ಬಿಲ್ಕಿಸ್ ಪ್ರಕರಣ | ಶರಣಾಗತಿಗೆ ಕಾಲಾವಕಾಶ ಕೋರಿದ್ದ ಅಪರಾಧಿಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

Date:

ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಎರಡು ವಾರದೊಳಗೆ ಪೊಲೀಸರಿಗೆ ಶರಣಾಗತಿಯಾಗುವಂತೆ ಆದೇಶ ನೀಡಿದ್ದರೂ, ಅನಾರೋಗ್ಯ, ಬೆಳೆ ಕೊಯ್ಲು ನೆಪವೊಡ್ಡಿ ಕೆಲ ಅಪರಾಧಿಗಳು ಶರಣಾಗತಿಗೆ ಕಾಲಾವಕಾಶ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ.

“ಶರಣಾಗತಿಗೆ ಸಮಯ ವಿಸ್ತರಣೆ ಕೋರಿ ಅಪರಾಧಿಗಳು ಉಲ್ಲೇಖಿಸಿರುವ ಕಾರಣಗಳು ಅರ್ಹತೆಯ ಕೊರತೆಯನ್ನು ಹೊಂದಿವೆ” ಎಂದು ನ್ಯಾಯಾಲಯ ಹೇಳಿದ್ದು, ಜನವರಿ 8ರ ತೀರ್ಪಿನ ಪ್ರಕಾರ, ನ್ಯಾಯಾಲಯವು ನಿಗದಿಪಡಿಸಿದ ಮೂಲ ಗಡುವು ಜನವರಿ 21ರೊಳಗೆ ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗಬೇಕು” ಎಂದು ಕಟ್ಟಪ್ಪಣೆ ಹೊರಡಿಸಿದೆ.

Bilkis Bano Case 1

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶರಣಾಗತಿಯನ್ನು ಮುಂದೂಡಲು ಮತ್ತು ಜೈಲಿಗೆ ಹಿಂದಿರುಗಲು ಅರ್ಜಿದಾರರು ಉಲ್ಲೇಖಿಸಿದ ಕಾರಣಗಳು ಯಾವುದೇ ಅರ್ಹತೆಯನ್ನು ಹೊಂದಿಲ್ಲ. ಏಕೆಂದರೆ ಆ ಕಾರಣಗಳು ನಮ್ಮ ನಿರ್ದೇಶನಗಳನ್ನು ಅನುಸರಿಸುವುದನ್ನು ಯಾವುದೇ ರೀತಿಯಲ್ಲಿ ತಡೆಯುವುದಿಲ್ಲ” ಎಂದು ಅರ್ಜಿಗಳನ್ನು ವಜಾಗೊಳಿಸುವಾಗ ನ್ಯಾಯಾಲಯವು ಹೇಳಿದೆ.

ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಸಮಯ ವಿಸ್ತರಣೆ ಕೋರಿ ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳು ಸಲ್ಲಿಸಿದ್ದ ಬಹು ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ವಿಚಾರಣೆ ನಡೆಸಿತು.

ಇದನ್ನು ಓದಿ: ಬಿಲ್ಕಿಸ್ ಪ್ರಕರಣ । ಕೆಟ್ಟ ಕಾಲದಲ್ಲಿ ನ್ಯಾಯ ಗೆಲ್ಲಿಸಿದ ನ್ಯಾಯಮೂರ್ತಿ ನಾಗರತ್ನ

2002ರ ಗುಜರಾತ್ ಕೋಮು ಗಲಭೆಯ ವೇಳೆ, ಕೊಲೆ ಮತ್ತು ಸಾಮೂಹಿಕ ಅತ್ಯಾಚಾರಗೈದು, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಲು ಗುಜರಾತ್ ಸರ್ಕಾರವು ನೀಡಿದ್ದ ಆದೇಶಗಳನ್ನು ಸುಪ್ರೀಂ ಕೋರ್ಟ್ ಜನವರಿ 8ರಂದು ರದ್ದುಗೊಳಿಸಿತ್ತು.

ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಪ್ರಕರಣದ ಹನ್ನೊಂದು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜನವರಿ 8ರಂದು ಆದೇಶಿಸಿತ್ತು. ಇವರಲ್ಲಿ ಮೂವರು ಅಪರಾಧಿಗಳು ಅನಾರೋಗ್ಯ, ಚಳಿಗಾಲದ ಬೆಳೆ ಕೊಯ್ಲು ಹಾಗೂ ಮಗನ ಮದುವೆಯಂತಹ ಕಾರಣಗಳನ್ನು ನೀಡಿ ಶರಣಾಗತಿಗೆ ಕಾಲಾವಕಾಶ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ(ಜ.19) ತಿರಸ್ಕರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...