ಫೆ.19-20 ರಂದು ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ: ಮಂಜಿಂದರ್ ಸಿಂಗ್ ಸಿರ್ಸಾ

Date:

ದೆಹಲಿ ಚುನಾವಣಾ ಫಲಿತಾಂಶ ಹೊರಬಿದ್ದು ಬಿಜೆಪಿ ಬಹುಮತ ಗಳಿಸಿ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ. ದೆಹಲಿಯ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲದ ನಡುವೆ, ಇದೇ ಫೆಬ್ರವರಿ 19 ಅಥವಾ 20 ರಂದು ಬಿಜೆಪಿ ಸರ್ಕಾರದ ಪ್ರಮಾಣ ವಚನ ಸಮಾರಂಭ ನಡೆಯುವ ಸಾಧ್ಯತೆ ಇದೆ.

27 ವರ್ಷಗಳ ನಂತರ ಕೇಸರಿ ಪಕ್ಷವು ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತಿದ್ದು, ಪ್ರಮಾಣವಚನ ಸ್ವೀಕಾರಕ್ಕೆ ಒಂದು ದಿನ ಮೊದಲು ಬಿಜೆಪಿ ಶಾಸಕಾಂಗ ಪಕ್ಷ ನಡೆಯುವ ಸಾಧ್ಯತೆಯಿದೆ.

ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಮತ್ತು ಅಮೆರಿಕ ಪ್ರವಾಸದಿಂದ ಹಿಂದಿರುಗಿದ ನಂತರ ಸರ್ಕಾರ ರಚನೆಗೆ ಸಿದ್ಧತೆಗಳು ವೇಗ ಪಡೆಯುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ, ಬಹುಶಃ ಒಬ್ಬರು ಅಥವಾ ಇಬ್ಬರು ಅವರ ಉಪನಾಯಕರು ಮತ್ತು ಮಂತ್ರಿಮಂಡಲ ರಚಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನಿ ಮೋದಿ ಆಗಮನದ ನಂತರ, ಪಕ್ಷದ ಕೇಂದ್ರ ನಾಯಕತ್ವವು ಮುಖ್ಯಮಂತ್ರಿ ಹೆಸರನ್ನು ಘೋಷಿಸುವ ಮೊದಲು ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಚರ್ಚಿಸಲು ವೀಕ್ಷಕರನ್ನು ನೇಮಿಸುತ್ತದೆ.

ರಾಜೌರಿ ಗಾರ್ಡನ್‌ನ ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ, ಫೆಬ್ರವರಿ 18-19 ರಂದು ಶಾಸಕಾಂಗ ಪಕ್ಷದ ಸಭೆಯ ನಂತರ ಹೊಸ ಸರ್ಕಾರ ಫೆಬ್ರವರಿ 19-20 ರಂದು ಅಸ್ತಿತ್ವಕ್ಕೆ ಬರಬಹುದು ಎನ್ನುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಇದೆ ಎಂಬ ವರದಿಗಳನ್ನು ಬಿಜೆಪಿಯ ಹಿರಿಯ ನಾಯಕರು ತಳ್ಳಿಹಾಕಿದ್ದು, ಅವೆಲ್ಲ ಕೇವಲ ಊಹಾಪೋಹವಷ್ಟೆ ಎಂದಿದ್ದಾರೆ.

ಮುಖ್ಯಮಂತ್ರಿ ಹುದ್ದೆಗೆ ಯಾವುದೇ ಪೈಪೋಟಿ ಇಲ್ಲ. ನಮ್ಮ ಪಕ್ಷದಲ್ಲಿ, ಸಿಎಂ ಅಥವಾ ಶಾಸಕಾಂಗ ಪಕ್ಷದ ನಾಯಕನನ್ನು ಶಾಸಕರ ಸಭೆಯಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದರು. ನಾವು ಅಭಿವೃದ್ಧಿ, ಜನರಿಗೆ ಶುದ್ಧ ನೀರು ಮತ್ತು ಗಾಳಿಯನ್ನು ಒದಗಿಸುವುದಕ್ಕೆ ಆದ್ಯತೆ ನೀಡುತ್ತೇವೆ. ಯಮುನಾ ನೀರನ್ನು ಮಾಲಿನ್ಯ ಮುಕ್ತಗೊಳಿಸಲು ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಪ್ರಧಾನಿಯವರ ಭರವಸೆಯಂತೆ, ಎಎಪಿ ಸರ್ಕಾರದಿಂದ ಅಡ್ಡಿಪಡಿಸಲ್ಪಟ್ಟ ಆಯುಷ್ಮಾನ್ ಭಾರತ್ ಯೋಜನೆಯನ್ನು ಹೊಸ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿ ಜಾರಿಗೆ ತರಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...