ ಬಿಹಾರದಲ್ಲಿ ದಾಖಲೆ ಪ್ರಮಾಣದಲ್ಲಿ ಮತದಾನ ನಡೆದಿದೆ. ಅರ್ಹ ಮತದಾರರಲ್ಲಿ ಸುಮಾರು ಶೇಕಡ 67ರಷ್ಟು ಮತ ಚಲಾಯಿಸಿದ್ದಾರೆ. ಈ ಹಿಂದೆ ಬಿಹಾರದಲ್ಲಿ ಮತದಾನ ಪ್ರಮಾಣ ಅಧಿಕವಾದಾಗ ಆಡಳಿತ ಪಕ್ಷ ಅಧಿಕಾರ ಕಳೆದುಕೊಂಡಿದೆ. ಈ ಬಾರಿಯೂ ಅದೇ ರೀತಿ ನಡೆಯಲಿದೆಯೇ ಕಾದುನೋಡಬೇಕಿದೆ.

ಈ ನಡುವೆ ಬಿಜೆಪಿಯ ರಾಜ್ಯ ಘಟಕವು ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಅವರ ಚಿತ್ರವನ್ನು ಹೊಂದಿರುವ 500 ಕೆಜಿ ಲಡ್ಡುಗಳು ಮತ್ತು ಐದು ಲಕ್ಷ ರಸಗುಲ್ಲಾಗಳು ಮತ್ತು ಗುಲಾಬ್ ಜಾಮೂನ್‌ಗಳ ಡಬ್ಬ ತಯಾರಿಗೆ ಈಗಾಗಲೇ ಸಿದ್ಧತೆ ನಡೆಸಿದೆ. ಆದರೆ ವಿಪಕ್ಷ ಮಾತ್ರ ನಮಗೆ ಗೆಲುವಿನ ಭರವಸೆಯಿದೆ ಎಂದಷ್ಟೆ ಹೇಳಿದೆ.

ಎಂಟು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ

ಬಿಹಾರ ಚುನಾವಣೆ ಫಲಿತಾಂಶ ಮಾತ್ರವಲ್ಲದೆ ಇಂದು ಒಟ್ಟು ಎಂಟು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವೂ ಹೊರಬೀಳಲಿದೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್, ನಾಗ್ರೊತಾ, ರಾಜಸ್ಥಾನದ ಅಂತಾ, ಜಾರ್ಖಂಡ್‌ನ ಘಟ್ಸಿಲಾ, ತೆಲಂಗಾಣದ ಜುಬಿಲಿ ಹಿಲ್ಸ್, ಪಂಜಾಬ್‌ನ ತರನ್ ತರಣ್, ಮಿಜೋರಾಂನ ದಂಪಾ, ಒಡಿಶಾದ ನುವಾಪಾದದಲ್ಲಿ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...