ಬಿಹಾರ ಚುನಾವಣೆಯಲ್ಲಿ ರಕ್ತಪಾತ: JSP ನಾಯಕ ದುಲಾರ್‌ಚಂದ್ ಹತ್ಯೆ; NDA ಅಭ್ಯರ್ಥಿ ಅನಂತ್ ಸಿಂಗ್ ಕೈವಾಡ?

Date:

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳ ಬಾಕಿ ಇರುವಾಗ, ಚುನಾವಣಾ ಕಣ ರಕ್ತಪಾತಕ್ಕೆ ತಿರುಗಿದೆ. ಜನ ಸುರಾಜ್ ಪಕ್ಷದ (ಜೆಎಸ್‌ಪಿ) ನಾಯಕ ದುಲಾರ್‌ಚಂದ್ ಯಾದವ್ ಅವರ ಹತ್ಯೆಯಾಗಿದೆ. ಈ ಹತ್ಯೆಯ ಹಿಂದೆ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಅನಂತ್ ಸಿಂಗ್ ಕೈವಾಡವಿದೆ ಎಂದು ಆರೋಪಿಸಲಾಗಿದೆ. ಅನಂತ್ ಸಿಂಗ್ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಬಿಹಾರದ ಮೋಕಾಮಾ ವಿಧಾನಸಭಾ ಕ್ಷೇತ್ರದಲ್ಲಿ ಜೆಎಸ್‌ಪಿ ಅಭ್ಯರ್ಥಿ ಪಿಯೂಷ್ ಪ್ರಿಯದರ್ಶಿ ಪರವಾಗಿ ಗುರುವಾರ ಸಂಜೆ ದುಲಾರ್‌ಚಂದ್ ಪ್ರಚಾರ ಮಾಡುತ್ತಿದ್ದರು. ಈ ವೇಳೆ, ತಾಲ್ ಪ್ರದೇಶದಲ್ಲಿ ತೆರಳುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆಗೈಯಲಾಗಿದೆ. ವಿಧಾನಸಭಾ ಚುನಾವಣೆಯನ್ನು ರಕ್ತಸಿಕ್ತಗೊಳಿಸಲಾಗಿದೆ. ಮೋಕಾಮಾ ಕ್ಷೇತ್ರದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಪೊಲೀಸರು ಹಳ್ಳಿಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.

ದುಲಾರ್‌ಚಂದ್ ಯಾದವ್ ಅವರ ಮೊಮ್ಮಗನ ಹೇಳಿಕೆಯ ಆಧಾರದ ಮೇಲೆ, ಪೊಲೀಸರು ಅನಂತ್ ಸಿಂಗ್ ಮತ್ತು ಅವರ ಇಬ್ಬರು ಸೋದರಳಿಯರಾದ ರಣವೀರ್ ಮತ್ತು ಕರ್ಮವೀರ್ ಹಾಗೂ ಇತರ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆದಾಗ್ಯೂ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಪ್ರಚಾರದ ವೇಳೆ ಅನಂತ್ ಸಿಂಗ್ ಅವರ ಬೆಂಬಲಿಗರು ಮೊದಲು ಗುಂಡು ಹಾರಿಸಿದರು. ನಂತರ, ತಮ್ಮ ವಾಹನದಿಂದ ದುಲಾರ್‌ಚಂದ್ ಅವರಿಗೆ ಡಿಕ್ಕಿ ಹೊಡೆದು ಕೊಂದರು” ಎಂದು ಮೃತ ದುಲಾರ್‌ಚಂದ್ ಅವರು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ರೀಲ್ಸ್‌ ಮಾಡುವುದೂ ಉದ್ಯೋಗ – ರೈಲು ಬಿಟ್ಟ ಮೋದಿ

ಜೆಡಿಯು ಅಭ್ಯರ್ಥಿ ಅನಂತ್ ಸಿಂಗ್ ತಮ್ಮ ವಿರುದ್ಧದ ಕೊಲೆ ಆರೋಪಗಳನ್ನು ನಿರಾಕರಿಸಿದ್ದಾರೆ. ಚುನಾವಣಾ ಪ್ರಚಾರದಿಂದ ಹಿಂತಿರುಗುವಾಗ ದುಲಾರ್‌ಚಂದ್‌ ಅವರ ವಾಹನವನ್ನು ಹಿಂದಿಕ್ಕಿರುವುದಾಗಿ (ಓವರ್‌ಟೇಕ್) ಅವರು ಹೇಳಿದ್ದಾರೆ. ತಮ್ಮ ಬೆಂಗಾವಲು ಪಡೆಯ ವಾಹನಗಳನ್ನು ಜೆಎಸ್‌ಪಿ ಬೆಂಬಲಿಗರು ಸುತ್ತುವರೆದು ಇಟ್ಟಿಗೆ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ. ಈ ಕೃತ್ಯವು ಆರ್‌ಜೆಡಿ ನಾಯಕ ಸೂರಜ್ ಭನ್ ಸಿಂಗ್ ಅವರ ಪಿತೂರಿ ಎಂದು ಅನಂತ್ ಸಿಂಗ್ ಆರೋಪಿಸಿದ್ದಾರೆ. ಅನಂತ್ ಸಿಂಗ್ ಅವರ ಆರೋಪಗಳಿಗೆ ಪ್ರತಿಕ್ರಿಯಿಸಲು ಸೂರಜ್ ಭನ್ ನಿರಾಕರಿಸಿದ್ದಾರೆ.

ಪ್ರಕರಣ ಸಂಬಂಧ ಆಡಳಿತಾರೂಢ ಎನ್‌ಡಿಎ ಮತ್ತು ಪ್ರಧಾನಿ ಮೋದಿ ವಿರುದ್ಧ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ. “ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಪ್ರಧಾನಿ ಮೋದಿ ಅವರು ಹಿಂದಿನ ಕಾಲದ (ಜಂಗಲ್‌ ರಾಜ್) ಬಗ್ಗೆ ಮಾತನಾಡುತ್ತಲೇ ಇರುವಾಗ, ಜನರು ಇನ್ನೂ ‘ಬಂದೂಕು ಮತ್ತು ಗುಂಡು’ಗಳೊಂದಿಗೆ ಹೇಗೆ ತಿರುಗಾಡುತ್ತಿದ್ದಾರೆ. ಆಡಳಿತವು ಅಪರಾಧಿಗಳನ್ನು ರಕ್ಷಿಸುತ್ತಿದೆ. ಸಾರ್ವಜನಿಕ ಭದ್ರತೆಗಿಂತ ತಮ್ಮ ಸ್ವಂತ ಸುರಕ್ಷತೆಗೆ ಆದ್ಯತೆ ನೀಡುತ್ತಿದೆ. ಇವರು ಸೋಲಿನ ಭಯದಲ್ಲಿದ್ದಾರೆ. ಇಂತಹ ಕೃತ್ಯಗಳಿಗೆ ಬಿಹಾರದ ಜನರು ಸೂಕ್ತ ಉತ್ತರ ನೀಡುತ್ತಾರೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...