ಸಂಸತ್‌ನಲ್ಲಿ ತಳ್ಳಾಟ: ರಾಹುಲ್ ವಿಡಿಯೋವನ್ನು ಕ್ಷಣಾರ್ಧದಲ್ಲೇ ತಿರುಚಿದ ಬಿಜೆಪಿ!

Date:

ಗುರುವಾರ ಬೆಳಗ್ಗೆ ಸಂಸತ್‌ ಭವನ ಪ್ರವೇಶಿಸುವ ವೇಳೆ ಕಾಂಗ್ರೆಸ್‌ ಮತ್ತು ಬಿಜೆಪಿ ಸಂಸದರ ನಡುವೆ ತಳ್ಳಾಟ ನಡೆದಿದೆ. ಸದನದೊಳಗೆ ಹೋಗಲು ಬಿಡದೆ, ತಮ್ಮನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ರಾಹುಲ್‌ ಅವರೇ ಬಿಜೆಪಿ ಸಂಸದರನ್ನು ತಳ್ಳಿದರೆಂದು ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಆರೋಪಿಸಿದ್ದಾರೆ. ಆ ಬಳಿಕ, ರಾಹುಲ್‌ ಅವರನ್ನು ನಮ್ಮ ಮುಂದಿದ್ದರು. ತಳ್ಳಾಟ ನಮ್ಮ ಹಿಂದಿನಿಂದ ಆರಂಭವಾಯಿತು ಎಂದು ಸಾರಂಗಿ ಹೇಳಿಕೊಂಡಿದ್ದಾರೆ.

ಈ ನಡುವೆ, ರಾಹುಲ್ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದ ವಿಡಿಯೋವನ್ನು ಬಿಜೆಪಿ ಐಟಿ ಸೆಲ್ ಕೆಲವೇ ನಿಮಿಷಗಳಲ್ಲಿ ತಿರುಚಿದೆ. ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದೆ. ರಾಹುಲ್ ಗಾಂಧಿ ತಾವೇ ಬಿಜೆಪಿ ಸಂಸದರನ್ನು ತಳ್ಳಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂಬಂತೆ ಎಡಿಟ್ ಮಾಡಿ, ಸುಳ್ಳು ಮಾಹಿತಿ ಹಬ್ಬಿಸುತ್ತಿದೆ.

ಎಡಿಟ್ ಮಾಡಿದ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, “ತಾವೇ ಮ್ಯಾನ್ ಹ್ಯಾಂಡಲಿಂಗ್ ಮಾಡಿದ್ದನ್ನು ರಾಹುಲ್‌ ಗಾಂಧಿ ಒಪ್ಪಿಕೊಂಡಿದ್ದಾರೆ. ‘ಒಂದು ತಳ್ಳುವಿಕೆಯಿಂದ ಏನೂ ಆಗುವುದಿಲ್ಲ’ವೆಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಆ ಮೂಲಕ ಅವರ ಆಕ್ರಮಣಕಾರಿ ನಡವಳಿಕೆಯನ್ನು ನಾಚಿಕೆಯಿಲ್ಲದೆ ತಳ್ಳಿಹಾಕುತ್ತಾರೆ. ಹಿರಿಯ ಸಂಸದರೊಬ್ಬರ ತಲೆಗೆ ಪೆಟ್ಟು ಬಿದ್ದು ಇಬ್ಬರು ಸಂಸದರು ಆಸ್ಪತ್ರೆಗೆ ದಾಖಲಾಗಿರುವ ಘಟನೆಯನ್ನು ಅವರು ಕೀಳಾಗಿ ಕಾಣುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ರಾಹುಲ್‌ ಗಾಂಧಿ ಮಾತನಾಡಿರುವ ಪರಿಪೂರ್ಣ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಆ ವಿಡಿಯೋದಲ್ಲಿ ವರದಿಗಾರರು ಕೇಳುವ ‘ಖರ್ಗೆ ಅವರನ್ನೂ ತಳ್ಳಲಾಗಿದೆಯೇ?’ ಎಂಬ ಪ್ರಶ್ನೆಗೆ ಉತ್ತರಿಸಿರುವ ರಾಹುಲ್‌ ಗಾಂಧಿ, “ಹೌದು, ಖರ್ಗೆ ಅವರನ್ನೂ ತಳ್ಳಲಾಗಿದೆ. ಆದರೆ, ಅಂತಹ ತಳ್ಳಾಟದಿಂದ ನಮಗೇನು ಆಗದು. ಆದರೆ ಇದು ಸಂಸತ್ತಿನ ಪ್ರವೇಶ ದ್ವಾರ. ಇಲ್ಲಿಂದ ಒಳಗೆ ಹೋಗುವುದು ನಮ್ಮ ಹಕ್ಕು. ಆದರೆ ಬಿಜೆಪಿ ಸದಸ್ಯರು ನಮ್ಮನ್ನು ಒಳಗೆ ಹೋಗದಂತೆ ತಡೆಯುತ್ತಿದ್ದರು” ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ಅವರ ಸ್ಪಷ್ಟ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡಿವೆ. ಸಂಪೂರ್ಣ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೂ, ಬಿಜೆಪಿಯ ಐಟಿ ಸೆಲ್ ಹೆಡ್ ಅಮಿತ್ ಮಾಳವೀಯ ಮತ್ತು ಸಂಸದ ತೇಜಸ್ವಿ ಸೂರ್ಯ ಅವರು ಎಡಿಟ್ ಮಾಡಿದ ವಿಡಿಯೋವನ್ನು ಹಂಚಿಕೊಂಡು ತಮ್ಮ ದ್ವೇಷ ರಾಜಕಾರಣ ಮತ್ತು ವಾಚಾಳಿತನವನ್ನು ಪ್ರದರ್ಶಿಸಿದ್ದಾರೆ.

ಎಡಿಟೆಡ್ ವಿಡಿಯೋವನ್ನು ಹಂಚಿಕೊಂಡ ತೇಜಸ್ವಿ ಸೂರ್ಯ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಫ್ಯಾಕ್ಟ್‌ಚೆಕರ್ ಮೊಹಮದ್ ಝುಬೇರ್, “ತೇಜಸ್ವಿ ಸೂರ್ಯ, ನಿಮಗೆ ಹಿಂದಿ ಅರ್ಥವಾಗುತ್ತದೆ ಎಂಬಂತೆ ಕಾಣುತ್ತಿದೆ. ಆದರೆ, ರಾಹುಲ್‌ ಹೇಳಿದ್ದು, ಮಲ್ಲಿಕಾರ್ಜುನ ಖರ್ಗೆ ಅವರನ್ನೂ ತಳ್ಳಲಾಗಿದೆ. ಆದರೆ, ಇಂತಹ ತಳ್ಳಾಟದಿಂದ ನಮಗೇನು ಆಗದು ಎಂದಿದ್ದಾರೆ. ಅವರ ಪೂರ್ಣ ಹೇಳಿಕೆಯನ್ನು ನೀವು ಪರಿಶೀಲಿಸಬಹುದು” ಎಂದು ಛೇಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...