ಬಿಲ್ಕಿಸ್‌ ಬಾನೊ ಪ್ರಕರಣ: ಆರೋಪಿಗಳ ಕ್ಷಮಾಪಣೆ ಅರ್ಜಿಗಳ ಅಂತಿಮ ವಿಚಾರಣೆ ಆಗಸ್ಟ್‌ 7ಕ್ಕೆ ಸುಪ್ರೀಂ ನಿಗದಿ

Date:

2002ರಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಬಿಲ್ಕಿಸ್‌ ಬಾನೊ ಅವರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅವಧಿಗೂ ಮುಂಚೆ ಕಳೆದ ವರ್ಷ ಬಿಡುಗಡೆ ಮಾಡಲಾದ ಎಲ್ಲ 11 ಆರೋಪಿಗಳ ಕ್ಷಮಾದಾನವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಅಂತಿಮ ವಿಚಾರಣೆಯನ್ನು ಆಗಸ್ಟ್‌ 7ರಂದು ಪ್ರಾರಂಭಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್‌ ಬುಯಾನ್‌ ನೇತೃತ್ವದ ಪೀಠವು ಮನವಿಗಳನ್ನು ಪೂರ್ಣಗೊಂಡಿರುವುದನ್ನು ಹಾಗೂ ಎಲ್ಲ ಅಪರಾಧಿಗಳಿಗೆ ಪತ್ರಿಕೆ ಪ್ರಕಟಣೆಗಳ ಮೂಲಕ ಅಥವಾ ನೇರವಾಗಿ ನೋಟಿಸ್ ನೀಡಲಾಗಿದೆಯೇ ಎಂಬುದನ್ನು ಗಮನಿಸಿತು.

“ಬಿಲ್ಕಿಸ್‌ ಬಾನೊ ಪ್ರಕರಣದ ವಿಷಯದಲ್ಲಿ ಮನವಿಗಳು ಪೂರ್ಣಗೊಂಡಿವೆ ಮತ್ತು ಎಲ್ಲ ಪ್ರಕರಣಗಳಲ್ಲಿನ ಎಲ್ಲ ಪ್ರತಿವಾದಿಗಳಿಗೆ ಪತ್ರಿಕೆ ಪ್ರಕಟಣೆಗಳು ಅಥವಾ ನೇರವಾಗಿ ನೋಟಿಸ್ ನೀಡಲಾಗಿದೆ ಎಂದು ನಾವು ಭಾವಿಸುತ್ತೇವೆ. ನಾವು ಆಗಸ್ಟ್ 7ರಂದು ಅಂತಿಮ ವಿಚಾರಣೆಗೆ ವಿಷಯವನ್ನು ಪಟ್ಟಿ ಮಾಡುತ್ತೇವೆ. ಎಲ್ಲ ಕಕ್ಷಿದಾರರು ಸಂಕ್ಷಿಪ್ತವಾಗಿ ಲಿಖಿತ ಸಲ್ಲಿಕೆಗಳು, ಸಾರಾಂಶಗಳು ಹಾಗೂ ದಿನಾಂಕದ ಪಟ್ಟಿಯನ್ನು ಸಲ್ಲಿಸಬೇಕು” ಎಂದು ಪೀಠ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 9 ರಂದು, ಸ್ಥಳೀಯ ಪೋಲೀಸರು ಬೀಗ ಹಾಕಿರುವ ಮನೆ ಮತ್ತು ಫೋನ್ ಸ್ವಿಚ್ಡ್ ಆಫ್ ಸೇರಿದಂತೆ ನೋಟಿಸ್ ನೀಡಲು ಸಾಧ್ಯವಾಗದ ಅಪರಾಧಿಗಳ ವಿರುದ್ಧ ಗುಜರಾತಿ ಮತ್ತು ಇಂಗ್ಲಿಷ್ ಸೇರಿದಂತೆ ಸ್ಥಳೀಯ ಪತ್ರಿಕೆಗಳಲ್ಲಿ ನೋಟಿಸ್ ಪ್ರಕಟಿಸಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

ಎಲ್ಲ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರವು ವಿನಾಯಿತಿ ನೀಡಿ ಕಳೆದ ವರ್ಷ ಆಗಸ್ಟ್ 15 ರಂದು ಅವಧಿಗೆ ಮುನ್ನವೇ ಬಿಡುಗಡೆಗೊಳಿಸಿತು. ದೋಷಮುಕ್ತಿಗೊಳಿಸಿರುವುದನ್ನು ಪ್ರಶ್ನಿಸಿ ಬಿಲ್ಕಿಸ್‌ ಬಾನೊ ಅವರು ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ, ಜೆಡಿಎಸ್ ಮತ್ತು ಪ್ರಾದೇಶಿಕ ಅಸ್ಮಿತೆ

ಅಪರಾಧಿಗಳಿಗೆ ದೋಷಮುಕ್ತಿಗೊಳಿಸಿರುವುದನ್ನು ಪ್ರಶ್ನಿಸಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಸಿಪಿಎಂ ನಾಯಕಿ ಸುಭಾಷಿಣಿ ಅಲಿ, ಸ್ವತಂತ್ರ ಪತ್ರಕರ್ತೆ ರೇವತಿ ಲಾಲ್, ಲಖನೌ ವಿಶ್ವ ವಿದ್ಯಾನಿಲಯದ ಮಾಜಿ ಉಪಕುಲಪತಿ ರೂಪ್ ರೇಖಾ ವರ್ಮಾ ಸೇರಿದಂತೆ ಹಲವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಗೋಧ್ರಾ ರೈಲು ಬೆಂಕಿ ಘಟನೆಯ ನಂತರ ಭುಗಿಲೆದ್ದ ಗಲಭೆಯ ಸಂದರ್ಭದಲ್ಲಿ ಬಾನುವಿನ ಮೇಲೆ ಬಿಡುಗಡೆಗೊಂಡಿರುವ ಆರೋಪಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಆ ಸಂದರ್ಭದಲ್ಲಿ ಆಕೆಗೆ 21 ವರ್ಷ ವಯಸ್ಸಾಗಿತ್ತು. ಅಲ್ಲದೆ 5 ತಿಂಗಳ ಗರ್ಭಿಣಿಯಾಗಿದ್ದಳು. ಗಲಭೆಯಲ್ಲಿ ಸಾವನ್ನಪ್ಪಿದ ಏಳು ಕುಟುಂಬ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳು ಸೇರಿದ್ದಳು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...