ಯುಎಸ್-ಅಮೆರಿಕ ಒಪ್ಪಂದ | ಬಿಜೆಪಿ ಮತ್ತೆ ರೈತರ ಮೇಲೆ ದಾಳಿ ಮಾಡುತ್ತಿದೆ: ಅಖಿಲೇಶ್ ಆಕ್ರೋಶ

Date:

ಭಾರತ ಮತ್ತು ಅಮೆರಿಕ (ಮೋದಿ-ಟ್ರಂಪ್) ನಡುವೆ ನಡೆದಿರುವ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. “ಬಿಜೆಪಿ ನೇತೃತ್ವದ ಸರ್ಕಾರವು ಮತ್ತೆ ರೈತರ ಮೇಲೆ ದಾಳಿ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಮೋದಿ-ಟ್ರಂಪ್ ಮಾತುಕತೆಯಲ್ಲಿ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಅಮೆರಿಕವು 50%ನಿಂದ 18%ಗೆ ಇಳಿಸುವುದಾಗಿಯೂ, ಅಮೆರಿಕದ ಮೇಲಿನ ಸುಂಕವನ್ನು ಭಾರತವು ಶೂನ್ಯಕ್ಕೆ (0%) ಇಳಿಸುವುದಾಗಿ ನಿರ್ಧರಿಸಲಾಗಿದೆ ಎಂದು ಅಮೆರಿಕ-ಭಾರತ ಹೇಳಿಕೊಂಡಿವೆ. ಈ ಬೆನ್ನಲ್ಲೇ, ಸರ್ಕಾರದ ವಿರುದ್ಧ ಅಖಿಲೇಶ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಮೆರಿಕದ ಕೃಷಿ ಉತ್ಪನ್ನಗಳಿಗೆ ಭಾರತೀಯ ಮಾರುಕಟ್ಟೆಗಳನ್ನು ಮುಕ್ತವಾಗಿ ತೆರೆಯುವುದು ಕೃಷಿಯನ್ನು ಅವಲಂಬಿಸಿರುವ ದೇಶದ ಸುಮಾರು 70% ಜನಸಂಖ್ಯೆಗೆ ಮಾಡಿದ ‘ದ್ರೋಹ’ವಾಗಿದೆ. ಬಿಜೆಪಿ ಮತ್ತು ಅದರ ಸಹವರ್ತಿಗಳು ಸ್ವಾತಂತ್ರ್ಯಕ್ಕೆ ಮುಂಚೆಯೇ ವಿದೇಶಿ ಹಿತಾಸಕ್ತಿಗಳ ಏಜೆಂಟರಾಗಿದ್ದರು. ಇಂದು ಕೂಡ ಅದೇ ರೀತಿ ಮುಂದುವರಿಯುತ್ತಿದ್ದಾರೆ” ಎಂದು ಯಾದವ್ ಪ್ರತಿಪಾದಿಸಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೃಷಿ ಮಾರುಕಟ್ಟೆಯಲ್ಲಿ ವಿದೇಶಗಳಿಗೆ ತೆರೆಯುವ ಇಂತಹ ನೀತಿಗಳು ರೈತರಿಗೆ ಹಾನಿ ಮಾಡುವುದಲ್ಲದೆ, ಆಹಾರಧಾನ್ಯಗಳು ಮತ್ತು ಕೃಷಿ ಉತ್ಪನ್ನಗಳಲ್ಲಿ ಲಾಭಕೋರತನವನ್ನು ಹೆಚ್ಚಿಸುತ್ತವೆ. ಹೊಸ ದಲ್ಲಾಳಿ ವರ್ಗವನ್ನು ಸೃಷ್ಟಿಸುವ ಮೂಲಕ ಕೆಳಮಧ್ಯಮ ವರ್ಗ ಮತ್ತು ಮಧ್ಯಮ ವರ್ಗದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ. ಇದು ಬೆಲೆ ಏರಿಕೆಗೆ ಕಾರಣವಾಗುತ್ತದೆ” ಎಂದು ಯಾದವ್ ಹೇಳಿದ್ದಾರೆ.

“ಈ ಕ್ರಮಗಳು ರೈತರ ಆದಾಯವನ್ನು ಕ್ರಮೇಣ ಕಡಿಮೆ ಮಾಡುತ್ತವೆ. ಶ್ರೀಮಂತ ವ್ಯಕ್ತಿಗಳು ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ತಮ್ಮ ಭೂಮಿಯನ್ನು ಮಾರಾಟ ಮಾಡಲು ರೈತರನ್ನು ಒತ್ತಾಯಿಸುತ್ತವೆ. ಭೂಮಿಯನ್ನು ಕಬಳಿಸುವುದೇ ಬಿಜೆಪಿ ಮತ್ತು ಅದರ ಸಹವರ್ತಿಗಳ ಅಂತಿಮ ಉದ್ದೇಶವಾಗಿದೆ” ಎಂದು ಅವರು ಆರೋಪಿಸಿದ್ದಾರೆ.

“ಉದ್ದೇಶಿತ ಬೀಜ ಮಸೂದೆಯು (Seed Bill) ಭಾರತೀಯ ಕೃಷಿಗೆ ಮಾರಕ. ಇದು ಬಿಜೆಪಿ ಸರ್ಕಾರದ ರೈತ ವಿರೋಧಿ ಮನಸ್ಥಿತಿಯನ್ನು ಪ್ರತಿನಿಧಿಸುತ್ತದೆ. ಆಡಳಿತಾರೂಢ ಪಕ್ಷವು ಬಿಜೆಪಿ) ಭೂಸ್ವಾಧೀನ ಕಾಯ್ದೆಗಳನ್ನು ತರುತ್ತಿದೆ. ಪ್ರತಿ ವರ್ಷ ಜನರನ್ನು ರಸಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡುವ ಮೂಲಕ ಅವಮಾನಿಸುತ್ತಿದೆ. ಬೀಜಗಳು, ಕೀಟನಾಶಕಗಳು, ಶೇಖರಣಾ ಘಟಕಗಳು, ಬೆಳೆ ವಿಮೆ ಹಾಗೂ ಕೃಷಿ ವ್ಯಾಪಾರಗಳಲ್ಲಿ ಕಾರ್ಪೊರೇಟ್ ಹಿತಾಸಕ್ತಿಗಳನ್ನು ಉತ್ತೇಜಿಸುತ್ತಿದೆ” ಎಂದು ಅಖಿಲೇಶ್ ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಕೇರಳದಲ್ಲಿ ಕುಂಭಮೇಳ ರಾಜಕಾರಣ!

ಬಿಜೆಪಿ ಕಾರ್ಪೊರೇಟ್ ಸಂಸ್ಥೆಗಳಿಂದ ದೇಣಿಗೆಯನ್ನು ಕೂಡ ಸಂಗ್ರಹಿಸುತ್ತದೆ. ಈ ಬೃಹತ್ ಒಪ್ಪಂದದಿಂದ ಬಿಜೆಪಿ ನಾಯಕರು ಎಷ್ಟು ‘ಕಮಿಷನ್’ ಗಳಿಸಿದ್ದಾರೆ ಎಂಬುದನ್ನು ಸಾರ್ವಜನಿಕರಿಗೆ ಸರ್ಕಾರ ವಿವರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಈಗಾಗಲೇ, ಬೀಡಾಡಿ ದನಗಳಂತಹ ಸಮಸ್ಯೆಗಳಿಂದ ತೊಂದರೆಗೀಡಾಗಿರುವ ರೈತರು ಇನ್ನು ಮುಂದೆ ಸರ್ಕಾರದ ಕ್ರಮಗಳನ್ನು ಸಹಿಸುವುದಿಲ್ಲ. ಬಿಜೆಪಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಸಂಘಟಿತ ಪ್ರತಿರೋಧಕ್ಕೆ ರೈತರು ಮತ್ತು ನಾಗರಿಕರು ಸಿದ್ದರಾಗಬೇಕು. ಬಿಜೆಪಿ ಹಠಾವೋ, ಹೊಲ, ಕೃಷಿ ಮತ್ತು ರೈತರ ಬಚಾವೋ ಆಂದೋಲನ ನಡೆಸಬೇಕಿದೆ” ಎಂದು ಕರೆಕೊಟ್ಟಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...