ಬಿಹಾರ ಜಾತಿ ಸಮೀಕ್ಷೆ ನಕಲಿ, ದೇಶಾದ್ಯಂತ ಗಣತಿ ನಡೆಯಬೇಕಿದೆ: ರಾಹುಲ್ ಗಾಂಧಿ

Date:

ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನಡೆಸಿದ ಜಾತಿ ಸಮೀಕ್ಷೆಯನ್ನು ‘ನಕಲಿ’ ಎಂದು ಕರೆದಿರುವ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ದೇಶಾದ್ಯಂತ ಗಣತಿ ನಡೆಯುವ ಅಗತ್ಯವಿದೆ ಎಂದು ಹೇಳಿದ್ದಾರೆ. ಬಿಹಾರದಲ್ಲಿ 2022-2023ರಲ್ಲಿ ಜಾತಿ ಸಮೀಕ್ಷೆಯನ್ನು ನಡೆಸಲಾಗಿದೆ.

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಹೇಗಾದರೂ ದೇಶಾದ್ಯಂತ ಜಾತಿ ಗಣತಿ ನಡೆಸಲು ಕಾಂಗ್ರೆಸ್ ಸಕಲ ಪ್ರಯತ್ನವನ್ನು ನಡೆಸಲಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ನಮ್ಮ ಮುಂದಿನ ಗುರಿ ‘ಜಾತಿ ಗಣತಿ’ ಜಾರಿ ಮಾಡುವಂತೆ ಮಾಡುವುದು: ರಾಹುಲ್‌ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಕೀಯವಾಗಿ ನಾವು ನಷ್ಟವನ್ನು ಅನುಭವಿಸಬೇಕಾದ ಸ್ಥಿತಿ ಎದುರಾದರೂ ಕೂಡಾ ನಾವು ಜಾತಿ ಗಣತಿ ಮಾಡಿಸುತ್ತೇವೆ. ಇದು ಬಿಹಾರದಲ್ಲಿ ನಡೆಸಿದ ನಕಲಿ ಜಾತಿ ಸಮೀಕ್ಷೆಯಂತೆ ಇರಲಾರದು. ಬಿಹಾರದ ಜನರನ್ನು ಜಾತಿ ಸಮೀಕ್ಷೆ ಹೆಸರಲ್ಲಿ ಜನರನ್ನು ಮುರ್ಖರನ್ನಾಗಿಸಲಾಗುತ್ತಿದೆ” ಎಂದು ಹೇಳಿದರು.

ಇನ್ನು ದೇಶಾದ್ಯಂತ ಜಾತಿ ಗಣತಿ ನಡೆಸಬೇಕು ಎಂಬ ತನ್ನ ಬೇಡಿಕೆಯನ್ನು ರಾಹುಲ್ ಗಾಂಧಿ ಪುನರುಚ್ಛರಿಸಿದರು. ಹಾಗೆಯೇ ದಲಿತ, ಹಿಂದುಳಿದ ವರ್ಗ, ಆದಿವಾಸಿ ಮತ್ತು ಅಲ್ಪಸಂಖ್ಯಾತ ಸಮುದಾಯದ ಹಿತಾಸಕ್ತಿಯಿಂದ ದೇಶಾದ್ಯಂತ ಜಾತಿ ಗಣತಿ ನಡೆಸಬೇಕು” ಎಂದು ರಾಹುಲ್ ಆಗ್ರಹಿಸಿದರು.

“ಈ ಎಲ್ಲಾ ಸಮುದಾಯಗಳ ಜನಸಂಖ್ಯೆ, ಶಾಸಕಾಂಗದಲ್ಲಿ ಅವರ ಭಾಗಿತ್ವ, ಶೈಕ್ಷಣಿಕ ಕ್ಷೇತ್ರದಲ್ಲಿ, ಖಾಸಗಿ ಸಂಸ್ಥೆಗಳಲ್ಲಿ ಈ ಸಮುದಾಯದ ಭಾಗಿತ್ವವನ್ನು ಕೂಡಾ ಈ ಜಾತಿ ಗಣತಿ ಅಥವಾ ಸಮೀಕ್ಷೆ ಒಳಗೊಂಡಿರುತ್ತದೆ” ಎಂದು ಕಾಂಗ್ರೆಸ್ ಸಂಸದ ತಿಳಿಸಿದರು.

ಇದನ್ನು ಓದಿದ್ದೀರಾ? ಬಿಹಾರದ ಜಾತಿ ಗಣತಿಯನ್ನು ಸ್ವಾಗತಿಸಿದ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’

ಇನ್ನು ಈ ಸಮುದಾಯಗಳ ಸಾಮಾಜಿಕ- ಆರ್ಥಿಕ ಪರಿಸ್ಥಿತಿಯ ಆಧಾರದಲ್ಲಿ ಅಭಿವೃದ್ಧಿ ನೀತಿಗಳನ್ನು ರೂಪಿಸಬೇಕು. ದೇಶದ ಸಂಪತ್ತು ಕೆಲವೇ ಜನರ ಕೈಯಲ್ಲಿದೆ. ಬಡವರು ಮತ್ತು ರೈತರು ಅತೀ ಕೆಟ್ಟ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಹೇಳಿದರು.

ಖಾಸಗಿ ಕ್ಷೇತ್ರದಲ್ಲಿ ದಲಿತ ಸಮುದಾಯದ ಸಹಭಾಗಿತ್ವದ ಬಗ್ಗೆಯೂ ಕಾಂಗ್ರೆಸ್ ಸಂಸದ ಮಾತನಾಡಿದ್ದಾರೆ. “500 ಖಾಸಗಿ ಸಂಸ್ಥೆಗಳ ಪಟ್ಟಿಯನ್ನು ಮಾಡಿದರೆ ಆ ಸಂಸ್ಥೆಗಳಲ್ಲಿ ದಲಿತ ಸಮುದಾಯಕ್ಕೆ ಸೇರಿದವರು ಇರುವುದು ಅತೀ ಕಡಿಮೆ” ಎಂದು ಅಭಿಪ್ರಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...