ಬಿಹಾರ | 6 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ, ಆದರೆ ಬಳಸುವಂತಿಲ್ಲ!

Date:

ಬಿಹಾರದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ(PMGSY) ಅಡಿಯಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಸೇತುವೆಯೊಂದನ್ನು ನಿರ್ಮಿಸಲಾಗಿದ್ದರೂ ಬಳಸಲಾಗದ ಸ್ಥಿತಿಯಲ್ಲಿದೆ. ಸೇತುವೆ ನಿರ್ಮಾಣ ಆರಂಭವಾಗಿ ನಾಲ್ಕು ವರ್ಷಗಳು ಕಳೆದರೂ ಸ್ಥಳೀಯ ರಸ್ತೆಗೆ ಇನ್ನೂ ಸಂಪರ್ಕ ಕಲ್ಪಿಸದ ಕಾರಣದಿಂದಾಗಿ ಸೇತುವೆಯನ್ನು ಬಳಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದಾಗಿ ಸೇತುವೆ ನಿಷ್ಪ್ರಯೋಜಕವಾಗಿದೆ.

ಬಿಹಾರದ ಕತಿಹಾರ್ ಜಿಲ್ಲೆಯ ದಂಡಖೋಡಾ ಬ್ಲಾಕ್‌ನಲ್ಲಿರುವ ಪಸಂತ ಸೇತುವೆಗೆ ನಾಲ್ಕು ಕೋಟಿ ರೂಪಾಯಿ ವೆಚ್ಚವಾಗಿದ್ದರೂ ಇದು ತಾತ್ಕಾಲಿಕ ಸೇತುವೆಯಂತೆ ಭಾಸವಾಗುತ್ತದೆ. ಯಾವುದೇ ಸಂಪರ್ಕ ರಸ್ತೆಯಿಲ್ಲದೆ, ಹೊಲಗಳ ದಂಡೆ ಮತ್ತು ಸೇತುವೆಯ ಒಂದು ಕಂಬ ಮಾತ್ರ ಇದೆ. ಸೇತುವೆಯ ಆಧಾರ ಸ್ತಂಭ ಖಾಸಗಿ ಒಡೆತನದ ಭೂಮಿಯಲ್ಲಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಬಿಹಾರ | ಮತ್ತೊಂದು ಸೇತುವೆ ಕುಸಿತ; ಮೂರು ವಾರಗಳಲ್ಲಿ 13ನೇ ಪ್ರಕರಣ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸೇತುವೆಯು ಸಮೀಪದ 10-12 ಹಳ್ಳಿಗಳನ್ನು ಜಿಲ್ಲಾ ಕೇಂದ್ರಕ್ಕೆ ಸಂಪರ್ಕಿಸುವ ನಿಟ್ಟಿನಲ್ಲಿ ನಿರ್ಮಿಸಲು ಉದ್ದೇಶಿಸಲಾಗಿತ್ತು. ಹಾಗೆಯೇ ದೀರ್ಘ ಪ್ರಯಾಣವನ್ನು ಕಡಿತಗೊಳಿಸುವ ಉದ್ದೇಶವೂ ಈ ಸೇತುವೆ ನಿರ್ಮಾಣದ ಹಿಂದಿತ್ತು. ಆದರೆ ನಾಲ್ಕು ವರ್ಷವಾದರೂ ಸೇತುವೆ ಬಳಕೆಯ ಲಭ್ಯವಿಲ್ಲದಂತಾಗಿದೆ.

2020ರ ಸೆಪ್ಟೆಂಬರ್ 3ರಂದು ಸೇತುವೆಯ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಈ ಯೋಜನೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ 2021ರ ಸೆಪ್ಟೆಂಬರ್ 2ರವರೆಗೆ ಅಂದರೆ ಒಂದು ವರ್ಷದ ಕಾಲಾವಕಾಶ ನೀಡಲಾಗಿತ್ತು. ಸೇತುವೆಯೇನೋ ಪೂರ್ಣವಾಗಿದೆ. ಆದರೆ ಭೂಸ್ವಾಧೀನ ಪ್ರಕ್ರಿಯೆ ಮುಗಿಯದೆ ನಾಲ್ಕು ವರ್ಷವಾದರೂ ಬಳಕೆಗೆ ಅವಕಾಶವಿಲ್ಲದಂತಾಗಿದೆ. ಸದ್ಯ ಬಿಹಾರದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಇಂತಹ ಲೋಪಗಳು ಹೆಚ್ಚು ಮುನ್ನೆಲೆಗೆ ಬರುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...