ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ: ಕಾರ್ಯಕರ್ತರ ನೆರವಿಗಾಗಿ ಸಹಾಯವಾಣಿ ಆರಂಭಿಸಿದ ಬಿಜೆಪಿ

Date:

  • 24 ಗಂಟೆ ಕಾರ್ಯಾಚರಣೆ ನಡೆಸಲಿರುವ ಬಿಜೆಪಿ ಸಹಾಯವಾಣಿ
  • ಸಹಾಯವಾಣಿ ಕಾರ್ಯಾಚರಣೆಗೆ 100 ಜನ ವಕೀಲರ ಸಹಯೋಗ

ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆಸಿದ್ದು, ಅದನ್ನು ಎದುರಿಸಲು ಬಿಜೆಪಿ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ ಸ್ಥಾಪಿಸಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ತಿಳಿಸಿದರು.

ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಹೆಲ್ಪ್ ಲೈನ್‌ ಉದ್ಘಾಟಿಸಿ ಮಾತನಾಡಿದ ತೇಜಸ್ವಿ ಸೂರ್ಯ, ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ, ನಮ್ಮ ಪರವಾಗಿ ಕೆಲಸ ಮಾಡುವವರ ಮೇಲೆ ರಾಜಕೀಯ ದ್ವೇಷದ ರಾಜಕೀಯ ಮಾಡುವ ಮುನ್ಸೂಚನೆ ಸಿಕ್ಕಿದೆ ಎಂದರು.

ಈ ಹಿನ್ನೆಲೆಯಲ್ಲಿ ಬಿಜೆಪಿ ಕಾನೂನು ಪ್ರಕೋಷ್ಟ 100 ವಕೀಲರ ತಂಡವು ಸಹಾಯವಾಣಿಗಾಗಿ ಕಾರ್ಯ ನಿರ್ವಹಿಸಲಿದೆ. ಸದನದ ಒಳಗೆ ಮತ್ತು ಹೊರಗೆ ಇಂತಹ ದೌರ್ಜನ್ಯದ ವಿರುದ್ಧ ಹೋರಾಟ ಸಂಘಟಿಸಲು ಪಕ್ಷದ ವತಿಯಿಂದ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತೇಜಸ್ವಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋರಾಟದ ಮೂಲಕವೇ ಬಿಜೆಪಿ ಬೆಳೆದುಬಂದಿದೆ. ಈ ಪಕ್ಷದ ದಮನ ಇವತ್ತಿನದಲ್ಲ. ಇಂತಹ ದ್ವೇಷವನ್ನು ಎದುರಿಸಿಯೇ ನಮ್ಮ ಪಕ್ಷ ಮುಂದುವರಿದಿದೆ. ಪಕ್ಷ ಅನ್ಯಾಯ, ಅವ್ಯವಸ್ಥೆ ವಿರುದ್ಧ ಹೋರಾಟ ಮುಂದುವರೆಯಲಿದೆ. ಈ ವೇಳೆ ದೌರ್ಜನ್ಯ ನಡೆದರೆ, ಸುಳ್ಳು ಕೇಸು ಹಾಕಿದರೆ ಸಹಾಯವಾಣಿ(18003091907) ಸಂಖ್ಯೆಗೆ ಕರೆ ಮಾಡಿ ಎಂದು ತಿಳಿಸಿದರು.ತೇಜಸ್ವಿ ಸೂರ್ಯ

ಬಿಜೆಪಿ ಕಾರ್ಯಕರ್ತರ ಒಳಿತು ಮತ್ತು ಅವರ ಹಕ್ಕುಗಳ ರಕ್ಷಣೆಯ ದೃಷ್ಟಿಯಿಂದ ಈ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ. ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಹೈಕೋರ್ಟ್ ಪೀಠವಿರುವ ಎಲ್ಲ ಜಾಗಗಳಲ್ಲಿ ಕಾನೂನು ಪ್ರಕೋಷ್ಠದ ಕಾರ್ಯಕರ್ತರು ಮತ್ತು ವಕೀಲರ ತಂಡದ ರಚನೆ ಆಗಿದೆ ಎಂದು ಸೂರ್ಯ ಹೇಳಿದರು.

ನಮ್ಮ ಕಾರ್ಯಕರ್ತರು ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರೆ ಅವರು ಕೆಲಸ ಕಳೆದುಕೊಳ್ಳುವಂತೆ ಮಾಡುವ ಪ್ರಯತ್ನ ಹಿಂದೆ ಆಗಿತ್ತು ಎಂದು ಆರೋಪಿಸಿದರು. ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಆದಾಗ ಎಫ್ಐಆರ್ ನೋಂದಣಿ ವೇಳೆ ವಿಳಂಬ ಮಾಡಲಾಗುತ್ತಿತ್ತು. ದೋಷಾರೋಪ ಪಟ್ಟಿ ಸಲ್ಲಿಸುವಾಗ ಅದನ್ನು ಸಮರ್ಪಕವಾಗಿ ಸಲ್ಲಿಸುತ್ತಿರಲಿಲ್ಲ ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ?: ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್‌ ಗಿರಿಗೆ ಅಂತ್ಯ ಹಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

ಹಬ್ಬಗಳ ಮೆರವಣಿಗೆಗೂ ಅವಕಾಶ ಇಲ್ಲ

ಸಂವಿಧಾನದಲ್ಲಿ ರಾಜಕೀಯ ಪಕ್ಷಕ್ಕೆ ಕೊಟ್ಟ ಅವಕಾಶದಂತೆ ನಡೆದುಕೊಂಡರೂ ಸುಳ್ಳು ಕೇಸು ಹಾಕಿದ್ದರು. ಗಣಪತಿ ಹಬ್ಬ, ಯುಗಾದಿ, ರಾಮನವಮಿ, ಹನುಮ ಜಯಂತಿಯ ಸಂದರ್ಭದಲ್ಲೂ ಮೆರವಣಿಗೆಗೆ ಅವಕಾಶ ಕೊಟ್ಟಿರಲಿಲ್ಲ. ಆಗಲೂ ಕೋರ್ಟಿಗೆ ಹೋಗಿ ಅನುಮತಿ ಪಡೆದು ರ್‍ಯಾಲಿ, ಮೆರವಣಿಗೆ, ಶೋಭಾಯಾತ್ರೆ ಮಾಡಬೇಕಾದ ಪರಿಸ್ಥಿತಿ ಬಂದಿತ್ತು ಎಂದು ತೇಜಸ್ವಿ ಸೂರ್ಯ ಅವರು ಆರೋಪಿಸಿದರು.

ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ಬಳಿಕ ಕಾನೂನಾತ್ಮಕವಾಗಿ ನಮ್ಮ ಕಾರ್ಯಕರ್ತರನ್ನು ಕಟ್ಟಿ ಹಾಕುವ ಕೆಲಸಕ್ಕೆ ಮುಂದಾಗಿದೆ. ಮಂತ್ರಿ ಸಹಿತವಾಗಿ ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಕಾರ್ಯಕರ್ತರಿಗೆ ಧಮ್ಕಿ ಹಾಕುತ್ತಿದ್ದಾರೆ. ಇವೆಲ್ಲದಕ್ಕೆ ಉತ್ತರವಾಗಿ ಈ ಸಹಾಯವಾಣಿ ಸ್ಥಾಪನೆಯಾಗಿದೆ, ಇದು ದಿನದ 24 ಗಂಟೆ ಕೆಲಸ ಮಾಡಲಿದೆ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...