ಚುನಾವಣೆ 2023 | ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ; 52 ಹೊಸ ಮುಖಗಳಿಗೆ ಮಣೆ

Date:

ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕಡೆಗೂ ಬಿಡುಗಡೆಯಾಗಿದೆ. ಎರಡು ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದ ಬಿಜೆಪಿ, ಅದರಂತೆ ತನ್ನ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ರಿಲೀಸ್ ಮಾಡಿದೆ.

ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ. ದೆಹಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಪಟ್ಟಿ ಬಿಡುಗಡೆ ಮಾಹಿತಿ ನೀಡಿದರು.

ಮೊದಲ ಬಾರಿಗೆ ಉತ್ತರ ಪ್ರದೇಶ ಮಾದರಿಯನ್ನು ರಾಜ್ಯಕ್ಕೆ ತಂದಿರುವ ಬಿಜೆಪಿ 52 ಹೊಸ ಮುಖಗಳಿಗೆ ಮನ್ನಣೆ ಹಾಕಿದೆ. ಗೆಲ್ಲುವ ಹಾಗೂ ಭ್ರಷ್ಟಾಚಾರ ರಹಿತ ಮುಖಗಳಿಗೆ ಪಕ್ಷ ಮಣೆ ಹಾಕಿ ಕ್ಲೀನ್ ಇಮೇಜ್ ಕಾಪಾಡಿಕೊಳ್ಳುವತ್ತ ಕಮಲಪಕ್ಷ ಗಮನ ಹರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಓಬಿಸಿ ಸಮಾಜಕ್ಕೆ 32, ಎಸ್‌ಸಿ 30, ಎಸ್‌ಟಿ 16 ಟಿಕೆಟ್‌ ನೀಡಿದೆ. ಹಾಗೆಯೇ ಎಂಟು ಮಂದಿ ಮಹಿಳೆಯರಿಗೆ ಟಿಕೆಟ್‌ ಘೋಷಿಸಲಾಗಿದೆ. 5 ವಕೀಲರು, 9 ವೈದ್ಯರು, ಶಿಕ್ಷಣ ತಜ್ಞರು 3, ನಿವೃತ್ತ ಐಎಎಸ್‌ ಅಧಿಕಾರಿ 1, ಐಪಿಎಸ್‌ ಅಧಿಕಾರಿ ಒಬ್ಬರಿಗೆ ಅವಕಾಶ ನೀಡಲಾಗಿದೆ.

ಪಟ್ಟಿ ಬಿಡುಗಡೆಗೂ ಮುನ್ನ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, “ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಸುಮಾರು 25 ಸಾವಿರ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇವೆ” ಎಂದರು.

ಟಿಕೆಟ್‌ ವಿವರ

ಶಿಗ್ಗಾಂವಿ ಕ್ಷೇತ್ರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕಾರಿಪುರಕ್ಕೆ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಸೇರಿದಂತೆ ಶಶಿಕಲಾ ಜೊಲ್ಲೆ, ಬಾಲಚಂದ್ರ ಜಾರಕಿಹೊಳಿ, ಗೋವಿಂದ ಕಾರಜೋಳ, ದುರ್ಯೋದನ ಐಹೊಳೆ, ಹಾಲಪ್ಪ ಆಚಾರ್‌, ಪಿ ರಾಜೀವ್‌, ಅನಿಲ್‌ ಮೆಣಸಿನಕಾಯಿ, ಸಿ ಸಿ ಪಾಟೀಲ್‌, ಶಂಕರ್‌ ಪಾಟೀಲ್‌ ಮುನೇನಕೊಪ್ಪ, ಎಂ ಆರ್‌ ಪಾಟೀಲ್‌ , ಅಮೃತ ದೇಸಾಯಿ, ಕ್ರಾಂತಿ ಕಿರಣ್‌, ಅರವಿಂದ್‌ ಬೆಲ್ಲದ್‌, ಸುನೀಲ್‌ ಹೆಗಡೆ, ಸುರೇಶ್‌ ನಾಯ್ಕ್‌ , ವಿಶ್ವೇಶ್ವರ್‌ ಹೆಗಡೆ ಕಾಗೇರಿ, ರಮೇಶ್‌ ಜಾರಕಿಹೋಳಿ, ಅಭಯ್‌ ಪಾಟೀಲ್‌ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ.

ಕಂಪ್ಲಿ- ಸುರೇಶ್‌ ಬಾಬು, ಬಳ್ಳಾರಿ- ಬಿ ಶ್ರೀರಾಮುಲು, ಸಂಡೂರು- ಶಿಲ್ಪಾ ನಾಗೇಂದ್ರ, ಮೊಳಕಾಲ್ಮೂರು- ತಿಪ್ಪೇಸ್ವಾಮಿ ಸೇರಿದಂತೆ ಉಳಿದ ಕ್ಷೇತ್ರಗಳಲ್ಲಿ ಅನಿಲ್‌ ಕುಮಾರ್‌, ತಿಪ್ಪಾರಡ್ಡಿ, ಎಂ ಚಂದ್ರಪ್ಪ, ಪೂರ್ಣಿಮಾ ಶ್ರೀನಿವಾಸ್‌, ಎಂ ಪಿ ರೇಣುಕಾಚಾರ್ಯ, ಬಿ ಪಿ ಹರೀಶ್‌, ಆರಗ ಜ್ಷಾನೇಂದ್ರ, ಕುಮಾರ್‌ ಬಂಗಾರಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ.

ಬಿಜೆಪಿ ಪಟ್ಟಿ ಈ ಕೆಳಗಿನಂತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...