ಬಿಲ್ಕಿಸ್ ಬಾನೊ ಪ್ರಕರಣ | ಅನಾರೋಗ್ಯ, ಬೆಳೆ ಕೊಯ್ಲು ನೆಪ: ಶರಣಾಗತಿಗೆ ಕಾಲಾವಕಾಶ ಕೋರಿದ ಅಪರಾಧಿಗಳು

Date:

ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಎರಡು ವಾರದೊಳಗೆ ಪೊಲೀಸರಿಗೆ ಶರಣಾಗತಿಯಾಗುವಂತೆ ಆದೇಶ ನೀಡಿದ್ದರೂ, ಅನಾರೋಗ್ಯ, ಬೆಳೆ ಕೊಯ್ಲು ನೆಪವೊಡ್ಡಿ ಕೆಲ ಅಪರಾಧಿಗಳು ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಜೈಲು ಅಧಿಕಾರಿಗಳೆದುರು ಶರಣಾಗಲು ಸಮಯಾವಕಾಶ ನೀಡುವಂತೆ ಕೋರಿ ಬಿಲ್ಕಿಸ್‌ ಬಾನೊ ಪ್ರಕರಣದ ಅಪರಾಧಿಗಳು, ನಾನಾ ಕಾರಣಗಳನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಪ್ರಕರಣದ ಹನ್ನೊಂದು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜನವರಿ 8ರಂದು ಆದೇಶಿಸಿತ್ತು. ಇವರಲ್ಲಿ ಮೂವರು ಅಪರಾಧಿಗಳು ಅನಾರೋಗ್ಯ, ಚಳಿಗಾಲದ ಬೆಳೆ ಕೊಯ್ಲು ಹಾಗೂ ಮಗನ ಮದುವೆಯಂತಹ ಕಾರಣಗಳನ್ನು ನೀಡಿ ಶರಣಾಗತಿಗೆ ಕಾಲಾವಕಾಶ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಅನಾರೋಗ್ಯ ಹಾಗೂ ತಂದೆ ಹಾಸಿಗೆ ಹಿಡಿದಿದ್ದಾರೆ ಎಂಬ ಕಾರಣ ನೀಡಿ ಅಪರಾಧಿ ಗೋವಿಂದಭಾಯ್‌ ನಾಯೀ ನಾಲ್ಕು ವಾರಗಳ ಕಾಲಾವಕಾಶ ಕೋರಿದ್ದರೆ, ಚಳಿಗಾಲದ ಬೆಳೆ ಕೊಯ್ಲು ಇರುವುದರಿಂದ ಶರಣಾಗತಿಗೆ ಆರು ವಾರಗಳ ಸಮಯಾವಕಾಶ ನೀಡಬೇಕೆಂದು ಮಿತೇಶ್‌ ಚಮನ್‌ಲಾಲ್‌ ಭಟ್‌ ಕೇಳಿಕೊಂಡಿದ್ದಾನೆ. ಇನ್ನು ಮಗನ ಮದುವೆಯ ಕಾರಣಕ್ಕೆ ಆರು ವಾರಗಳ ಕಾಲಾವಕಾಶ ನೀಡಬೇಕೆಂದು ರಮೇಶ್‌ ರೂಪಭಾಯ್‌ ಚಂದನ್ ಅರ್ಜಿಯ ಸಲ್ಲಿಸುವ ಮೂಲಕ ವಿನಂತಿಸಿದ್ದಾನೆ.

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಎಸಗಿದ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ ಆರೋಪದಲ್ಲಿ ಹನ್ನೊಂದು ಅಪರಾಧಿಗಳು ಸುಪ್ರೀಂ ಕೋರ್ಟ್ ಶಿಕ್ಷೆಗೆ ಗುರಿಯಾಗಿದ್ದರು.

ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ, ಆಗಸ್ಟ್ 14, 2023ರಂದು, ಈ ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಅವಧಿಪೂರ್ವವಾಗಿ ಬಿಡುಗಡೆ ಮಾಡಿತ್ತು.

ಅಪರಾಧ ನಡೆದ ರಾಜ್ಯದ ನೀತಿಗೆ ಅನುಗುಣವಾಗಿ ಕ್ಷಮಾದಾನದ ಅರ್ಜಿಯನ್ನು ಪರಿಗಣಿಸಬೇಕು ಮತ್ತು ವಿಚಾರಣೆ ನಡೆದ ಸ್ಥಳದಲ್ಲಿ ಅಲ್ಲ ಎಂದು ಮೇ 2022ರಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಆಧರಿಸಿ ಅವರ ಶಿಕ್ಷೆ ಅವಧಿ ಕಡಿತಗೊಳಿಸಲಾಗಿತ್ತು.

ಪ್ರಕರಣದ ವಿಚಾರಣೆ ಮಹಾರಾಷ್ಟ್ರದಲ್ಲಿ ನಡೆದಿದ್ದರೂ ಅಪರಾಧಿಗಳನ್ನು ಬಿಡುಗಡೆ ಮಾಡಲು ಗುಜರಾತ್ ಸರ್ಕಾರ ತೀರ್ಪಿನನುಸಾರ ತನ್ನ ಕ್ಷಮಾದಾನ ನೀತಿ ಅನ್ವಯಿಸಿತ್ತು. ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಕರಣದ ಸಂತ್ರಸ್ತೆ ಬಿಲ್ಕಿಸ್‌ ಬಾನೊ ಸೇರಿದಂತೆ ವಿವಿಧ ಅರ್ಜಿದಾರರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ ಜನವರಿ 8ರಂದು ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನು ರದ್ದುಗೊಳಿಸಿತ್ತು. ಪ್ರಕರಣದ ಅಪರಾಧಿಗಳಿಗೆ ಕ್ಷಮಾದಾನ ನೀಡಲು ಗುಜರಾತ್‌ ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ ಎಂದಿದ್ದ ಅದು ಎಲ್ಲಾ ಹನ್ನೊಂದು ಅಪರಾಧಿಗಳಿಗೆ ಎರಡು ವಾರಗಳಲ್ಲಿ ಶರಣಾಗುವಂತೆ ನಿರ್ದೇಶಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...