ಬಿಹಾರ | ಹಾವು-ಏಣಿ ಆಟದಲ್ಲಿ ಕೊನೆಗೂ ಬಹುಮತ ಸಾಬೀತುಪಡಿಸಿದ ಸಿಎಂ ನಿತೀಶ್ ಕುಮಾರ್

Date:

ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ಗೆ ಸೇರಿದ ಎರಡು ವಾರಗಳ ನಂತರ ಮತ್ತು ಒಂಬತ್ತನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆ ಸಾಬೀತುಪಡಿಸಬೇಕಿತ್ತು. ಈ ಹಾವು ಏಣಿ ಆಟದಲ್ಲಿ ಕೊನೆಗೂ ಬಹುಮತ ಸಾಬೀತುಪಡಿಸುವಲ್ಲಿ ಸಿಎಂ ನಿತೀಶ್ ಕುಮಾರ್ ಯಶಸ್ವಿಯಾಗಿದ್ದಾರೆ.

243 ಸದಸ್ಯರಿರುವ ಬಿಹಾರ ಅಸೆಂಬ್ಲಿಯಲ್ಲಿ 122ರ ಸರಳ ಬಹುಮತಕ್ಕಿಂತ ಹೆಚ್ಚು ಇರಬೇಕು. ಈ ನಡುವೆ 128 ಶಾಸಕರ ಬೆಂಬಲವನ್ನು ನಾವು ಹೊಂದಿದ್ದೇವೆ ಎಂದು ಎನ್‌ಡಿಎ ಹೇಳಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ವಿಶ್ವಾಸಮತ ಯಾಚನೆಯ ವೇಳೆ ಸರ್ಕಾರದ ಪರವಾಗಿ ಉಪ ಸ್ಪೀಕರ್ ಅವರ ಮತವೂ ಸೇರಿದಂತೆ ಒಟ್ಟು  130 ಮತ ಬಿತ್ತು. ಈ ವೇಳೆ ವಿಪಕ್ಷ ನಾಯಕ ಆರ್‌ಜೆಡಿಯ ತೇಜಸ್ವಿ ಯಾದವ್‌ ವಿಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು. ಆ ಮೂಲಕ ನಿತೀಶ್​ ಕುಮಾರ್ ನೇತೃತ್ವದ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರ ಭದ್ರವಾಗಿದೆ.

ಪಾಟ್ನಾದ ಬಿಹಾರ ವಿಧಾನಸಭೆಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರ ಪಕ್ಷವಾದ ಆರ್‌ಜೆಡಿ ಶಾಸಕರಾದ ಚೇತನ್ ಆನಂದ್, ನೀಲಂ ದೇವಿ ಮತ್ತು ಪ್ರಹ್ಲಾದ್ ಯಾದವ್ ಅವರು ಸರ್ಕಾರದ ಪರವಾಗಿ ಮತ ಹಾಕಿದರು. ಆ ಮೂಲಕ ವಿಪಕ್ಷ ನಾಯಕ ಆರ್‌ಜೆಡಿಯ ತೇಜಸ್ವಿ ಯಾದವ್‌ಗೆ ಆಘಾತ ನೀಡಿದರು.

#WATCH | RJD MLAs Chetan Anand, Neelam Devi

ನಿತೀಶ್ ಕುಮಾರ್ ತಮ್ಮ ಸರ್ಕಾರಕ್ಕೆ ಬಹುಮತ ಸಾಬೀತು ಪಡಿಸುವುದಕ್ಕಿಂತ ಮೊದಲು ಆಡಳಿತ ಪಕ್ಷದ ಸದಸ್ಯರು ಬಿಹಾರ ವಿಧಾನಸಭೆ ಸ್ಪೀಕರ್ ಹಾಗೂ ಆರ್‌ಜೆಡಿ ನಾಯಕ ಅವಧ್ ಬಿಹಾರಿ ಚೌಧರಿ ವಿರುದ್ಧ ಅವಿಶ್ವಾಸ ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಡಿಸಿದರು.

ಈ ವೇಳೆ 125 ಸದಸ್ಯರು ನಿರ್ಣಯದ ಪರವಾಗಿ ಮತ ಹಾಕಿದರೆ, ವಿರುದ್ಧವಾಗಿ 112 ಮಂದಿ ಮತ ಹಾಕಿದರು. ಆ ಮೂಲಕ ಆರ್‌ಜೆಡಿಯ ಅವಧ್‌ ಬಿಹಾರಿ ಸ್ಪೀಕರ್ ಹುದ್ದೆ ಕಳೆದುಕೊಂಡರು.

ಸರ್ಕಾರದ ಪರವಾಗಿ 128 ಹಾಗೂ ವಿಪಕ್ಷಗಳ ಮಹಾಘಟಬಂಧನ್‌ನ ಭಾಗವಾಗಿರುವ ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು 114 ಶಾಸಕರನ್ನು ಹೊಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...