ಗೆಲ್ಲಲ್ಲ ಎಂದು ಗೊತ್ತಿದ್ದೇ ಬಿಜೆಪಿ 12 ಹಾಲಿ ಸಂಸದರನ್ನು ಬದಲಾಯಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Date:

“ಇಡೀ ದೇಶದಲ್ಲೇ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿಯವರಿಗೆ ತಾವು ಗೆಲ್ಲುವುದಿಲ್ಲ ಎನ್ನುವುದು ಅರ್ಥವಾಗಿದೆ. ಇದಕ್ಕಾಗಿಯೇ 12 ಹಾಲಿ ಸಂಸದರನ್ನು ಬದಲಾಯಿಸಿದ್ದಾರೆ. ಆಪರೇಷನ್ ಕಮಲ ಮಾಡಿ ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದವರ ಜತೆಗೆ ಈಗ ನೆಂಟಸ್ಥನ ಮಾಡಿಕೊಂಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದ ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ, ಶಿಡ್ಲಘಟ್ಟದ ನಾಯಕ ಪುಟ್ಟ ಆಂಜನಪ್ಪ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಕಾಂಗ್ರೆಸ್ ಪಕ್ಷ ಸೇರಿದ ನಂತರ ಹಳಬರು, ಹೊಸಬರು ಎನ್ನುವ ತಾರತಮ್ಯ ನಮ್ಮಲ್ಲಿಲ್ಲ. 50 ವರ್ಷ ಪಕ್ಷ ಕಟ್ಟಿರುವವರು ಮತ್ತು ಹೊಸಬರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಕೆಲಸವನ್ನು ನಾವು, ನೀವು ಎಲ್ಲರೂ ಸೇರಿ ಮಾಡಬೇಕು. ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಒಟ್ಟಾಗಿ ಹೋಗಬೇಕು” ಎಂದು ಇದೇ ವೇಳೆ ಡಿಸಿಎಂ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಸ್ತ ಎನ್ನುವುದು ಕೇವಲ ಗುರುತಲ್ಲ, ಇದು ರೈತರ ನೇಗಿಲು ಹಿಡಿಯುವ ಹಸ್ತ, ಕಾರ್ಮಿಕರ ಶ್ರಮದ ಹಸ್ತ, ಮಹಿಳೆಯರ ಶಕ್ತಿಯ ಹಸ್ತ, ಯುವಕರ ಭವಿಷ್ಯದ ಹಸ್ತ. ಹಸ್ತ ಈ ದೇಶ ಮತ್ತು ಜನರ ಶಕ್ತಿ. ಕಾಂಗ್ರೆಸ್ ಎಂದರೆ ಹಲವು ನದಿಗಳ ಸಂಗಮ. ಕಾಂಗ್ರೆಸ್ ಪಕ್ಷ ಪವಿತ್ರವಾದ ದೇವಸ್ಥಾನ. ನಾವೆಲ್ಲಾ ಈ ದೇಶವನ್ನು ಕಾಪಾಡಲು ಈ ದೇವಸ್ಥಾನದಲ್ಲಿ ಸೇರಿದ್ದೇವೆ. ನೀವು ಈಶ್ವರ, ವೆಂಕಟೇಶ್ವರ ಹೀಗೆ ಯಾವುದೇ ದೇವಸ್ಥಾನಕ್ಕೆ ಹೋದರು ದೇವರು ಆಶೀರ್ವಾದ ಮಾಡುವುದು ಈ ಹಸ್ತದಿಂದ” ಎಂದು ಡಿ ಕೆ ಶಿವಕುಮಾರ್ ಹೇಳಿದರು.

“ಕುಮಾರಸ್ವಾಮಿ ಸರಿ ಇಲ್ಲ ಎಂದವರೇ ಕುಮಾರಸ್ವಾಮಿಯ ಬೆಂಬಲ ಬೇಕು ಎಂದು ಹೊರಟಿದ್ದಾರೆ. ಅವರ ನೀತಿ, ಸಿದ್ಧಾಂತದ ಬಗ್ಗೆ ಚರ್ಚೆ ಮಾಡುವುದು ಬೇಡ. ಎಂತಹ ನೀಚ ರಾಜಕಾರಣ ಮಾಡುತ್ತಿದ್ದಾರೆ ಎಂದು ಜನ ಅವರನ್ನು ನೋಡಿ ನಗುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಜಾತಿ, ನೀತಿಯ ಮಾತುಗಳು ಕೇಳಿಬರುತ್ತಿದೆ. ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವಾಗ ಎಲ್ಲಿ ಹೋಗಿತ್ತು” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

“ಕಾಂಗ್ರೆಸ್ ಪಕ್ಷ ಎಂಟು ಮಂದಿ ಒಕ್ಕಲಿಗರಿಗೆ ಟಿಕೆಟ್ ನೀಡಿದೆ. ಒಕ್ಕಲಿಗರಿಗೆ ಬಿಜೆಪಿ, ಜೆಡಿಎಸ್ ಎರಡೂ ಮಾನ್ಯತೆ ನೀಡಿಲ್ಲ. ಒಂದೇ ಕುಟುಂಬದ ಮೂರು ಮಂದಿ ದಳ ಮತ್ತು ಬಿಜೆಪಿಯಿಂದ ಚುನಾವಣೆ ಎದುರಿಸುತ್ತಿದ್ದಾರೆ. ಭವಿಷ್ಯದಲ್ಲಿ ದಳ ಎಲ್ಲಿರುತ್ತದೆ ಗೊತ್ತಿಲ್ಲ. ದೇವೇಗೌಡರು ತಮ್ಮ ಅಳಿಯನನ್ನೇ ಬಿಜೆಪಿಯಿಂದ ನಿಲ್ಲಿಸಿದ ಮೇಲೆ ದಳದ ಚಿಹ್ನೆ ಮತ್ತು ಆ ಪಕ್ಷಕ್ಕೆ ಬೆಲೆಯೇ ಇಲ್ಲದಂತಾಗಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬರಗಾಲಕ್ಕೆ ಬರಲಿಲ್ಲ, ಪರಿಹಾರ ಕೊಡಲಿಲ್ಲ, ಓಡೋಡಿ ಬರುತ್ತಿದ್ದಾರೆ ಓಟಿಗಾಗಿ!

“ಕೋಲಾರ ಮತ್ತು ಚಿಕ್ಕಬಳ್ಳಾಪುರವನ್ನು ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಎರಡು ಕ್ಷೇತ್ರದಲ್ಲಿ ಇಬ್ಬರು ಯುವಕರಿಗೆ ಅವಕಾಶ ನೀಡಿದ್ದೇವೆ. ಅವರಿಗೆ ಹಣ ಬೇಕಾಗಿಲ್ಲ, ಜನಸೇವೆ ಮಾಡಲು ನಿಮ್ಮ ಬೆಂಬಲ ಬೇಕಾಗಿದೆ. ಒಗ್ಗಟ್ಟಿನಿಂದ ಎಲ್ಲರು ಹೊಸ ಮುಖಗಳ ಗೆಲುವಿಗೆ ಶ್ರಮಿಸಬೇಕು. ಎಂ.ಎಸ್.ರಾಮಯ್ಯ ಅವರ ಕುಟುಂಬ ಶಿಕ್ಷಣ, ಆರೋಗ್ಯ, ಧರ್ಮ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದೆ. ಈ ಕುಟುಂಬವನ್ನು ಜಾತಿ ಮೇಲೆ ತೀರ್ಮಾನ ಮಾಡಬಾರದು. ಪಕ್ಷ ಮತ್ತು ಸಿದ್ಧಾಂತದ ಆಧಾರದ ಮೇಲೆ ತೀರ್ಮಾನ ಮಾಡಬೇಕು” ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...