40% ಕಮಿಷನ್ | ತನಿಖೆಗೆ ಜಸ್ಟಿಸ್ ನಾಗಮೋಹನ್ ದಾಸ್ ಸಮಿತಿ ರಚನೆ

Date:

ಬಿಜೆಪಿ ಸರ್ಕಾರದ ಅವಧಿಯಲ್ಲಿ ಟೆಂಡರ್‌ ನೀಡುವಾಗ 40% ಕಮಿಷನ್‌ ಪಡೆಯುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಆರೋಪಿಸಿದ್ದರು. ಕಮಿಷನ್‌ ಭ್ರಷ್ಟಾಚಾರದ ತನಿಖೆ ನಡೆಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಮಿತಿ ರಚಿಸಿದೆ.

ತನಿಖಾ ಸಮಿತಿ ರಚನೆ ಮಾಡಿ ಗುರುವಾರ ಆದೇಶ ಹೋರಡಿಸಿರುವ ಸರ್ಕಾರ, “ಕಾಮಗಾರಿಗಳ ಟೆಂಡರ್‌, ಪುನರ್‌ ಅಂದಾಜು, ಬಾಕಿ ಮೊತ್ತ ಬಿಡುಗಡೆ ಸೇರಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಬೇಕು. ಪ್ರಕರಣಗಳಿಗೆ ಸಂಬಂಧಿಸಿದ ಸ್ಥಳ, ದಾಖಲಾತಿಗಳನ್ನು ಪರಿಶೀಲಿಸಬೇಕು. ಆರೋಪಿಗಳನ್ನು ಪತ್ತೆ ಮಾಡಿ ಸೂಕ್ತ ಶಿಫಾರಸ್ಸುಗಳೊಂದಿಗೆ ಸಂಪೂರ್ಣ ವರದಿಯನ್ನು 30 ದಿನಗಳ ಒಳಗೆ ಸಲ್ಲಿಸಬೇಕು” ಎಂದು ಹೇಳಿದೆ.

“ತನಿಖೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ನೆರವು ನೀಡಬೇಕು. ತನಿಖಾ ಸಮಿತಿ ಕೇಳುವ ಅಗತ್ಯ ದಾಖಲೆಗಳು, ಮಾಹಿತಿಗಳು, ಕಡತಗಳನ್ನು ಅಧಿಕಾರಿಗಳು ಒದಗಿಸಬೇಕು. ಸಮಿತಿಯು ತನಿಖೆಗಾಗಿ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು ಮತ್ತು ಆಡಳಿತಾತ್ಮಕ ಸಲಹೆಗಾರರನ್ನು ನೇಮಿಸಿಕೊಳ್ಳಬಹುದು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಟೆಂಡರ್‌ ಪ್ರಕ್ರಿಯೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಮತ್ತು ದೂರುಗಳು ಬಂದಿದ್ದರೂ, ಹಿಂದಿನ ಸರ್ಕಾರದ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಯಾವುದೇ ತನಿಖೆ ಆಗಿಲ್ಲ. ಆಡಳಿತದಲ್ಲಿ ಪಾರದರ್ಶಕತೆ ಜಾರಿಗೊಳಿಸುವ ಉದ್ದೇಶದಿಂದ ತನಿಖಾ ಸಮಿತಿ ರಚಿಸಲಾಗಿದೆ” ಎಂದು ಆದೇಶದಲ್ಲಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...