ಬಿಜೆಪಿ, ಕಾಂಗ್ರೆಸ್ ಆಯ್ತು, ಈಗ ಜೆಡಿಎಸ್‌ಗೂ ಅಂಟಿದ ʼರೌಡಿ ನಂಟುʼ

Date:

  • ಎ‌ಚ್‌ಡಿಕೆ ಜೊತೆ ಜೆಡಿಎಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಬಂಡೆ ಮಂಜ
  • ಶೀಘ್ರವೇ ಜೆಡಿಎಸ್ ಸೇರ್ಪಡೆಯಾಗಲಿದ್ದಾರಂತೆ ಕೊಲೆ ಪ್ರಕರಣದ ಆರೋಪಿ

ರಾಷ್ಟ್ರೀಯ ಪಕ್ಷಗಳೊಳಗೆ ಆರಂಭವಾದ ರೌಡಿಗಳ ಪಕ್ಷ ಸೇರ್ಪಡೆ ಕಾರ್ಯ ಈಗ ಪ್ರಾದೇಶಿಕ ಪಕ್ಷಗಳಿಗೂ ವಿಸ್ತರಿಸಿದೆ. ಈ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಹಿಗ್ಗಾಮುಗ್ಗ ಜಾಡಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈಗ ತಮ್ಮದೇ ಪಕ್ಷದ ಕಾರ್ಯಕ್ರಮದ ಭೋಜನ ಕೂಟದ ವೇಳೆ ರೌಡಿಶೀಟರ್ ಜೊತೆ ಕುಳಿತು ವಿವಾದಕ್ಕೆ ಎಡೆಯಾಗಿದ್ದಾರೆ.

ಅಂದ ಹಾಗೆ ಎಚ್ ಡಿ ಕುಮಾರಸ್ವಾಮಿ ಜೊತೆ ಕಾಣಿಸಿಕೊಂಡಿರುವ ರೌಡಿ ಶೀಟರ್ ಹೆಸರು ಬಂಡೆ ಮಂಜ. ಈತ ಆನೇಕಲ್‌ನ ಪ್ರಭಾವಿ ಉದ್ಯಮಿ, ರಾಜಕಾರಣಿ ಬಿಎಂಎಲ್ ಕೃಷ್ಣಪ್ಪ ಕೊಲೆ ಪ್ರಕರಣದ ಎರಡನೇ ಆರೋಪಿ. ಇಂತಹ ಗುರುತರ ಆರೋಪ ಹೊತ್ತಿರುವ ರೌಡಿಶೀಟರ್ ಜೊತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಜೆಡಿಎಸ್‌ನ ಮಾಜಿ ವಿಧಾನ ಪರಿಷತ್ ಸದಸ್ಯ, ಹಾಲಿ ಕಾಂಗ್ರೆಸ್ ಮುಖಂಡ ಬಿಇಎಂಎಲ್ ಕಾಂತರಾಜು, ಎಚ್ ಡಿ ಕುಮಾರಸ್ವಾಮಿ ಹಾಗೂ ಬಂಡೇ ಮಂಜು ನಡುವಿನ ಗೆಳೆತನದ ಈ ಫೋಟೋಗಳನ್ನು ಬಹಿರಂಗಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆನೇಕಲ್‌ನಲ್ಲಿ ನಡೆದ ಜಲಧಾರೆ ಕಾರ್ಯಕ್ರಮದಲ್ಲಿ ಬಂಡೆ ಮಂಜ, ಹೆಚ್ಡಿಕೆ ಜೊತೆ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಕಾರ್ಯಕ್ರಮವೊಂದರ ಗುದ್ದಲಿ ಪೂಜೆಯಲ್ಲೂ ಭಾಗವಹಿಸಿದ್ದರು, ಶಾಸಕ ಶ್ರೀನಿವಾಸ್ ಮೂರ್ತಿ ಜೊತೆ ಸೇರಿಕೊಂಡಿರುವ ಮಂಜ, ನೆಲಮಂಗಲವನ್ನ ರಕ್ತಮಂಗಲವನ್ನಾಗಿಸುವ ಹುನ್ನಾರ ನಡೆಸುತ್ತಿದ್ದಾರೆ. ಇಂತಹವರಿಗೆ ಕುಮಾರಸ್ವಾಮಿ ಜೊತೆಯಾಗುತ್ತಾರೆಂದರೆ ಏನು ಅರ್ಥ ಎಂದು ಕಾಂತರಾಜು ಎಚ್‌ಡಿಕೆಯವರನ್ನು ಪ್ರಶ್ನಿಸಿದ್ದಾರೆ.

ಮಾಹಿತಿ ಮೂಲವೊಂದರ ಪ್ರಕಾರ ಬಂಡೆ ಮಂಜ ಶೀಘ್ರದಲ್ಲೇ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಅದರ ಪೂರ್ವಭಾವಿಯಾಗಿ ಪಕ್ಷ ಪ್ರಮುಖರ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...