ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: ಪೌರತ್ವ ಸಾಬೀತಿಗೆ ಜನರ ಪರದಾಟ; ಮತದಾನದ ಹಕ್ಕನ್ನೇ ಕಳೆದುಕೊಳ್ಳುವರೇ 50% ಜನರು?

Date:

ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು (ECI) ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision – SIR) ಆರಂಭಿಸಿದೆ. ಈ ಪ್ರಕ್ರಿಯೆಯು ಆ ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳ ಜನರಲ್ಲಿ ಭಯ, ಗೊಂದಲ, ಆತಂಕ ಹಾಗೂ ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದೆ. ಹಿಂದುಳಿದ, ತಳ ಸಮುದಾಯಗಳ ಜನರು ತಮ್ಮ ಪೌರತ್ವವನ್ನು ಸಾಬೀತು ಮಾಡಲು, ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಭವಿಷ್ಯದಲ್ಲಿ ತಮ್ಮನ್ನು ಸರ್ಕಾರ ಹೇಗೆ ನಡೆಸಿಕೊಳ್ಳಬಹುದು ಎಂಬ ಭಯವೂ ಆವರಿಸಿದೆ.

ಚುನಾವಣಾ ಆಯೋಗದ ಮಾರ್ಗಸೂಚಿಯಂತೆ; ಬಿಹಾರದಲ್ಲಿನ ನಿವಾಸಿಗಳಲ್ಲಿ, 1987ಕ್ಕಿಂತ ಮೊದಲು ಜನಿಸಿದವರು ತಮ್ಮ ಜನ್ಮದಿನಾಂಕ ಅಥವಾ ಜನ್ಮಸ್ಥಳವನ್ನು ಸಾಬೀತುಪಡಿಸಬೇಕು. 1987ರ ಜುಲೈ 1 ಮತ್ತು 2004ರ ಡಿಸೆಂಬರ್ 2ರ ನಡುವೆ ಜನಿಸಿದವರು ತಮ್ಮ ಜನ್ಮದಿನಾಂಕ ಮತ್ತು ತಮ್ಮ ಒಬ್ಬ ಪೋಷಕರ ಜನ್ಮದಿನಾಂಕ/ಸ್ಥಳವನ್ನು ಸಾಬೀತುಪಡಿಸಬೇಕು. 2004ರ ಡಿಸೆಂಬರ್ 2ರ ನಂತರ ಜನಿಸಿದವರು ತಮ್ಮ ಜನ್ಮದಿನಾಂಕ/ಸ್ಥಳ ಮತ್ತು ತಮ್ಮ ಇಬ್ಬರು ಪೋಷಕರ ಜನ್ಮದಿನಾಂಕ/ಸ್ಥಳವನ್ನು ಸಾಬೀತುಪಡಿಸಬೇಕು. ಅದಕ್ಕೆ ಪೂರಕವಾದ ದಾಖಲೆಗಳನ್ನು ಸಲ್ಲಿಸಬೇಕು.

ಈ ಕ್ರಮವು ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆಗೆ ದಾರಿಮಾಡಿಕೊಡುತ್ತದೆ ಎಂದು ಆಯೋಗ ಹೇಳಿಕೊಂಡಿದೆ. ಆದರೆ, ಈ ಪ್ರಕ್ರಿಯೆಯಲ್ಲಿ ಮತದಾರರು ತಮ್ಮ ಪೌರತ್ವವನ್ನು ಕಡ್ಡಾಯವಾಗಿ ಸಾಬೀತು ಮಾಡಬೇಕಾದ ಅನಿವಾರ್ಯತೆ ಇದೆ. ಅದಕ್ಕಾಗಿ, ಜನರು ತಮ್ಮ ಪೌರತ್ವವನ್ನು ಸೂಚಿಸುವ ಜನನ ಪ್ರಮಾಣಪತ್ರ, ಶಾಲಾ ದಾಖಲೆಗಳನ್ನು ಸಲ್ಲಿಸಬೇಕಾಗಿದೆ. ಆದರೆ, ಈ ಅಗತ್ಯ ದಾಖಲೆಗಳೇ ಗ್ರಾಮೀಣ ಜನರಿಗೆ ಸವಾಲಾಗಿ ಪರಿಣಮಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರದ ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ದಲಿತರು, ಹಿಂದುಳಿದ ವರ್ಗಗಳು ಮತ್ತು ಅತೀ ಹಿಂದುಳಿದ ಸಮುದಾಯಗಳ ಜನರು ಆಯೋಗದ ಕ್ರಮದಿಂದ ತೀವ್ರ ತೊಂದರೆಗೆ ಸಿಲುಕಿದ್ದಾರೆ. ಸಾಮಾನ್ಯವಾಗಿ ಬಳಸಲಾಗುವ ದಾಖಲೆಗಳಾದ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಮನರೇಗಾ ಜಾಬ್ ಕಾರ್ಡ್ ಅಥವಾ ಆಯುಷ್ಮಾನ್ ಆರೋಗ್ಯ ಕಾರ್ಡ್‌ಗಳನ್ನು ಪೌರತ್ವದ ಪುರಾವೆಯಾಗಿ ಪರಿಗಣಿಸಲಾಗುತ್ತಿಲ್ಲ ಮತ್ತು ಸ್ವೀಕರಿಸಲಾಗುತ್ತಿಲ್ಲ. ಬದಲಿಗೆ, ಜನನ ಪ್ರಮಾಣಪತ್ರ ಅಥವಾ ಶಾಲಾ ದಾಖಲೆಗಳಂತಹ ದಾಖಲೆಗಳನ್ನು ಕೇಳಲಾಗುತ್ತಿದೆ. ಆದರೆ, ಈ ದಾಖಲೆಗಳು ಗ್ರಾಮೀಣ ಬಡವರ ಬಳಿ ಸಾಮಾನ್ಯವಾಗಿ ಇಲ್ಲವೇ ಇಲ್ಲ.

ಗ್ರಾಮೀಣ ಭಾಗದ ದಲಿತ, ಹಿಂದುಳಿದ ಹಾಗೂ ಬಡ ಸಮುದಾಯಗಳಲ್ಲಿನ ಬಹುತೇಕ ವಯಸ್ಕರು ಅನಕ್ಷರಸ್ಥರು. ಅವರು ಶಿಕ್ಷಣವನ್ನೇ ಪಡೆದಿಲ್ಲ, ಶಾಲೆಗಳಲ್ಲಿ ಅವರ ದಾಖಲಾತಿಯೂ ಇಲ್ಲ. ಹೀಗಿರುವಾಗ ಅವರು ಶಾಲಾ ದಾಖಲೆಗಳನ್ನು ಒದಗಿಸಲು ಸಾಧ್ಯವೇ ಇಲ್ಲ. ಇನ್ನು, ಜನನ ಪ್ರಮಾಣ ಪತ್ರದ ವಿಚಾರವೂ ಇಂಥದ್ದೇ ಸವಾಲು. ಬಹುಸಂಖ್ಯಾತರು ಆಸ್ಪತ್ರೆಗಳಲ್ಲಿ ಜನಿಸಿದವರಲ್ಲ. ಮನೆಗಳಲ್ಲಿ, ಸೂಲಗಿತ್ತಿ ಮಾಡಿಸಿದ ಹೆರಿಗೆಯಿಂದ ಜನಿಸಿದ್ದಾರೆ. ಅವರ ಜನನಕ್ಕೆ ಸರ್ಕಾರ ಯಾವುದೇ ಪ್ರಮಾಣಪತ್ರ ನೀಡಿಲ್ಲ. ಇದು, ಕೇಲವ ವಯಸ್ಕರು ತಮ್ಮ ಪೌರತ್ವವನ್ನು ಸಾಬೀತು ಮಾಡಲು ಮಾತ್ರವೇ ತೊಡಕಾಗಿಲ್ಲ. ಬದಲಾಗಿ, ಅವರ ಮಕ್ಕಳು ಕೂಡ ತಮ್ಮ ಪೋಷಕರ ದಾಖಲೆಗಳನ್ನು ಸಲ್ಲಿಸಿ, ತಮ್ಮ ಪೌರತ್ವವನ್ನು ಸಾಬಿತು ಮಾಡಿಕೊಳ್ಳುವುದಕ್ಕೂ ಸವಾಲಾಗಿದೆ.

ರೋಹ್ತಾಸ್ ಜಿಲ್ಲೆಯ ಅಮರೇಂದ್ರ ಪಾಲ್ ಎಂಬವರು, ತಮ್ಮ ಪೋಷಕರ ಜನನ ಪ್ರಮಾಣಪತ್ರ ಅಥವಾ ಶಾಲಾ ದಾಖಲೆಗಳನ್ನು ಒದಗಿಸಲಾಗದೆ, ತಮ್ಮ ಪೌರತ್ವವನ್ನು ಸಾಬೀತು ಮಾಡಲಾಗದೆ, ಮತದಾನ ಪಟ್ಟಿಯಿಂದ ಹೊರಗುಳಿದುಬಿಡುತ್ತೇನೆಂದು ಆತಂಕ ವ್ಯಕ್ತಪಡಿಸಿದ್ದಾರೆ. ಅಮರೇಂದ್ರ ಪಾಲ್ ರೀತಿಯಲ್ಲಿ ಬಹುಸಂಖ್ಯಾತರು ಇದೇ ಆತಂಕದಲ್ಲಿದ್ದಾರೆ.

ಪರಿಣಾಮವಾಗಿ, ಬಿಹಾರದಲ್ಲಿ ಕನಿಷ್ಠ 20% ಮತದಾರರು ಮತದಾನದ ಹಕ್ಕಿನಿಂದ ಹೊರಗುಳಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ADR ಸಂಸ್ಥೆಯ ಸಂಸ್ಥಾಪಕ ಜಗದೀಪ್ ಛೋಕರ್, “ಬಿಹಾರದ ಜನಸಂಖ್ಯೆಯ ಸುಮಾರು ಅರ್ಧದಷ್ಟು (50%) ಜನರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು” ಎಂದು ಅಂದಾಜಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಹೈಪರ್‌ಲೂಪ್ | ಏನಿದು, ಚೆನ್ನೈನಿಂದ ಬೆಂಗಳೂರಿಗೆ 30 ನಿಮಿಷದಲ್ಲಿ ಪ್ರಯಾಣ ಸಾಧ್ಯವೇ?

“ಆಧಾರ್ ಕಾರ್ಡ್‌ಗಳು ಬ್ಯಾಂಕ್ ಖಾತೆ ತೆರೆಯಲು ಮಾನ್ಯವಾದರೆ, ಪೌರತ್ವ ಸಾಬೀತಿಗೆ ಯಾಕೆ ಅವುಗಳನ್ನು ಪರಿಗಣಿಸುವುದಿಲ್ಲ” ಎಂದು ಗ್ರಾಮೀಣ ಭಾಗದ ಜನರು ಪ್ರಶ್ನಿಸುತ್ತಿದ್ದಾರೆ. ಎಸ್‌ಐಆರ್ ಕ್ರಮವು ಲಕ್ಷಾಂತರ ಜನರು, ವಿಶೇಷವಾಗಿ ಬಡವರು ಮತ್ತು ವಲಸೆ ಕಾರ್ಮಿಕರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವಂತೆ ಮಾಡುತ್ತದೆ ಎಂಬ ಗಂಭೀರ ಆತಂಕ ಮನೆ ಮಾಡಿದೆ.

ಈ ಪರಿಷ್ಕರಣೆಯು ಬಿಹಾರದಲ್ಲಿ ‘ವೋಟ್‌ಬಂದಿ’ (ಮತದಾನದ ಹಕ್ಕನ್ನು ಕಿತ್ತುಕೊಳ್ಳುವ ಕೃತ್ಯ) ಎಂದು ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಟೀಕಿಸಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಚುನಾವಣಾ ಆಯೋಗದ ಮೂಲಕ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ಹಿಂಬಾಗಿಲಿನಿಂದ ಹೇರುತ್ತಿದೆ. ಜನರನ್ನು ಪೌರತ್ವ ಇಲ್ಲದವರೆಂದು ಗುರುತಿಸುವ ಕುತಂತ್ರವಾಗಿದೆ ಎಂದು ವಿಪಕ್ಷಗಳು ಆರೋಪಿಸಿವೆ.

ಚುನಾವಣಾ ಆಯೋಗದ ಈ ಎಸ್‌ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ ವಿಪಕ್ಷಗಳು ಇಂದು (ಜುಲೈ 9) ಬಿಹಾರ ಬಂದ್‌ಗೆ ಕರೆಕೊಟ್ಟಿದ್ದವು. ಬಂದ್‌ಗೆ ಪಾಟ್ನಾ, ಜೆಹಾನಾಬಾದ್, ದಾನಾಪುರ ಮತ್ತು ಅರಾರಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಬಂದ್‌ನಲ್ಲಿ ರಾಹುಲ್ ಗಾಂಧಿ, ತೇಜಸ್ವಿ ಯಾದವ್, ಕನ್ಹಯ್ಯ ಕುಮಾರ್ ಮತ್ತು ಪಪ್ಪು ಯಾದವ್‌ರಂತಹ ಅನೇಕ ನಾಯಕರು ಭಾಗಿಯಾಗಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯನ್ನು ಕೈಬಿಡುವಂತೆ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...