ಬಿಜೆಪಿ ಮೊದಲ ವಿಕೆಟ್ ಪತನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್ ವೈ ಗೋಪಾಲಕೃಷ್ಣ

Date:

  • ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ
  • ಮರಳಿ ಮಾತೃ ಪಕ್ಷಕ್ಕೆ ಸೇರಿದ ಹಿರಿಯ ನಾಯಕ

ಕರ್ನಾಟಕದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಬೆನ್ನಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಪಕ್ಷಗಳಿಂದ ಪಕ್ಷಕ್ಕೆ ಜಿಗಿಯುವವರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಇದೀಗ ಶಾಸಕ ಎನ್.ವೈ ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಯ ಮೊದಲ ವಿಕೆಟ್‌ ಪತನವಾಗಿದೆ.

ಇಂದು ಬೆಳಗ್ಗೆ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ನಿವಾಸಕ್ಕೆ ಭೇಟಿ ನೀಡಿದ್ದ ಬಳ್ಳಾರಿ ಜಿಲ್ಲೆಯ ಕೂಡ್ಲಿಗೆ ಕ್ಷೇತ್ರದ ಬಿಜೆಪಿ ಹಾಲಿ ಶಾಸಕ ಎನ್ ವೈ ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಎನ್ ವೈ ಗೋಪಾಲಕೃಷ್ಣ ಅವರು ಮೂಲತಃ ಕಾಂಗ್ರೆಸ್‌ ಪಕ್ಷದವರೇ ಆಗಿದ್ದು, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಸತತ 5 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. 2013ರ ಚುನಾವಣೆಯಲ್ಲಿ ನೇರ್ಲಗುಂಟೆ ಎಸ್‌ ತಿಪ್ಪೇಸ್ವಾಮಿ ವಿರುದ್ಧ ಪರಾಭವಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ಶಾಸಕರಾಗಿದ್ದ ಶ್ರೀರಾಮುಲು ಸಂಸದ ಸ್ಥಾನಕ್ಕೆ ಆಯ್ಕೆಯಾದಾಗ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಿತು. ಈ ವೇಳೆ ಸ್ಪರ್ಧೆ ಮಾಡಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದರು.

ಈ ಸುದ್ದಿ ಓದಿದ್ದೀರಾ?: `ಯಾವ ಮೋದಿನೂ ಇಲ್ಲ, ಪಾದಿನೂ ಇಲ್ಲ’ ಬಿಜೆಪಿ ಶಾಸಕನ ಆಡಿಯೋ ವೈರಲ್

ಆದರೆ, ಕಳೆದ ವಿಧಾನಸಭೆ ಚುನಾವಣೆ ವೇಳೆ ಮೊಳಕಾಲ್ಮೂರು ಹಾಗೂ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಸಿಗದೇ ಇರುವುದರಿಂದ ಬಂಡಾಯವೆದ್ದು, ಬಿಜೆಪಿ ಸೇರಿದ್ದ ಇವರು ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು.

ಮುಂಬರುವ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ ಬಯಸಿದ್ದು, ಹೈ ಕಮಾಂಡ್‌ ಇದಕ್ಕೆ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಯಾಗಿದ್ದ ಶ್ರೀರಾಮುಲು ಅವರ ಬದ್ಧ ವೈರಿ ನೇರ್ಲಗುಂಟೆ ಎಸ್‌ ತಿಪ್ಪೇಸ್ವಾಮಿ ಅವರು ಬಿಜೆಪಿ ಸೇರಿದ್ದರಿಂದ ಕಾಂಗ್ರೆಸ್‌ಗೆ ಈ ಭಾಗದಲ್ಲಿ ಅಲ್ಪ ಹಿನ್ನೆಡೆಯುಂಟಾಗಿತ್ತು.

ಆದರೆ, ಇದೇ ಭಾಗದ ಪ್ರಭಾವಿ ನಾಯಕರಾಗಿದ್ದ ಮಾಜಿ ಶಾಸಕರಾದ ಗೋಪಾಲಕೃಷ್ಣ ಮತ್ತೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರಿಂದ, ಪಕ್ಷಕ್ಕೆ ಇನ್ನಷ್ಟು ಬಲ ಬಂದಿದೆ. ಹಿರಿಯ ನಾಯಕರ ನಡುವೆ ತೀವ್ರ ಪೈಪೋಟಿ ನಡೆಯುವ ಸಾಧ್ಯತೆ ಇದೆ.

ಇದೇ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೀಶ್‌ ಬಾಬು ಹಾಗೂ ಹಿರಿಯ ನಾಯಕ ವಿ ಎಸ್‌ ಉಗ್ರಪ್ಪ ಟಿಕೆಟ್‌ ಬಯಸಿದ್ದರು. ಎನ್‌ ವೈ ಗೋಪಾಲಕೃಷ್ಣ ಅವರ ಆಗಮದಿಂದ ಇವರಿಬ್ಬರಿಗೂ ಟಿಕೆಟ್‌ ತಪ್ಪಿದಂತಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...