ಚುನಾವಣೆ 2023 | ‘ಕೈ’ ನಾಯಕರ ಬೆದರಿಸಲು ಐಟಿ, ಇಡಿ, ಸಿಬಿಐ ಛೂ ಬಿಟ್ಟ ಬಿಜೆಪಿ; ಸಿದ್ದರಾಮಯ್ಯ ಕಿಡಿ

Date:

  • ದಾಳಿಗಳಿಗೆ ಹೆದರದಂತೆ ಸಿದ್ದರಾಮಯ್ಯ ಕರೆ
  • ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಪತ್ರಿಕಾಗೋಷ್ಠಿ

ಸೋಲಿನ ಭೀತಿ ಎದುರಿಸುತ್ತಿರುವ ಬಿಜೆಪಿಯು ಕಾಂಗ್ರೆಸ್ ನಾಯಕರನ್ನು ಬೆದರಿಸಲು ಐಟಿ, ಇಡಿ ಹಾಗೂ ಸಿಬಿಐ ಮುಂತಾದ ಸ್ವಾಯತ್ತ ಸಂಸ್ಥೆಗಳನ್ನು ಛೂ ಬಿಡುವ ಷಡ್ಯಂತ್ರ ನಡೆಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಸಿದ್ದರಾಮಯ್ಯ ಅವರು, ಬಿಜೆಪಿ ಸರ್ಕಾರದ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ.

“ಕಾಂಗ್ರೆಸ್ ಅಭ್ಯರ್ಥಿಗಳು, ನಾಯಕರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬಗ್ಗೆ ಒಲವು ಹೊಂದಿರುವರ ಮೇಲೆ ದಾಳಿ ಮಾಡಿ ಬೆದರಿಸಲು ಕೇಂದ್ರ  ಸರ್ಕಾರ ಸಾವಿರಕ್ಕೂ ಹೆಚ್ಚು ಐಟಿ, ಇಡಿ ಮತ್ತು ಸಿಬಿಐ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿ ಹೋಗಿದ್ದಾರೆ. ಪಕ್ಷದೊಳಗೆ ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಆದ್ದರಿಂದ, ಬಿಜೆಪಿ ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ” ಎಂದಿದ್ದಾರೆ.

“ಬಿಜೆಪಿ ಸರ್ಕಾರದ ಈ ಷಡ್ಯಂತ್ರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹೋರಾಟದ ಮೂಲಕವೇ ಬಿಜೆಪಿಯ ಈ ದಮನಕಾರ್ಯವನ್ನು ಎದುರಿಸುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಭೀತಿಗೀಡಾಗದೆ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕು” ಎಂದು ಕರೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧರ್ಮ, ದೇವರು ಬಿಜೆಪಿಗೆ ಮತಫಸಲು ಕೊಡುವ ಸಾಧನಗಳಷ್ಟೇ: ಎಚ್‌ ಡಿ ಕುಮಾರಸ್ವಾಮಿ

“ಬಿಜೆಪಿಗೆ ಕರ್ನಾಟಕದಲ್ಲಿ ಸೋಲಿನ ಭೀತಿ ಆರಂಭವಾಗಿದೆ. ಎಲ್ಲ ಸಮೀಕ್ಷೆಗಳು ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳುತ್ತಿವೆ. ಹಲವು ಹಾಲಿ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ನಿಗಮ ಮಂಡಳಿಯ ಅಧ್ಯಕ್ಷರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಅಲೆ ಇದೆ ಎಂದು ಕರ್ನಾಟಕದ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಕಾರಣದಿಂದ ಹಾಲಿ ಶಾಸಕರು ಕಾಂಗ್ರೆಸ್‌ ಸೇರುತ್ತಿದ್ದಾರೆ. ಅವರ್ಯಾರು ಮೂರ್ಖರಲ್ಲ, ತಾವು ಬಿಜೆಪಿಯಲ್ಲಿಯೇ ಮುಂದುವರೆದರೆ ಸೋಲುತ್ತೇವೆ ಎಂಬುದು ಅವರಿಗೆ ಗೊತ್ತಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಬಿಜೆಪಿ ಹೈಕಮಾಂಡ್‌ ಗೆ ಕೂಡ ಕರ್ನಾಟಕದ ಬಿಜೆಪಿ ಮುಳುಗುತ್ತಿದೆ, ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಗೊತ್ತಿದೆ. ತಮ್ಮ ದ್ವೇಷ ರಾಜಕೀಯ ಮತ್ತು ಹಿಂದುತ್ವದ ಅಜೆಂಡಾ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕೆಲಸ ಮಾಡುವುದಿಲ್ಲ ಎಂಬುದು ಅವರಿಗೆ ಅರ್ಥವಾಗಿದೆ” ಎಂದು ಕುಟುಕಿದ್ದಾರೆ.

“ಬಿಜೆಪಿಗೆ ಉಳಿದಿರುವ ಏಕೈಕ ಮಾರ್ಗವೆಂದರೆ ಅಧಿಕಾರದ ದುರುಪಯೋಗ ಮತ್ತು ತಮ್ಮ ಹಣಬಲದ ಬಳಕೆ. ಹಣ ನೀಡಿದರೂ ಕೂಡ ರಾಜ್ಯದ ಜನ ಕಾಂಗ್ರೆಸ್‌ ಗೆ ಮತ ನೀಡಬೇಕು ಎಂದು ನಿರ್ಧಾರ ಮಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಬಿಜೆಪಿ ಸರ್ಕಾರ ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರ್ಕಾರ. ರಾಜ್ಯದ ಮತದಾರರಿಗೆ ತಾವು ಹಿಂದಿನ ಚುನಾವಣೆಯಲ್ಲಿ ಮಾಡಿದ ತಪ್ಪಿನ ಅರಿವಾಗಿದೆ. ಜನ ಹಿಂದಿನ ಕಾಂಗ್ರೆಸ್‌ ಸರ್ಕಾರದ ಯೋಜನೆಗಳನ್ನು ಸ್ಮರಿಸುತ್ತಿದ್ದಾರೆ. ಇದರಿಂದ ಬಿಜೆಪಿಗರು ಬೆದರಿದ್ದಾರೆ” ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.

“ಕಾಂಗ್ರೆಸ್‌ ಪಕ್ಷಕ್ಕೆ ಯಾರೂ ಬೆಂಬಲ ನೀಡಬಾರದು ಎಂಬುದು ಬಿಜೆಪಿಯವರ ಉದ್ದೇಶ. ಇದಕ್ಕೆ ನಮ್ಮ ಕಾರ್ಯಕರ್ತರು ಮತ್ತು ನಾಯಕರು ಬಗ್ಗುವವರಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...