ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ: ಸಿದ್ದರಾಮಯ್ಯ ಕಿಡಿ

Date:

ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ ಮಾಡುತ್ತಿದೆ. ಬಿಜೆಪಿಯ ಟೀಕೆ ಡ್ರಾಮಾಗಳಿಗೆ ಮರುಳಾಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌

ಹಾಸನದಲ್ಲಿ ವಿವಿಧ ಇಲಾಖೆಗಳ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ, ಹೊಸ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು.

“ರಾಜ್ಯದಲ್ಲಿ ಜನರ ತಲಾ ಆದಾಯ ಹೆಚ್ಚಳವಾಗಿದೆ. ಈ ಜಿಡಿಪಿ ಬೆಳವಣಿಗೆಗೆ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಕಾರಣ. ಇಡೀ ದೇಶದಲ್ಲಿ 18% GDP ಬೆಳವಣಿಗೆ ಆಗಿ ದೇಶದ ಅಭಿವೃದ್ಧಿಗೆ ಅತಿ ಹೆಚ್ಚು ಕೊಡುಗೆ ನೀಡಿದ ಪ್ರಥಮ ರಾಜ್ಯ ನಮ್ಮದಾಗಿದೆ. ಈ ಬೆಳವಣಿಗೆ ನಮ್ಮ ಗ್ಯಾರಂಟಿ ಯೋಜನೆಗಳ ಫಲ” ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಾಸನ ಜಿಲ್ಲೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ್ದಕ್ಕಾಗಿ 166 ಕೋಟಿ ಕೊಟ್ಟಿದ್ದೇವೆ. ಈ ಮಟ್ಟದ ಹಣ ಹಾಸನ ಮಹಿಳೆಯರಿಗೆ ಉಳಿತಾಯವಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಾಸನ ಜಿಲ್ಲೆಯ ಮಹಿಳೆಯರಿಗೆ 477 ಕೋಟಿ ರೂಪಾಯಿ ನೀಡಿದ್ದೇವೆ. ಈ ಹಣವೂ ಮಹಿಳೆಯರ ಖಾತೆಗೆ ನೇರವಾಗಿ ಹೋಗಿದೆ. ಉಚಿತ ವಿದ್ಯುತ್ ನಿಂದಾಗಿ ಹಾಸನ ಜಿಲ್ಲೆಯೊಂದರಲ್ಲೇ 89 ಕೋಟಿ ರೂಪಾಯಿ ಹಣ ಜನರಿಗೆ ಉಳಿತಾಯವಾಗಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 135.33 ಕೋಟಿ ರೂ. ಹಣ ಹಾಸನ ಜಿಲ್ಲೆಗೆ ನೀಡಲಾಗಿದೆ. ಯುವನಿಧಿಯಲ್ಲಿ ಮಾಡಿರುವ ಹಣ ಕೂಡ ಜಿಲ್ಲೆಯ ಯುವಜನತೆಗೆ ಉಳಿತಾಯವಾಗಿದೆ. ಹೀಗೆ ಪ್ರತೀ ಒಂದೊಂದು ಗ್ಯಾರಂಟಿ ಯೋಜನೆಯಲ್ಲಿ ಜಿಲ್ಲೆಯ ಜನರಿಗೆ ನೂರಾರು ಕೋಟಿ ಹಣ ಉಳಿತಾಯವಾಗಿದೆ” ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

“ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ನೆಮ್ಮದಿ ಕಂಡುಕೊಳ್ಳುತ್ತಿದ್ದಾರೆ. ಈ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ನಾನಾ ಡ್ರಾಮಗಳನ್ನು ಸೃಷ್ಟಿಸುತ್ತಿದೆ, ಭರ್ಜರಿ ನಾಟಕ ಆಡುತ್ತಿದೆ” ಎಂದು ಟೀಕಿಸಿದರು.

“ಹಾಸನದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದ್ದು, ಏರ್ ಪೋರ್ಟ್ ನಿರ್ಮಾಣಕ್ಕೆ ರಾಜ್ಯದ ಪಾಲಿನ ಹಣವನ್ನು ನಿರಂತರವಾಗಿ ನೀಡುತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶ ಕೊಡದೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು” ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಶಾಸಕರಾದ ಶಿವಲಿಂಗೇಗೌಡರು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...